AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಚಿವ ಸಂಪುಟವು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 21, 2021 | 9:12 PM

Share

2021-22ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ್ದ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಂಸತ್ತಿಗೆ ಮಂಗಳವಾರ ತಿಳಿಸಲಾಗಿದೆ. 2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯತಂತ್ರ ಹಿಂತೆಗೆತ ನೀತಿಯನ್ನು ಅನುಮೋದಿಸುವ ಉದ್ದೇಶವನ್ನು ಸರ್ಕಾರ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಖಾಸಗಿ ಬಂಡವಾಳ, ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯನ್ನು ಸಕ್ರಿಯಗೊಳಿಸುವುದು ನೀತಿಯ ಉದ್ದೇಶ ಒಳಗೊಂಡಿದೆ ಎಂದು ಸಚಿವೆ ಹೇಳಿದ್ದಾರೆ.

“ಹೂಡಿಕೆ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಗಣನೆಯನ್ನು ಈ ಉದ್ದೇಶಕ್ಕಾಗಿ ಗೊತ್ತುಪಡಿಸಿದ ಸಂಪುಟ ಸಮಿತಿಗೆ/ ಸಂಪುಟಕ್ಕೆ ವಹಿಸಲಾಗಿದೆ. ಸಂಪುಟ ಸಮಿತಿ/ ಸಂಪುಟ ಈ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡಿಲ್ಲ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಡಿಸೆಂಬರ್ 23ರಂದು ಕೊನೆಗೊಳ್ಳುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಪಟ್ಟಿ ಮಾಡಲಾಗಿದೆ.

ಇದನ್ನೂ ಓದಿ: Bank strike: ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ಡಿ. 16, 17ಕ್ಕೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು