AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ವಿಶ್ವ ಬ್ಯಾಂಕ್​ ಅಧ್ಯಕ್ಷರನ್ನು ಭೇಟಿಯಾಗಿ ವಿವಿಧ ವಿಚಾರ ಚರ್ಚಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಮೆರಿಕ ಪ್ರವಾಸದಲ್ಲಿ ಇದ್ದು, ಈ ವೇಳೆ ವಿಶ್ವ ಬ್ಯಾಂಕ್ ಮುಖ್ಯಸ್ಥರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆ ಬಗ್ಗೆ ವಿವರಗಳು ಇಲ್ಲಿವೆ.

Nirmala Sitharaman: ವಿಶ್ವ ಬ್ಯಾಂಕ್​ ಅಧ್ಯಕ್ಷರನ್ನು ಭೇಟಿಯಾಗಿ ವಿವಿಧ ವಿಚಾರ ಚರ್ಚಿಸಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Oct 16, 2021 | 2:20 PM

ಕೊರೊನಾ ಬಿಕ್ಕಟ್ಟಿನ ನಂತರದ ಆರ್ಥಿಕ ಚೇತರಿಕೆ, ಕೊವಿಡ್-19 ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಪ್ರಮುಖ ಪಾತ್ರ ಮತ್ತು ಮುಂಬರುವ ಹವಾಮಾನ ಬದಲಾವಣೆ ಸಮಾವೇಶದ ಸಿದ್ಧತೆಗಳ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಬ್ಯಾಂಕ್ ಅಧ್ಯಕ್ಷರಾದ ಡೇವಿಡ್ ಮಾಲ್ಪಾಸ್ ಅವರನ್ನು ಭೇಟಿಯಾಗಿ, ಚರ್ಚಿಸಿದರು. ನಿರ್ಮಲಾ ಸೀತಾರಾಮನ್ ಶುಕ್ರವಾರ ವಾಷಿಂಗ್ಟನ್ ಡಿಸಿಯಲ್ಲಿ ಇರುವ ವಿಶ್ವ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಮಾಲ್ಪಾಸ್ ಅವರನ್ನು ಭೇಟಿ ಮಾಡಿದರು. ”ಎರಡೂ ಕಡೆಯಿಂದ #COVID #ಲಸಿಕೆ, #ಆರ್ಥಿಕ ಚೇತರಿಕೆ, #CoP26ಗೆ ಸಿದ್ಧತೆಗಳು, #WBGಯ ಭಾರತಕ್ಕೆ ಸಾಲ ನೀಡುವ ಅವಕಾಶವನ್ನು ಹೆಚ್ಚಿಸಲು ಉಪಕ್ರಮ, IDA20 ಮರುಪೂರಣ, @WorldBankನೊಂದಿಗಿನ ಜ್ಞಾನ ಪಾಲುದಾರಿಕೆ,” ಬಗ್ಗೆ ಟ್ವೀಟ್‌ಗಳನ್ನು ಮಾಡಲಾಗಿದೆ.

ಜಾಗತಿಕ ಕೊವಿಡ್ -19ಗೆ ಸಂಬಂಧಿಸಿದಂತೆ ಭಾರತ ವಹಿಸಿದ ಪ್ರಮುಖ ಪಾತ್ರವನ್ನು ಒಳಗೊಂಡಂತೆ ಕೊವಿಡ್ -19 ಎರಡನೇ ಅಲೆ ಹರಡುವುದನ್ನು ತಡೆಯಲು ಭಾರತ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ನಿರ್ಮಲಾ ಸೀತಾರಾಮನ್ ಅವರು ಭೇಟಿಯ ವೇಳೆ ಹಂಚಿಕೊಂಡರು ಎಂದು ಸಚಿವಾಲಯ ತಿಳಿಸಿದೆ. ಅಭಿವೃದ್ಧಿಗೆ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸಲು ಭಾರತಕ್ಕೆ ಸಾಲ ನೀಡುವ ಪ್ರಮಾಣವನ್ನು ಹೆಚ್ಚಿಸಿದ ವಿಶ್ವ ಬ್ಯಾಂಕ್ ಸಮೂಹದ ಕ್ರಮಕ್ಕಾಗಿ ನಿರ್ಮಲಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲ್ಯಾಬ್‌ನಿಂದ ಫೀಲ್ಡ್‌ಗೆ ವರ್ಗಾಯಿಸಬೇಕಾದ ತಂತ್ರಜ್ಞಾನಗಳು ಮತ್ತು ಕಡಿಮೆ ಇಂಗಾಲದ ಬೆಳವಣಿಗೆಯ ಉದ್ದೇಶಿತ ಜಾಗತಿಕ ಸಂಶೋಧನೆ ಅಗತ್ಯ ಇರುವ ತಂತ್ರಜ್ಞಾನಗಳ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಸಚಿವರು ಉಲ್ಲೇಖಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು “ಲೈಟ್ ಹೌಸ್ ಇಂಡಿಯಾ, #ಟೆಕ್ನಾಲಜಿ ಮತ್ತು #ಹಣಕಾಸು ವಲಯದ ಸುಧಾರಣೆಗಳು ಮತ್ತು #WBGಯೊಂದಿಗಿನ ಜ್ಞಾನದ ಪಾಲುದಾರಿಕೆಯನ್ನು ಬಲಪಡಿಸಲು #ಮೂಲಸೌಕರ್ಯ ವಲಯದ ಮೇಲೆ ವಿಶೇಷ ಗಮನ ಕೇಂದ್ರೀಕರಿಸುವುದು ಸೇರಿದಂತೆ ಮೂರು ಸಲಹೆಗಳನ್ನು ಪ್ರಮುಖವಾಗಿ ಗಮನ ಸೆಳೆದಿದ್ದಾರೆ,” ಎಂದು ಅದು ಹೇಳಿದೆ. ಇದಕ್ಕೂ ಮುನ್ನ ವಿಶ್ವಬ್ಯಾಂಕ್‌ನ ಅಭಿವೃದ್ಧಿ ಸಮಿತಿಯನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಭಾರತವು ಕೊವಿಡ್ -19 ಬಿಕ್ಕಟ್ಟನ್ನು ಅತ್ಯಂತ ದೃಢವಾಗಿ ಮತ್ತು ಧೈರ್ಯದಿಂದ ಎದುರಿಸಿದ್ದು ಮಾತ್ರವಲ್ಲದೆ ಜಾಗತಿಕವಾಗಿ ಕೊರೊನಾ ಬಿಕ್ಕಟ್ಟಿನ ಹೋರಾಟದಲ್ಲಿ ಕೈ ಜೋಡಿಸಿದೆ,” ಎಂದಿದ್ದಾರೆ.

ಸರ್ಕಾರವು ಕೈಗೊಂಡ ಕ್ರಮಗಳು ದೇಶದ ನಿರಂತರ ಆರ್ಥಿಕ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕಿಕೊಟ್ಟಿದೆ ಎಂದಿರುವ ಸಚಿವೆ, ಭಾರತ ಸರ್ಕಾರವು ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜತೆಗೆ, ಬಿಕ್ಕಟ್ಟನ್ನು ಒಂದು ಅವಕಾಶವಾಗಿ ಪರಿವರ್ತಿಸಲು ಮತ್ತು ಪ್ರಬಲವಾಗಿ ಹೊರಹೊಮ್ಮಲು ಗಮನಾರ್ಹವಾದ ರಚನಾತ್ಮಕ ಸುಧಾರಣೆಗಳನ್ನು ಕೈಗೊಂಡಿದೆ ಎಂದಿದ್ದಾರೆ. ಗ್ಲಾಸ್ಗೊದಲ್ಲಿ ನಡೆಯಲಿರುವ ಮುಂಬರುವ ಹವಾಮಾನ ಬದಲಾವಣೆ ಸಮಾವೇಶದ ಸಿದ್ಧತೆಗಳ ಬಗ್ಗೆ ಸಚಿವೆ ಚರ್ಚಿಸಿದ್ದಾರೆ. ಅಲ್ಲಿಂದ ಅವರು ಭಾರತಕ್ಕೆ ಹಿಂತಿರುಗುವ ಮೊದಲು ಉದ್ಯಮ ಸಮುದಾಯದೊಂದಿಗೆ ಸಂವಾದ ನಡೆಸಲು ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಒಂದು ವಾರದ ಪ್ರವಾಸವನ್ನು ಬೋಸ್ಟನ್‌ನಿಂದ ಆರಂಭಿಸಿದ್ದಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್​ನಲ್ಲಿನ ಸಭೆಗಳ ಜೊತೆಗೆ ನಿರ್ಮಲಾ ಸೀತಾರಾಮನ್ 25ಕ್ಕೂ ಹೆಚ್ಚು ದ್ವಿಪಕ್ಷೀಯ ಚರ್ಚೆಗಳನ್ನು ನಿಗದಿ ಮಾಡಿಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Nirmala Sitharaman In US: ಭಾರತದಲ್ಲಿ ಹೂಡಿಕೆ ಮಾಡಲು ಅಮೆರಿಕದ ಸಿಇಒಗಳಿಗೆ ನಿರ್ಮಲಾ ಸೀತಾರಾಮನ್ ಆಹ್ವಾನ

ವಿದ್ವಾಂಸರೂ ಪ್ರಭಾವಿತರಾಗುವುದು ಚಿಂತೆಗೀಡು ಮಾಡಿದೆ:  ಅಮರ್ತ್ಯ ಸೇನ್ ಅಭಿಪ್ರಾಯಗಳಿಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ