AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಚಿವ ಸಂಪುಟವು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 21, 2021 | 9:12 PM

Share

2021-22ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ್ದ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಂಸತ್ತಿಗೆ ಮಂಗಳವಾರ ತಿಳಿಸಲಾಗಿದೆ. 2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯತಂತ್ರ ಹಿಂತೆಗೆತ ನೀತಿಯನ್ನು ಅನುಮೋದಿಸುವ ಉದ್ದೇಶವನ್ನು ಸರ್ಕಾರ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಖಾಸಗಿ ಬಂಡವಾಳ, ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯನ್ನು ಸಕ್ರಿಯಗೊಳಿಸುವುದು ನೀತಿಯ ಉದ್ದೇಶ ಒಳಗೊಂಡಿದೆ ಎಂದು ಸಚಿವೆ ಹೇಳಿದ್ದಾರೆ.

“ಹೂಡಿಕೆ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಗಣನೆಯನ್ನು ಈ ಉದ್ದೇಶಕ್ಕಾಗಿ ಗೊತ್ತುಪಡಿಸಿದ ಸಂಪುಟ ಸಮಿತಿಗೆ/ ಸಂಪುಟಕ್ಕೆ ವಹಿಸಲಾಗಿದೆ. ಸಂಪುಟ ಸಮಿತಿ/ ಸಂಪುಟ ಈ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡಿಲ್ಲ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಡಿಸೆಂಬರ್ 23ರಂದು ಕೊನೆಗೊಳ್ಳುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಪಟ್ಟಿ ಮಾಡಲಾಗಿದೆ.

ಇದನ್ನೂ ಓದಿ: Bank strike: ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ಡಿ. 16, 17ಕ್ಕೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?