AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Government Schemes: 2021ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಮುಖ ಯೋಜನೆಗಳಿವು

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2021ನೇ ಇಸವಿಯಲ್ಲಿ ಜಾರಿಗೊಳಿಸಿದ ಪ್ರಮುಖ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಈ ಲೇಖನದಲ್ಲಿದೆ.

Central Government Schemes: 2021ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಮುಖ ಯೋಜನೆಗಳಿವು
ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 23, 2021 | 9:25 PM

Share

2014ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹಲವಾರು ಕಲ್ಯಾಣ ಯೋಜನೆಗಳನ್ನು ತರಲಾಗಿದೆ. ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಸರ್ಕಾರದಿಂದ ಇನ್ನಷ್ಟು ಯೋಜನೆಗಳನ್ನು ಆರಂಭಿಸುವುದಕ್ಕೆ ಒತ್ತಡ ಸೃಷ್ಟಿಯಾಯಿತು. ಜನಸಾಮಾನ್ಯರಿಗೆ ಆರ್ಥಿಕ ಹಾಗೂ ವೈಯಕ್ತಿಕ ಹೊರೆಯನ್ನು ಇಳಿಸಿಕೊಳ್ಳಲು ಈ ಯೋಜನೆಗಳ ಮೂಲಕ ನೆರವಾಯಿತು. ಸಮಾಜದ ವಿವಿಧ ಸ್ತರದ ಜನರಿಗೆ ಅನುಕೂಲ ಆಗುವಂತೆ ಯೋಜನೆಗಳನ್ನು ತರಲಾಯಿತು. 2021ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಜಾರಿಯಾದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ (PMGKP) ಇನ್ಷೂರೆನ್ಸ್ ಯೋಜನೆ ಈ ವರ್ಷದ ಜೂನ್​ನಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ಇನ್ಷೂರೆನ್ಸ್ ಯೋಜನೆಯನ್ನು ಕೊವಿಡ್19 ವಿರುದ್ಧ ಹೋರಾಡುವ ಆರೋಗ್ಯ ಸಿಬ್ಬಂದಿಗೆ ವಿಸ್ತರಿಸಿತು. ಏಪ್ರಿಲ್ 24, 2021ರಿಂದ ಸನ್ವಯ ಆಗುವಂತೆ ಒಂದು ವರ್ಷಗಳ ಕಾಲ ವಿಸ್ತರಿಸಲಾಯಿತು. 2020ರ ಮಾರ್ಚ್​ನಲ್ಲಿ ಆರೋಗ್ಯ ಸಿಬ್ಬಂದಿ ಕುಟುಂಬಕ್ಕಾಗಿ ಕೇವಲ 90 ದಿನಗಳಿಗಾಗಿ ತರಲಾಯಿತು. ವೈಯಕ್ತಿಕ ಅಪಘಾತಕ್ಕಾಗಿ 50 ಲಕ್ಷ ರೂಪಾಯಿ ಪರಿಹಾರವನ್ನು ಒದಗಿಸಿತ್ತು. ಈ ಯೋಜನೆಯು ಎಲ್ಲ ಆರೋಗ್ಯ ಸಿಬ್ಬಂದಿಗೆ, ಸಮುದಾಯ ಆರೋಗ್ಯ ಸಿಬ್ಬಂದಿಗೆ ಮತ್ತು ಖಾಸಗಿ ಆರೋಗ್ಯ ಸಿಬ್ಬಂದಿಗೆ ಅನ್ವಯಿಸುತ್ತದೆ.

ಪಿಎಂ ಮೆಂಟರಿಂಗ್ ಯುವ ಸ್ಕೀಮ್ ಈ ಯೋಜನೆಯು 2021ರ ಆಗಸ್ಟ್​ನಲ್ಲಿ ಆರಂಭವಾಯಿತು. ಭಾರತದ ಯುವಜನರಲ್ಲಿ ಕೌಶಲಾಭಿವೃದ್ಧಿಗೆ ತರಬೇತಿ ನೀಡುವ ಯೋಜನೆ ಇದಾಗಿದೆ. ಪ್ರಧಾನಮಂತ್ರಿ ಯುವ ಯೋಜನೆ (ಯುವ ಉದ್ಯಮಿತಾ ವಿಕಾಸ ಯೋಜನಾ) ಗುರಿ ಏನೆಂದರೆ, ಉದ್ಯಮಶೀಲತೆ ಅಭಿವೃದ್ಧಿಗೆ ಎಕೋಸಿಸ್ಟಮ್ ಸಕ್ರಿಯಗೊಳಿಸುವುದು. ಅದು ಕೂಡ ಉದ್ಯಮಶೀಲತೆ ಶಿಕ್ಷಣ ಹಾಗೂ ತರಬೇತಿ ಮೂಲಕವಾಗಿ.

ಇ-ಶ್ರಮ್ ಪೋರ್ಟಲ್ ಅಸಂಘಟಿತ ವ;ಯದ ಕಾರ್ಮಿಕರು ಮತ್ತು ದಿನಗೂಲಿ ನೌಕರರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರ್ಕಾರವು ಈ ವರ್ಷದ ಆಗಸ್ಟ್​ 26ರಂದು ಇ-ಶ್ರಮ್ ಪೋರ್ಟಲ್ ಆರಂಭಿಸಿತು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಷ್ಟ್ರೀಯ ಡೇಟಾಬೇಸ್ ಜಾರಿ ತಂದಿದ್ದು, ಕಾರ್ಮಿಕರ ಸಚಿವಾಲಯದಿಂದ ವಿಶಿಷ್ಟ ಗುರುತಿನ ಸಂಖ್ಯೆ (UAN) ಕಾರ್ಡ್ ಪಡೆಯುತ್ತಾರೆ. ಇಲ್ಲಿಯ ತನಕ 12 ಕೋಟಿ ಜನರು ಈ ಕಾರ್ಯಕ್ರಮದ ಅಡಿಯಲ್ಲಿ ನೋಂದಣಿ ಆಗಿದ್ದಾರೆ ಎಂಬುದು ದತ್ತಾಂಶದಿಂದ ತಿಳಿಯುತ್ತದೆ.

ಅಕಡೆಮಿಕ್ ಬ್ಯಾಂಕ್ಸ್ ಆಫ್ ಕ್ರೆಡಿಟ್ (ABC) ಯೋಜನೆ ಈ ಯೋಜನೆಯು ಶಿಕ್ಷಣ ಸಚಿವಾಲಯದಿಂದ ಆರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮೊಬಿಲಿಟಿ ಒದಗಿಸುವುದು ಇದರ ಉದ್ದೇಶ. ದೇಶದ ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗೆ ಸೂಕ್ತವಾದ “ಕ್ರೆಡಿಟ್ ಟ್ರಾನ್ಸ್​ಫರ್” ಮೂಲಕ ಒಂದರಿಂದ ಮತ್ತೊಂದಕ್ಕೆ ಬದಲಿಸಿಕೊಳ್ಳುವ ವ್ಯವಸ್ಥೆ ಇದು. ವಿದ್ಯಾರ್ಥಿಗಳಿಗೆ ಇದಕ್ಕೆ ಸ್ವಾತಂತ್ರ್ಯ ಇರುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ ಜತೆಗೆ ಈ ವರ್ಷದ ಜುಲೈನಲ್ಲಿ ಇದು ಆರಂಭವಾಯಿತು.

ಗ್ರಾಮ ಉಜಾಲ ಯೋಜನಾ ಗ್ರಾಮೀಣ ಜನರಿಗೆ ಅನುಕೂಲ ಆಗುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಯಿತು. ಉನ್ನತ ಗುಣಮಟ್ಟದ ವಿದ್ಯುತ್ ಅನ್ನು ಭಾರತದಾದ್ಯಂತ ಹಳ್ಳಿಗಳಿಗೆ ಒದಗಿಸಬೇಕು ಎಂಬ ಉದ್ದೇಶ ಈ ಯೋಜನೆ ಅಡಿಯಲ್ಲಿ ಇದೆ. ಈ ನೀತಿಯಲ್ಲಿ ಎನರ್ಜಿ ಎಫಿಶಿಯೆನ್ಸಿ ಸರ್ವೀಸಸ್ ಲಿಮಿಟೆಡ್​ (EESL) ಮೂಲಕ ಗ್ರಾಮೀಣ ಜನರಿಗೆ ಒಂದು ಎಲ್​ಇಡಿ ಬಲ್ಬ್​ಗೆ 10 ರೂಪಾಯಿಯಂತೆ ಮಾರಾಟ ಮಾಡುತ್ತದೆ.

ಪಿಎಂ ಉಮೀದ್ ಯೋಜನೆ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗಾಗಿ ಪಿಎಂ ಉದ್ಯಮ ಮಿತ್ರ ಇದನ್ನು 2021ರ ಏಪ್ರಿಲ್​ನಲ್ಲಿ ಆರಂಭಿಸಲಾಯಿತು. 2025ರಿಂದ 2026ರೊಳಗೆ 3 ಲಕ್ಷದಷ್ಟು ಯುವ ಉದ್ಯಮಿಗಳಿಗೆ ಕೌಶಲ ತರಬೇತಿ ನೀಡಬೇಕು ಎಂಬ ಉದ್ದೇಶ ಈ ಯೋಜನೆಗೆ ಇದೆ. ಯುವ ಜನರಿಗೆ ಸಾಲವನ್ನು ಒದಗಿಸುತ್ತದೆ ಮತ್ತು ಉದ್ಯೋಗ ಒದಗಿಸುವ ಸಲುವಾಗಿ ಸೂಕ್ತ ಮಾರುಕಟ್ಟೆಯೊಂದಿಗೆ ಸಂಪರ್ಕ ಕಲ್ಪಿಸುತ್ತದೆ.

ಇದನ್ನೂ ಓದಿ: PLI Scheme: ಪಿಎಲ್​ಐ ಯೋಜನೆ ಅಡಿ ಸೆಮಿಕಂಡಕ್ಟರ್​ಗೆ 76 ಸಾವಿರ ಕೋಟಿ ರೂ. ಕೇಂದ್ರ ಸಂಪುಟ ಅನುಮೋದನೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?