AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

ಫೀಚರ್​ ಫೋನ್​ಗಾಗಿ ಯುಪಿಐ ಅನ್ನು ರಿಸರ್ವ್​ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಬಿಡುಗಡೆ ಮಾಡಿದ್ದಾರೆ.

UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Mar 08, 2022 | 2:27 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank Of India) ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾರ್ಚ್ 8ರ ಮಂಗಳವಾರದಂದು ಫೀಚರ್​ ಫೋನ್‌ಗಳಿಗಾಗಿ ಏಕೀಕೃತ ಪಾವತಿಗಳ ಇಂಟರ್​ಫೇಸ್ (UPI) ಹೊರತಂದರು. ಈ ಕ್ರಮವು ಡಿಜಿಟಲ್ ಅಳವಡಿಕೆಯನ್ನು ಹೆಚ್ಚಿಸುತ್ತದೆ ಮತ್ತು ಇದೇ ವೇಳೆ DigiSaathi ಎಂಬ ಡಿಜಿಟಲ್ ಪಾವತಿಗಾಗಿ 24×7 ಸಹಾಯವಾಣಿಯನ್ನು ಪ್ರಾರಂಭಿಸಲಾಯಿತು. “UPI 123Pay” ಗ್ರಾಹಕರಿಗೆ ಸ್ಕ್ಯಾನ್ ಮತ್ತು ಪಾವತಿ ಹೊರತುಪಡಿಸಿ ಬಹುತೇಕ ಎಲ್ಲ ವಹಿವಾಟುಗಳಿಗೆ ಫೀಚರ್ ಫೋನ್‌ಗಳನ್ನು ಬಳಸಲು ಅನುಮತಿಸುತ್ತದೆ. ವಹಿವಾಟುಗಳಿಗೆ ಇಂಟರ್​ನೆಟ್ ಸಂಪರ್ಕದ ಅಗತ್ಯವಿಲ್ಲ. ಈ ಸೌಲಭ್ಯವನ್ನು ಬಳಸಲು ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯನ್ನು ಫೀಚರ್ ಫೋನ್‌ಗಳೊಂದಿಗೆ ಲಿಂಕ್ ಮಾಡಬೇಕು.

ಸ್ಮಾರ್ಟ್‌ಫೋನ್ ಪಡೆಯಲು ಸಾಧ್ಯವಾಗದ ಗ್ರಾಮೀಣ ಪ್ರದೇಶದ ಜನರು ಯುಪಿಐ ವಹಿವಾಟುಗಳಲ್ಲಿ ಭಾಗವಹಿಸಲು ಫೀಚರ್ ಫೋನ್‌ಗಳಲ್ಲಿನ ಯುಪಿಐ ಸಹಾಯ ಮಾಡುತ್ತದೆ ಎಂದು ದಾಸ್ ಹೇಳಿದರು. “ಪ್ರಸ್ತುತ ದಶಕವು ದೇಶದಲ್ಲಿ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯಲ್ಲಿ ಪರಿವರ್ತಕ ಬದಲಾವಣೆಗೆ ಸಾಕ್ಷಿಯಾಗಲಿದೆ,” ಎಂದು ಅವರು ಹೇಳಿದರು. ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಮಾಡಲು ಆರ್‌ಬಿಐ ಕಳೆದ ಮೂರು ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಅಲ್ಲದೆ, ಸೈಬರ್ ಸುರಕ್ಷತೆಯ ಮೇಲೆ ಗಮನ ಕೇಂದ್ರೀಕರಿಸುವ ಅಗತ್ಯವನ್ನು ದಾಸ್ ಒತ್ತಿ ಹೇಳಿದರು. ಸೈಬರ್ ಅಪಾಯಗಳನ್ನು ಎದುರಿಸಲು ವ್ಯವಸ್ಥೆಗಳು ಸಿದ್ಧವಾಗಬೇಕಿದೆ ಎಂದು ಹೇಳಿದರು.

ಫೀಚರ್ ಫೋನ್‌ಗಳಲ್ಲಿ UPI ಅನ್ನು ಪರಿಚಯಿಸುವ ಯೋಜನೆಯನ್ನು ಡಿಸೆಂಬರ್‌ನಲ್ಲಿ ರಿಸರ್ವ್ ಬ್ಯಾಂಕ್ ಘೋಷಿಸಿದ ನಂತರ ಈ ಕ್ರಮವು ಬಂದಿದೆ. ಇದು 2016ರಲ್ಲಿ ಪ್ರಾರಂಭವಾದಾಗಿನಿಂದ ಸ್ಮಾರ್ಟ್‌ಫೋನ್‌ಗಳಿಗೆ ಪಾವತಿ ವೇದಿಕೆಯಾಗಿ ಸೀಮಿತವಾಗಿದೆ. ಫೀಚರ್ ಫೋನ್‌ಗಳನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಜನರಲ್ಲಿ ಅದರ ಬಳಕೆಯನ್ನು ಸೀಮಿತಗೊಳಿಸುತ್ತದೆ. 2016ರಲ್ಲಿ UPI ಪಾವತಿ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಿದಾಗಿನಿಂದ ವಹಿವಾಟುಗಳು ಬಹುಪಟ್ಟು ಬೆಳೆದಿದೆ.

ಇದನ್ನೂ ಓದಿ: ಆರ್​ಬಿಐ ವಿತ್ತೀಯ ನೀತಿ ಪ್ರಕಟ; ನಿಮ್ಮ ಹೋಂ ಲೋನ್, ಕಾರ್ ಲೋನ್, ಬ್ಯಾಂಕ್ ಎಫ್​ಡಿಗಳ ಇಎಂಐ ಮೇಲಾಗುವ ಪರಿಣಾಮಗಳೇನು?

ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ