Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀನ್ ಹೈಡ್ರೋಜನ್ ವಾಹನ ಬಳಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಲಹೆ; ಏನಿದು ಗ್ರೀನ್ ಹೈಡ್ರೋಜನ್?

ಯಾವುದೇ ಅಳುಕಿಲ್ಲದಂತೆ ಹಸಿರು ಹೈಡ್ರೋಜನ್ ವಾಹನಗಳನ್ನು ಬಳಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜನರಿಗೆ ಸಲಹೆ ನೀಡಿದ್ದಾರೆ.

ಗ್ರೀನ್ ಹೈಡ್ರೋಜನ್ ವಾಹನ ಬಳಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಲಹೆ; ಏನಿದು ಗ್ರೀನ್ ಹೈಡ್ರೋಜನ್?
ಕೇಂದ್ರ ಸಚಿವ ನಿತಿನ್ ಗಡ್ಕರಿ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Dec 03, 2021 | 4:27 PM

ಕೇಂದ್ರ ಸಚಿವ ನಿತಿನ್ ಗಡ್ಕರಿ ದೇಶದ ಸಾರಿಗೆ, ಸಂಚಾರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸುತ್ತಿದ್ದಾರೆ. 2030ನೇ ಇಸವಿಯೊಳಗೆ ದೇಶದಲ್ಲಿ ಶೇ 30ರಷ್ಟು ವಾಹನಗಳು ಎಲೆಕ್ಟ್ರಿಕ್ ವಾಹನಗಳಾಗಿರಬೇಕು ಎಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈಗ ಕೊಳಚೆ ನೀರು, ಘನತ್ಯಾಜ್ಯದಿಂದ ಉತ್ಪಾದಿಸುವ ಗ್ರೀನ್ ಹೈಡ್ರೋಜನ್​ನಿಂದ ಕಾರುಗಳು ಚಲಿಸುವಂತೆ ಮಾಡಲು ನಿತಿನ್ ಗಡ್ಕರಿ ಯೋಜನೆ ಮಾಡಿದ್ದಾರೆ. ಈಗಾಗಲೇ ನಿತಿನ್ ಗಡ್ಕರಿ ಅವರೇ ಗ್ರೀನ್ ಹೈಡ್ರೋಜನ್ ಕಾರ್ ಅನ್ನು ಖರೀದಿಸಿದ್ದಾರೆ.

“ತ್ಯಾಜ್ಯದಿಂದ ಮೌಲ್ಯವನ್ನು ಸೃಷ್ಟಿಸಲು” ಯೋಜನೆ ಮಾಡಲಾಗಿದೆ. ದೇಶದ ವಿವಿಧ ನಗರಗಳಲ್ಲಿ ಬಸ್ಸುಗಳು, ಟ್ರಕ್ ಮತ್ತು ಕಾರುಗಳನ್ನು ಓಡಿಸಲು ಗ್ರೀನ್ ಹೈಡ್ರೋಜನ್ ಅನ್ನು ಬಳಸಲು ಯೋಜಿಸುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಅವರೇ ಹೇಳಿದ್ದಾರೆ. ಹಣಕಾಸು ಸೇರ್ಪಡೆ ಕುರಿತ ಆರನೇ ರಾಷ್ಟ್ರೀಯ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ನಿತಿನ್‌ ಗಡ್ಕರಿ, “ನಗರಗಳಲ್ಲಿ ಒಳಚರಂಡಿ ನೀರು ಮತ್ತು ಘನತ್ಯಾಜ್ಯವನ್ನು ಬಳಸಿ ಉತ್ಪಾದಿಸುವ ಹಸಿರು ಹೈಡ್ರೋಜನ್‌ನಲ್ಲಿ ಬಸ್‌ಗಳು, ಟ್ರಕ್‌ಗಳು ಮತ್ತು ಕಾರುಗಳನ್ನು ಓಡಿಸುವ ಯೋಜನೆಯನ್ನು ನಾವು ಹೊಂದಿದ್ದೇವೆ,” ಎಂದು ಹೇಳಿದ್ದಾರೆ.

ತ್ಯಾಜ್ಯ ನೀರಿನಿಂದ ಹೊರತೆಗೆಯಲಾದ ಹೈಡ್ರೋಜನ್‌ನಲ್ಲಿ ವಾಹನಗಳು ಚಲಿಸಬಹುದು ಎಂದು “ಜನರಲ್ಲಿ ನಂಬಿಕೆ ಮೂಡಿಸುವ” ಪ್ರಯತ್ನದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದ್ದಾರೆ. “ನಾನು ಫರಿದಾಬಾದ್‌ನ ತೈಲ ಸಂಶೋಧನಾ ಸಂಸ್ಥೆಯಲ್ಲಿ ಉತ್ಪಾದಿಸುವ ಹಸಿರು ಹೈಡ್ರೋಜನ್‌ನಿಂದ ಚಲಿಸುವ ಪೈಲಟ್ ಪ್ರಾಜೆಕ್ಟ್ ಕಾರನ್ನು ಖರೀದಿಸಿದ್ದೇನೆ. ಜನರಲ್ಲಿ ನಂಬಿಕೆ ಮೂಡಿಸಲು ನಗರದಲ್ಲಿ ಗ್ರೀನ್ ಹೈಡ್ರೋಜನ್​ನಿಂದ ಚಲಿಸುವ ಕಾರಿನಲ್ಲಿ ಪ್ರಯಾಣ ಮಾಡುತ್ತೇನೆ,” ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ:  2 ವರ್ಷಗಳಲ್ಲಿ ಪೆಟ್ರೋಲ್ ವಾಹನ- ಎಲೆಕ್ಟ್ರಿಕ್ ಕಾರುಗಳ ಬೆಲೆ ಒಂದೇ ಆಗಲಿದೆ; ಸಚಿವ ನಿತಿನ್ ಗಡ್ಕರಿ

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ