AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cryptocurrency: ಅಕ್ರಮ ಹಣ ವರ್ಗಾವಣೆ, ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವಿಗಾಗಿ ಕ್ರಿಪ್ಟೋಕರೆನ್ಸಿ ಬಳಕೆ ಎಂದ ಕೇಂದ್ರ ಹಣಕಾಸು ಸಚಿವೆ

ಕ್ರಿಪ್ಟೋಕರೆನ್ಸಿಯನ್ನು ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದಕ್ಕೆ ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Cryptocurrency: ಅಕ್ರಮ ಹಣ ವರ್ಗಾವಣೆ, ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವಿಗಾಗಿ ಕ್ರಿಪ್ಟೋಕರೆನ್ಸಿ ಬಳಕೆ ಎಂದ ಕೇಂದ್ರ ಹಣಕಾಸು ಸಚಿವೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Updated By: Srinivas Mata|

Updated on: Apr 19, 2022 | 7:08 PM

Share

ಭಾರತದಲ್ಲಿ ಈಗಾಗಲೇ ಅನಿಶ್ಚಿತವಾಗಿರುವ ಕ್ರಿಪ್ಟೋಕರೆನ್ಸಿ (Cryptocurrency) ಮಾರುಕಟ್ಟೆಯ ಮೇಲೆ ಮತ್ತಷ್ಟು ಅನುಮಾನಗಳನ್ನು ಮೂಡುವಂತೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್ 18ರಂದು ಸೋಮವಾರ ಮಾತನಾಡಿ, ಕ್ರಿಪ್ಟೋಕರೆನ್ಸಿಯ ಸುತ್ತ ಇರುವ ದೊಡ್ಡ ಅಪಾಯವೆಂದರೆ ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವಿನ ಸಾಧ್ಯತೆ ಎಂದಿದ್ದಾರೆ. ನಿರ್ಮಲಾ ಸೀತಾರಾಮನ್ ಹೇಳಿದಂತೆ, “ಎಲ್ಲ ಬಗೆಯಿಂದಲೂ ಸಕಲ ದೇಶಗಳಿಗೆ ದೊಡ್ಡ ಅಪಾಯವೆಂದರೆ ಅಕ್ರಮ ಹಣ ವರ್ಗಾವಣೆ ಮತ್ತು ಅಂತಹ ಕರೆನ್ಸಿ ಭಯೋತ್ಪಾದನೆಗೆ ಹಣಕಾಸು ಒದಗಿಸುವ ಅಂಶವಾಗಿದೆ.” ಅಂದಹಾಗೆ ಅವರು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಸೆಮಿನಾರ್‌ನಲ್ಲಿ ಮಾತನಾಡಿದರು. “ತಂತ್ರಜ್ಞಾನವನ್ನು ಬಳಸುವ ನಿಯಂತ್ರಣವು ಒಂದೇ ಉತ್ತರವೆಂದು ನಾನು ಭಾವಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

ಡಿಜಿಟಲ್ ಜಗತ್ತಿನಲ್ಲಿ ಭಾರತದ ಕಾರ್ಯಕ್ಷಮತೆ ಮತ್ತು ಕಳೆದ ದಶಕದಲ್ಲಿ ಡಿಜಿಟಲ್ ಮೂಲಸೌಕರ್ಯ ಚೌಕಟ್ಟನ್ನು ನಿರ್ಮಿಸಲು ಸರ್ಕಾರದ ಪ್ರಯತ್ನಗಳನ್ನು ನಿರ್ಮಲಾ ಸೀತಾರಾಮನ್ ಎತ್ತಿ ತೋರಿಸಿದ್ದು, ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ ಡಿಜಿಟಲ್ ಅಳವಡಿಕೆ ದರದ ಹೆಚ್ಚಳವನ್ನು ಒತ್ತಿಹೇಳಿದ್ದಾರೆ. “ನಾನು 2019ರ ಡೇಟಾವನ್ನು ಬಳಸಿದರೆ ಭಾರತದಲ್ಲಿ ಡಿಜಿಟಲ್ ಅಳವಡಿಕೆ ದರವು ಸುಮಾರು ಶೇ 85 ಆಗಿದೆ. ಆದರೆ ಜಾಗತಿಕವಾಗಿ ಅದೇ ವರ್ಷ ಇದು ಕೇವಲ ಶೇ 64ರ ಸಮೀಪದಲ್ಲಿದೆ. ಆದ್ದರಿಂದ ಸಾಂಕ್ರಾಮಿಕ ಸಮಯವು ನಿಜವಾಗಿ ನಮಗೆ ಪರೀಕ್ಷಿಸಲು ಮತ್ತು ಅದನ್ನು ಸಾಬೀತುಪಡಿಸಲು ಸಹಾಯ ಮಾಡಿದೆ. ಸಾಮಾನ್ಯ ಜನರು ಇದನ್ನು ಬಳಸಬಹುದು, ಮತ್ತು ಬಳಕೆ ವಾಸ್ತವವಾಗಿ ಸಾಬೀತಾಗಿದೆ,” ಎಂದು ಕೇಂದ್ರ ಸಚಿವೆ ಪ್ರತಿಪಾದಿಸಿದ್ದಾರೆ.

ಕ್ರಿಪ್ಟೋಕರೆನ್ಸಿ ಅಥವಾ ಬ್ಲಾಕ್‌ಚೈನ್ ಮತ್ತು ಫಿನ್‌ಟೆಕ್‌ ವಿಚಾರಕ್ಕೆ ಬಂದಾಗ ಭಾರತವು ಎಲ್ಲ ಆಯ್ಕೆಗಳನ್ನು ಕೊನೆಗೊಳಿಸುತ್ತಿಲ್ಲ ಎಂದು ಮಾರ್ಚ್‌ನಲ್ಲಿ ನಡೆದ ಇಂಡಿಯಾ ಟುಡೇ ಸಮಾವೇಶದಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಭಾರತದಲ್ಲಿ ಕ್ರಿಪ್ಟೋಕರೆನ್ಸಿ ನಿಯಮಾವಳಿಗಳ ರಚನೆಯ ಬಗ್ಗೆ ಎಲ್ಲ ವಿವರಗಳನ್ನು ಒದಗಿಸುವ ವಿಷಯದ ಕುರಿತು ಸಂಪುಟ ಟಿಪ್ಪಣಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. “ಖಂಡಿತವಾಗಿಯೂ ಸುಪ್ರೀಂ ಕೋರ್ಟ್ ಕ್ರಿಪ್ಟೋಕರೆನ್ಸಿಯ ಬಗ್ಗೆ ಕಾಮೆಂಟ್ ಮಾಡಿದೆ ಮತ್ತು ಆರ್‌ಬಿಐ ಅಧಿಕೃತ ಕ್ರಿಪ್ಟೋಕರೆನ್ಸಿಯ ಮೇಲೆ ಕರೆ ನೀಡಬಹುದಾದರೂ ನಮ್ಮ ಕಡೆಯಿಂದ ಎಲ್ಲ ಆಯ್ಕೆಗಳನ್ನು ಕೊನೆಗೊಳಿಸುತ್ತಿಲ್ಲ ಎಂಬುದು ನಮಗೆ ಸ್ಪಷ್ಟವಾಗಿದೆ,” ಎಂದು ಅವರು ಹೇಳಿದ್ದರು.

2022ರ ಬಜೆಟ್‌ನಲ್ಲಿ ಘೋಷಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರತದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಪ್ರಾರಂಭಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಕ್ರಿಪ್ಟೋ ಆಸ್ತಿಗಳ ಮೇಲಿನ ತೆರಿಗೆಯನ್ನು ಮೊದಲು ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  Taxation On Cryptocurrency: ಕ್ರಿಪ್ಟೋಕರೆನ್ಸಿ ವಹಿವಾಟಿನ ತೆರಿಗೆ ಲೆಕ್ಕಾಚಾರ ಹೇಗೆ? ಇಲ್ಲಿದೆ ಉದಾಹರಣೆ ಸಹಿತ ಮಾಹಿತಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ