AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀನ್ ಹೈಡ್ರೋಜನ್ ವಾಹನ ಬಳಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಲಹೆ; ಏನಿದು ಗ್ರೀನ್ ಹೈಡ್ರೋಜನ್?

ಯಾವುದೇ ಅಳುಕಿಲ್ಲದಂತೆ ಹಸಿರು ಹೈಡ್ರೋಜನ್ ವಾಹನಗಳನ್ನು ಬಳಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜನರಿಗೆ ಸಲಹೆ ನೀಡಿದ್ದಾರೆ.

ಗ್ರೀನ್ ಹೈಡ್ರೋಜನ್ ವಾಹನ ಬಳಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಲಹೆ; ಏನಿದು ಗ್ರೀನ್ ಹೈಡ್ರೋಜನ್?
ಕೇಂದ್ರ ಸಚಿವ ನಿತಿನ್ ಗಡ್ಕರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 03, 2021 | 4:27 PM

Share

ಕೇಂದ್ರ ಸಚಿವ ನಿತಿನ್ ಗಡ್ಕರಿ ದೇಶದ ಸಾರಿಗೆ, ಸಂಚಾರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸುತ್ತಿದ್ದಾರೆ. 2030ನೇ ಇಸವಿಯೊಳಗೆ ದೇಶದಲ್ಲಿ ಶೇ 30ರಷ್ಟು ವಾಹನಗಳು ಎಲೆಕ್ಟ್ರಿಕ್ ವಾಹನಗಳಾಗಿರಬೇಕು ಎಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈಗ ಕೊಳಚೆ ನೀರು, ಘನತ್ಯಾಜ್ಯದಿಂದ ಉತ್ಪಾದಿಸುವ ಗ್ರೀನ್ ಹೈಡ್ರೋಜನ್​ನಿಂದ ಕಾರುಗಳು ಚಲಿಸುವಂತೆ ಮಾಡಲು ನಿತಿನ್ ಗಡ್ಕರಿ ಯೋಜನೆ ಮಾಡಿದ್ದಾರೆ. ಈಗಾಗಲೇ ನಿತಿನ್ ಗಡ್ಕರಿ ಅವರೇ ಗ್ರೀನ್ ಹೈಡ್ರೋಜನ್ ಕಾರ್ ಅನ್ನು ಖರೀದಿಸಿದ್ದಾರೆ.

“ತ್ಯಾಜ್ಯದಿಂದ ಮೌಲ್ಯವನ್ನು ಸೃಷ್ಟಿಸಲು” ಯೋಜನೆ ಮಾಡಲಾಗಿದೆ. ದೇಶದ ವಿವಿಧ ನಗರಗಳಲ್ಲಿ ಬಸ್ಸುಗಳು, ಟ್ರಕ್ ಮತ್ತು ಕಾರುಗಳನ್ನು ಓಡಿಸಲು ಗ್ರೀನ್ ಹೈಡ್ರೋಜನ್ ಅನ್ನು ಬಳಸಲು ಯೋಜಿಸುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಅವರೇ ಹೇಳಿದ್ದಾರೆ. ಹಣಕಾಸು ಸೇರ್ಪಡೆ ಕುರಿತ ಆರನೇ ರಾಷ್ಟ್ರೀಯ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ನಿತಿನ್‌ ಗಡ್ಕರಿ, “ನಗರಗಳಲ್ಲಿ ಒಳಚರಂಡಿ ನೀರು ಮತ್ತು ಘನತ್ಯಾಜ್ಯವನ್ನು ಬಳಸಿ ಉತ್ಪಾದಿಸುವ ಹಸಿರು ಹೈಡ್ರೋಜನ್‌ನಲ್ಲಿ ಬಸ್‌ಗಳು, ಟ್ರಕ್‌ಗಳು ಮತ್ತು ಕಾರುಗಳನ್ನು ಓಡಿಸುವ ಯೋಜನೆಯನ್ನು ನಾವು ಹೊಂದಿದ್ದೇವೆ,” ಎಂದು ಹೇಳಿದ್ದಾರೆ.

ತ್ಯಾಜ್ಯ ನೀರಿನಿಂದ ಹೊರತೆಗೆಯಲಾದ ಹೈಡ್ರೋಜನ್‌ನಲ್ಲಿ ವಾಹನಗಳು ಚಲಿಸಬಹುದು ಎಂದು “ಜನರಲ್ಲಿ ನಂಬಿಕೆ ಮೂಡಿಸುವ” ಪ್ರಯತ್ನದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದ್ದಾರೆ. “ನಾನು ಫರಿದಾಬಾದ್‌ನ ತೈಲ ಸಂಶೋಧನಾ ಸಂಸ್ಥೆಯಲ್ಲಿ ಉತ್ಪಾದಿಸುವ ಹಸಿರು ಹೈಡ್ರೋಜನ್‌ನಿಂದ ಚಲಿಸುವ ಪೈಲಟ್ ಪ್ರಾಜೆಕ್ಟ್ ಕಾರನ್ನು ಖರೀದಿಸಿದ್ದೇನೆ. ಜನರಲ್ಲಿ ನಂಬಿಕೆ ಮೂಡಿಸಲು ನಗರದಲ್ಲಿ ಗ್ರೀನ್ ಹೈಡ್ರೋಜನ್​ನಿಂದ ಚಲಿಸುವ ಕಾರಿನಲ್ಲಿ ಪ್ರಯಾಣ ಮಾಡುತ್ತೇನೆ,” ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ:  2 ವರ್ಷಗಳಲ್ಲಿ ಪೆಟ್ರೋಲ್ ವಾಹನ- ಎಲೆಕ್ಟ್ರಿಕ್ ಕಾರುಗಳ ಬೆಲೆ ಒಂದೇ ಆಗಲಿದೆ; ಸಚಿವ ನಿತಿನ್ ಗಡ್ಕರಿ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?