AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

ಫೀಚರ್​ ಫೋನ್​ಗಾಗಿ ಯುಪಿಐ ಅನ್ನು ರಿಸರ್ವ್​ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಬಿಡುಗಡೆ ಮಾಡಿದ್ದಾರೆ.

UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Mar 08, 2022 | 2:27 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank Of India) ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾರ್ಚ್ 8ರ ಮಂಗಳವಾರದಂದು ಫೀಚರ್​ ಫೋನ್‌ಗಳಿಗಾಗಿ ಏಕೀಕೃತ ಪಾವತಿಗಳ ಇಂಟರ್​ಫೇಸ್ (UPI) ಹೊರತಂದರು. ಈ ಕ್ರಮವು ಡಿಜಿಟಲ್ ಅಳವಡಿಕೆಯನ್ನು ಹೆಚ್ಚಿಸುತ್ತದೆ ಮತ್ತು ಇದೇ ವೇಳೆ DigiSaathi ಎಂಬ ಡಿಜಿಟಲ್ ಪಾವತಿಗಾಗಿ 24×7 ಸಹಾಯವಾಣಿಯನ್ನು ಪ್ರಾರಂಭಿಸಲಾಯಿತು. “UPI 123Pay” ಗ್ರಾಹಕರಿಗೆ ಸ್ಕ್ಯಾನ್ ಮತ್ತು ಪಾವತಿ ಹೊರತುಪಡಿಸಿ ಬಹುತೇಕ ಎಲ್ಲ ವಹಿವಾಟುಗಳಿಗೆ ಫೀಚರ್ ಫೋನ್‌ಗಳನ್ನು ಬಳಸಲು ಅನುಮತಿಸುತ್ತದೆ. ವಹಿವಾಟುಗಳಿಗೆ ಇಂಟರ್​ನೆಟ್ ಸಂಪರ್ಕದ ಅಗತ್ಯವಿಲ್ಲ. ಈ ಸೌಲಭ್ಯವನ್ನು ಬಳಸಲು ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯನ್ನು ಫೀಚರ್ ಫೋನ್‌ಗಳೊಂದಿಗೆ ಲಿಂಕ್ ಮಾಡಬೇಕು.

ಸ್ಮಾರ್ಟ್‌ಫೋನ್ ಪಡೆಯಲು ಸಾಧ್ಯವಾಗದ ಗ್ರಾಮೀಣ ಪ್ರದೇಶದ ಜನರು ಯುಪಿಐ ವಹಿವಾಟುಗಳಲ್ಲಿ ಭಾಗವಹಿಸಲು ಫೀಚರ್ ಫೋನ್‌ಗಳಲ್ಲಿನ ಯುಪಿಐ ಸಹಾಯ ಮಾಡುತ್ತದೆ ಎಂದು ದಾಸ್ ಹೇಳಿದರು. “ಪ್ರಸ್ತುತ ದಶಕವು ದೇಶದಲ್ಲಿ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯಲ್ಲಿ ಪರಿವರ್ತಕ ಬದಲಾವಣೆಗೆ ಸಾಕ್ಷಿಯಾಗಲಿದೆ,” ಎಂದು ಅವರು ಹೇಳಿದರು. ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಮಾಡಲು ಆರ್‌ಬಿಐ ಕಳೆದ ಮೂರು ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಅಲ್ಲದೆ, ಸೈಬರ್ ಸುರಕ್ಷತೆಯ ಮೇಲೆ ಗಮನ ಕೇಂದ್ರೀಕರಿಸುವ ಅಗತ್ಯವನ್ನು ದಾಸ್ ಒತ್ತಿ ಹೇಳಿದರು. ಸೈಬರ್ ಅಪಾಯಗಳನ್ನು ಎದುರಿಸಲು ವ್ಯವಸ್ಥೆಗಳು ಸಿದ್ಧವಾಗಬೇಕಿದೆ ಎಂದು ಹೇಳಿದರು.

ಫೀಚರ್ ಫೋನ್‌ಗಳಲ್ಲಿ UPI ಅನ್ನು ಪರಿಚಯಿಸುವ ಯೋಜನೆಯನ್ನು ಡಿಸೆಂಬರ್‌ನಲ್ಲಿ ರಿಸರ್ವ್ ಬ್ಯಾಂಕ್ ಘೋಷಿಸಿದ ನಂತರ ಈ ಕ್ರಮವು ಬಂದಿದೆ. ಇದು 2016ರಲ್ಲಿ ಪ್ರಾರಂಭವಾದಾಗಿನಿಂದ ಸ್ಮಾರ್ಟ್‌ಫೋನ್‌ಗಳಿಗೆ ಪಾವತಿ ವೇದಿಕೆಯಾಗಿ ಸೀಮಿತವಾಗಿದೆ. ಫೀಚರ್ ಫೋನ್‌ಗಳನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಜನರಲ್ಲಿ ಅದರ ಬಳಕೆಯನ್ನು ಸೀಮಿತಗೊಳಿಸುತ್ತದೆ. 2016ರಲ್ಲಿ UPI ಪಾವತಿ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಿದಾಗಿನಿಂದ ವಹಿವಾಟುಗಳು ಬಹುಪಟ್ಟು ಬೆಳೆದಿದೆ.

ಇದನ್ನೂ ಓದಿ: ಆರ್​ಬಿಐ ವಿತ್ತೀಯ ನೀತಿ ಪ್ರಕಟ; ನಿಮ್ಮ ಹೋಂ ಲೋನ್, ಕಾರ್ ಲೋನ್, ಬ್ಯಾಂಕ್ ಎಫ್​ಡಿಗಳ ಇಎಂಐ ಮೇಲಾಗುವ ಪರಿಣಾಮಗಳೇನು?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ