AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕುಗಳಿಗೆ ಹೊರೆ ತಗ್ಗಿಸಲು ಯುಪಿಐ ವಹಿವಾಟುಗಳಿಗೆ ಮತ್ತೆ ಎಂಡಿಆರ್ ದರ ಜಾರಿಗೆ ತರಲು ಸರ್ಕಾರ ಯೋಜನೆ

Merchant Discount Rate on UPI transactions: ಮೂರು ಸಾವಿರ ರೂಗಿಂತ ಹೆಚ್ಚಿನ ಮೌಲ್ಯದ ಯುಪಿಐ ಹಣ ಪಾವತಿಗೆ ಮರ್ಚೆಂಟ್ ಡಿಸ್ಕೌಂಟ್ ರೇಟ್ ಹೇರಿಕೆ ಮಾಡುವ ಸಾಧ್ಯತೆ ಇದೆ. ಭಾರೀ ಸಂಖ್ಯೆಯಲ್ಲಿ ಯುಪಿಐ ವಹಿವಾಟು ನಡೆಯುತ್ತಿರುವುದು ಬ್ಯಾಂಕುಗಳಿಗೆ ಹೊರೆಯಾಗುತ್ತಿದೆ. ಇದನ್ನು ತಪ್ಪಿಸಲು ಎಂಡಿಆರ್ ಮತ್ತೆ ತರಬಹುದು. ಸದ್ಯ ಪೇಮೆಂಟ್ ಕೌನ್ಸಿಲ್ ಶೇ. 0.3ರಷ್ಟು ಎಂಡಿಆರ್ ತರುವ ಸಲಹೆ ನೀಡಿರುವುದು ತಿಳಿದುಬಂದಿದೆ.

ಬ್ಯಾಂಕುಗಳಿಗೆ ಹೊರೆ ತಗ್ಗಿಸಲು ಯುಪಿಐ ವಹಿವಾಟುಗಳಿಗೆ ಮತ್ತೆ ಎಂಡಿಆರ್ ದರ ಜಾರಿಗೆ ತರಲು ಸರ್ಕಾರ ಯೋಜನೆ
ಯುಪಿಐ ವಹಿವಾಟು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 11, 2025 | 7:00 PM

ಮುಂಬೈ, ಜೂನ್ 11: ಭಾರತದಲ್ಲಿ ಡಿಜಿಟಲ್ ವಹಿವಾಟು ಗಣನೀಯವಾಗಿ ಹೆಚ್ಚುತ್ತಿದೆ. ಅದರಲ್ಲೂ ಯುಪಿಐ ಸೌಲಭ್ಯ ಬಂದ ಬಳಿಕ ಡಿಜಿಟಲ್ ವಹಿವಾಟು ಸ್ಫೋಟಗೊಂಡಿದೆ. ಶೇ. 80ರಷ್ಟು ಡಿಜಿಟಲ್ ವಹಿವಾಟುಗಳು ಯುಪಿಐ ಮೂಲಕ ಆಗುತ್ತಿದೆ. ಭಾರೀ ಪ್ರಮಾಣದ ವಹಿವಾಟುಗಳನ್ನು ನಿರ್ವಹಿಸುವುದು ಬ್ಯಾಂಕುಗಳಿಗೆ ಬಹಳ ದೊಡ್ಡ ಹೊರೆಯಾಗಿ ಹೋಗಿದೆ. ಯುಪಿಐ ವಹಿವಾಟುಗಳ ಮೇಲೂ ಮರ್ಚೆಂಡ್ ಡಿಸ್ಕೌಂಟ್ ರೇಟ್ ವಿಧಿಸಲು ಅನುಮತಿಸುವಂತೆ ಬ್ಯಾಂಕುಗಳು ಸರ್ಕಾರವನ್ನು ಕೇಳುತ್ತಿವೆ. ಸರ್ಕಾರವು ದೊಡ್ಡ ಪ್ರಮಾಣದ ಯುಪಿಐ ವಹಿವಾಟಿಗೆ ಎಂಡಿಆರ್​​ಗೆ ಅನುಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎನ್​​ಡಿಟಿವಿ ಈ ಬಗ್ಗೆ ಮಾಡಿದ ವರದಿ ಪ್ರಕಾರ, ಮೂರು ಸಾವಿರ ರೂಗಿಂತ ಹೆಚ್ಚಿನ ಮೌಲ್ಯದ ವಹಿವಾಟಿಗೆ ಎಂಡಿಆರ್ ವಿಧಿಸುವ ನಿರ್ಧಾರಕ್ಕೆ ಚಿಂತನೆ ನಡೆದಿರುವುದು ತಿಳಿದುಬಂದಿದೆ.

ಏನಿದು ಮರ್ಚೆಂಟ್ ಡಿಸ್ಕೌಂಟ್ (ಎಂಡಿಆರ್) ರೇಟ್?

ವ್ಯಾಪಾರಿ ಬಳಿ ಗ್ರಾಹಕ ವ್ಯವಹಾರ ನಡೆಸಿ ಡಿಜಿಟಲ್ ಆಗಿ ಹಣ ಪಾವತಿಸಿದಾಗ ಬ್ಯಾಂಕುಗಳು ಮರ್ಚೆಂಡ್ ಡಿಸ್ಕೌಂಟ್ ರೇಟ್ ವಿಧಿಸುತ್ತವೆ. ಇದು ವರ್ತಕ ಅಥವಾ ವ್ಯಾಪಾರಿಗೆ ಬ್ಯಾಂಕು ವಿಧಿಸುವ ದರ. ಎಂಡಿಆರ್ ಶೇ. 2ರಷ್ಟು ಇದೆ ಎಂದಿಟ್ಟುಕೊಂಡರೆ, ಗ್ರಾಹಕನು 1,000 ರೂ ಪಾವತಿಸಿದಾಗ ವ್ಯಾಪಾರಿಯ ಅಕೌಂಟ್​​ಗೆ 980 ರೂ ಮಾತ್ರವೇ ಹೋಗುತ್ತದೆ. ಉಳಿದ 20 ರೂ ಹಣವು ಬ್ಯಾಂಕು ಮತ್ತು ಪೇಮೆಂಟ್ ಸರ್ವಿಸ್ ಪ್ರೊವೈಡರ್ ಕಂಪನಿಗಳಿಗೆ ಹಂಚಿಕೆ ಆಗುತ್ತದೆ. ವ್ಯಾಪಾರಿಯ ಬ್ಯಾಂಕ್, ಗ್ರಾಹಕನ ಬ್ಯಾಂಕ್ ಮತ್ತು ಪೇಮೆಂಟ್ ಸರ್ವಿಸ್ ನೀಡುಗರ ಮಧ್ಯೆ ಈ ಎಂಡಿಆರ್ ಹಣ ಹಂಚಿಕೆ ಆಗುತ್ತದೆ.

ಇದನ್ನೂ ಓದಿ: ಕೈಯಲ್ಲಿ ಹಣ ನಿಲ್ಲೊಲ್ಲವಾ? ಹಣವಂತರಾಗಲು ಈ ಸಿಂಪಲ್ ಟ್ರಿಕ್ಸ್ ಉಪಯೋಗಿಸಿ

ಇಲ್ಲಿ ಡಿಜಿಟಲ್ ಪಾವತಿ ಎಂದರೆ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್​​, ಯುಪಿಐ ಮೂಲಕ ಮಾಡಲಾಗುವ ಹಣ ಪಾವತಿಯಾಗಿರುತ್ತದೆ. ಕ್ರೆಡಿಟ್ ಕಾರ್ಡ್​​ಗಳಿಗೆ ಈಗಲೂ ಎಂಡಿಆರ್ ದರ ಅನ್ವಯ ಆಗುತ್ತದೆ. ಯುಪಿಐ ಅನ್ನು ಉತ್ತೇಜಿಸುವ ದೃಷ್ಟಿಯಿಂದ ವಿನಾಯಿತಿ ನೀಡಲಾಗುತ್ತಿದೆ. ಈ ಹಿಂದೆ ದೊಡ್ಡ ಪ್ರಮಾಣದ ಯುಪಿಐ ವಹಿವಾಟುಗಳಿಗೆ ಎಂಡಿಆರ್ ಇತ್ತು. ನಂತರ ಅದನ್ನು ತೆಗೆದುಹಾಕಲಾಯಿತು. ಈಗ 3,000 ರೂಗಳಿಗಿಂತ ಹೆಚ್ಚಿನ ಮೌಲ್ಯದ ಯುಪಿಐ ವಹಿವಾಟಿಗೆ ಎಂಡಿಆರ್ ಅನ್ನು ಜಾರಿಗೆ ತರುವ ಸಾಧ್ಯತೆ ಇದೆ. ಸಣ್ಣ ವರ್ತಕರಿಗೆ ವಿನಾಯಿತಿ ಸಿಗಬಹುದು.

ಯುಪಿಐ ವಹಿವಾಟಿಗೆ ಶೇ. 0.3 ಎಂಡಿಆರ್?

ಸದ್ಯ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್​​ಗಳ ವಹಿವಾಟಿಗೆ ಎಂಡಿಆರ್ ಶೇ. 0.9ರಿಂದ ಶೇ. 2ರವರೆಗೂ ಇದೆ. ಮೂರು ಸಾವಿರ ರೂಗಿಂತ ಹೆಚ್ಚಿನ ಮೌಲ್ಯದ ಯುಪಿಐ ವಹಿವಾಟಿಗೆ ಶೇ. 0.3ರ ಎಂಡಿಆರ್ ಅನ್ನು ವಿಧಿಸಬಹುದು ಎಂದು ಪೇಮೆಂಟ್ ಕೌನ್ಸಿಲ್ ಸಲಹೆ ನೀಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉಪ್ಪಿನಿಂದ ಓಡುವ ಸ್ಕೂಟರ್​​ಗಳು, ಅಗ್ಗವೂ ಹೌದು, ಪರಿಸರಪೂರಕವೂ ಹೌದು; ಮುಂಚೂಣಿಯಲ್ಲಿ ಚೀನಾ, ರೇಸ್​​ನಲ್ಲಿ ಭಾರತ

ಶೇ. 0.3 ಎಂಡಿಆರ್ ಎಂದರೆ, ನೀವು 5,000 ರೂ ಯುಪಿಐ ಪಾವತಿ ಮಾಡಿದರೆ ವರ್ತಕನಿಗೆ 4,985 ರೂ ಸಂದಾಯವಾಗುತ್ತದೆ. 15 ರೂ ಕಡಿತಗೊಳಿಸಲಾಗುತ್ತದೆ. ಈ ಸಂದರ್ಭದಲ್ಲಿ ವರ್ತಕರು ತಮ್ಮ ಉತ್ಪನ್ನದ ಬೆಲೆ ಏರಿಸುವ ಸಾಧ್ಯತೆ ಇಲ್ಲದಿಲ್ಲ.

ಯುಪಿಐ ವಹಿವಾಟಿನ ಮೇಲೆ ಜಿಎಸ್​​ಟಿ ಇಲ್ಲ

ಎರಡು ಸಾವಿರ ರೂಗಿಂತ ಹೆಚ್ಚಿನ ಮೌಲ್ಯದ ಯುಪಿಐ ವಹಿವಾಟುಗಳ ಮೇಲೆ ಜಿಎಸ್​​ಟಿ ವಿಧಿಸಲು ಯೋಜಿಸಲಾಗುತ್ತಿದೆ ಎನ್ನುವ ಸುದ್ದಿಯನ್ನು ಸರ್ಕಾರ ಅಲ್ಲಗಳೆದಿದೆ. ಅಂತಹ ಯಾವ ಆಲೋಚನೆಯೂ ಇಲ್ಲ ಎಂದಿದೆ. ಕ್ರೆಡಿಟ್ ಕಾರ್ಡ್ ವಹಿವಾಟಿಗೆ ವಿಧಿಸಲಾಗುವ ಎಂಡಿಆರ್ ಮೊತ್ತಕ್ಕೆ ಜಿಎಸ್​​ಟಿ ಹಾಕಲಾಗುತ್ತದೆ. ಈಗ 3,000 ರೂ ಮೌಲ್ಯದ ಯುಪಿಐ ವಹಿವಾಟಿಗೆ ಎಂಡಿಆರ್ ಹೇರಿಕೆ ಮಾಡಿದ್ದೇ ಆದಲ್ಲಿ, ಆ ಎಂಡಿಆರ್ ಹಣಕ್ಕೆ ಜಿಎಸ್​​ಟಿ ವಿಧಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ