AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI Payment: ಡಿಜಿಟಲ್ ವಹಿವಾಟಿಗೆ ಹೊಸ ಶುಲ್ಕ ಇಲ್ಲ, ಆರ್​ಬಿಐ ಪ್ರಸ್ತಾವಕ್ಕೆ ತಡೆಯೊಡ್ಡಿದ ಕೇಂದ್ರ ಸರ್ಕಾರ

‘ಪ್ರತಿ ವಹಿವಾಟಿಗೂ ಡಿಜಿಟಲ್ ಸೇವಾದಾತರಿಗೆ ಒಂದಿಷ್ಟು ಖರ್ಚು ಬರುತ್ತದೆ. ಅದನ್ನು ಬಳಕೆದಾರರೇ ತುಂಬಬೇಕು’ ಎನ್ನುವುದು ರಿಸರ್ವ್​ ಬ್ಯಾಂಕ್ ವಾದವಾಗಿತ್ತು. ಈ ಪ್ರಸ್ತಾವಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು.

UPI Payment: ಡಿಜಿಟಲ್ ವಹಿವಾಟಿಗೆ ಹೊಸ ಶುಲ್ಕ ಇಲ್ಲ, ಆರ್​ಬಿಐ ಪ್ರಸ್ತಾವಕ್ಕೆ ತಡೆಯೊಡ್ಡಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 22, 2022 | 7:19 AM

Share

ಬೆಂಗಳೂರು: ಯುಪಿಐ ಆಧರಿತ ಪೇಮೆಂಟ್​ (United Payments Interface – UPI) ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ’ ಎಂದು ಕೇಂದ್ರ ಹಣಕಾಸು ಇಲಾಖೆಯು (Union Finance Ministry) ಸ್ಪಷ್ಟಪಡಿಸಿದೆ. ಈ ಮೂಲಕ ದೊಡ್ಡಮಟ್ಟದಲ್ಲಿ ವಿವಾದವಾಗಿ ಬೆಳೆಯಬಹುದಾಗಿದ್ದ ವಿಚಾರವನ್ನು ಆರಂಭದಲ್ಲಿಯೇ ತಣ್ಣಗಾಗಿಸಿದೆ. ‘ಡಿಜಿಟಲ್ ಸೇವೆಗಳನ್ನು (Digital Transaction) ಒದದಿಸುವ ಸೇವಾದಾತರಿಗೆ ತುಸು ಖರ್ಚು ಬರುವುದು ನಿಜ. ಈ ಖರ್ಚು ಭರಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ. ಒಟ್ಟಾರೆಯಾಗಿ ಡಿಜಿಟಲ್ ವಹಿವಾಟು ಹೆಚ್ಚಾಗುವುದು ಸಮಾಜ ಹಾಗೂ ಉತ್ಪಾದಕತೆಗೆ ಹಲವು ರೀತಿಯಲ್ಲಿ ಅನುಕೂಲವಾಗಿದೆ. ಡಿಜಿಟಲ್ ಪಾವತಿಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರವು ಕಳೆದ ವರ್ಷ ಹಲವು ನೆರವು ನೀಡಿತ್ತು. ಆ ನೆರವನ್ನು ಈ ವರ್ಷವೂ ಮುಂದುವರಿಸಲಿದೆ’ ಎಂದು ಹಣಕಾಸು ಇಲಾಖೆ ಹೇಳಿದೆ.

ಡಿಜಿಟಲ್ ವಹಿವಾಟಿನ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಯುಪಿಐ ಸೇರಿದಂತೆ ವಿವಿಧ ರೀತಿಯ ಪಾವತಿ ಮತ್ತು ಸ್ವೀಕೃತಿಗಳಿಗೆ (Payments and Receipts) ಶುಲ್ಕ ವಿಧಿಸುವ ಕುರಿತು ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India – RBI) ಕರಡು ಪ್ರಸ್ತಾವವೊಂದನ್ನು ಜನರ ಮುಂದಿಟ್ಟು ಪ್ರತಿಕ್ರಿಯೆ ಆಹ್ವಾನಿಸಿತ್ತು. ‘ಪ್ರತಿ ವಹಿವಾಟಿಗೂ ಡಿಜಿಟಲ್ ಸೇವಾದಾತರಿಗೆ ಒಂದಿಷ್ಟು ಖರ್ಚು ಬರುತ್ತದೆ. ಅದನ್ನು ಬಳಕೆದಾರರೇ ತುಂಬಬೇಕು’ ಎನ್ನುವುದು ರಿಸರ್ವ್​ ಬ್ಯಾಂಕ್ ವಾದವಾಗಿತ್ತು. ಈ ಪ್ರಸ್ತಾವಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು. ‘ಡಿಜಿಟಲ್ ಆರ್ಥಿಕತೆಯಿಂದ ಹಲವು ಅನುಕೂಲ ಎಂದು ಮೂಗಿಗೆ ತುಪ್ಪ ಸವರಿದಿರಿ. ಈಗ ನೋಡಿದರೆ ನಮ್ಮ ಜೇಬಿನ ದುಡ್ಡಿನಲ್ಲಿಯೂ ಪಾಲು ಕೇಳುತ್ತಿದ್ದೀರಿ. ನಾವು ನಗದು ಚಲಾವಣೆ ಮಾಡಿಕೊಂಡೇ ನೆಮ್ಮದಿಯಾಗಿರುತ್ತೇವೆ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಜನರ ಪ್ರತಿ ಉಸಿರಿಗೆ ತೆರಿಗೆ ಹಾಕುವ ಅಪಾಯವಿದೆ: UPI ಸೇರಿ ಎಲ್ಲ ಡಿಜಿಟಲ್ ಪಾವತಿಗೆ ಶುಲ್ಕದ ಪ್ರಸ್ತಾವಕ್ಕೆ ತೀವ್ರ ವಿರೋಧ

ಡಿಬಿಟ್ ಕಾರ್ಡ್​ ಆಧರಿತ ನಗದು ವರ್ಗಾವಣೆ ಮತ್ತು ಯುಪಿಐ ಆಧರಿತ ಹಣಕಾಸಿನ ವಹಿವಾಟಿಗೆ ಆಗುತ್ತಿರುವ ವೆಚ್ಚವನ್ನು ಭರ್ತಿ ಮಾಡಿಕೊಳ್ಳುವ ದೃಷ್ಟಿಯಿಂದ ಅಲ್ಪ ಪ್ರಮಾಣದ ಶುಲ್ಕ ವಿಧಿಸುವ ಸಾಧ್ಯತೆಯನ್ನು ಪರಿಶೀಲಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಮುಂದಾಗಿತ್ತು. ಪ್ರತಿ ವಹಿವಾಟಿಗೆ ಇಂತಿಷ್ಟು ಮೊತ್ತ ಎಂದು ನಿಗದಿಪಡಿಸುವ ಸಾಧ್ಯತೆಯನ್ನೂ ಪರಿಶೀಲಿಸಲು ಆರ್​ಬಿಐ ಚಿಂತನೆ ನಡೆಸಿತ್ತು. ‘ಪಾವತಿ ವ್ಯವಸ್ಥೆಗೆ ಶುಲ್ಕಗಳು’ ಹೆಸರಿನ ಕರಡು ಪ್ರಸ್ತಾವ ಪ್ರಕಟಿಸಿದ್ದ ಆರ್​ಬಿಐ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿತ್ತು. ಒಂದು ವೇಳೆ ಆರ್​ಬಿಐನ ಈ ಚಿಂತನೆ ಕಾರ್ಯರೂಪಕ್ಕೆ ಬಂದಿದ್ದರೆ ಫೋನ್ ಪೆ, ಗೂಗಲ್ ಪೆ, ಭೀಮ್ ಸೇರಿದಂತೆ ಆ್ಯಪ್​ಗಳ ಮೂಲಕ ನಡೆಯುವ ಯುಪಿಐ ಆಧರಿತ ಪೇಮೆಂಟ್ ವ್ಯವಸ್ಥೆಗೆ ಶುಲ್ಕ ವಿಧಿಸಲಾಗುತ್ತಿತ್ತು.

ಆರ್​ಬಿಐ ಪ್ರಸ್ತಾವವನ್ನು ತೀವ್ರವಾಗಿ ವಿರೋಧಿಸಿದ್ದ ಚಿಂತಕ ರಾಜಾರಾಂ ತಲ್ಲೂರು, ‘ಸಾಂಪ್ರದಾಯಿಕ ಬ್ಯಾಂಕಿಂಗ್​ನಿಂದ ಬರುವ ಆದಾಯ ಬರುತ್ತಿದ್ದರೂ (ಅಂದರೆ ಸಾಲದ ಬಡ್ಡಿ, ಠೇವಣಿಯ ಮರು ಹೂಡಿಕೆ, ಬ್ಯಾಂಕಿಂಗ್ ಸೇವೆಗಳಿಗೆ ವಿಧಿಸುವ ವೆಚ್ಚ) ಇಲ್ಲಿಯ ತನಕ ಇಷ್ಟೆಲ್ಲ ವೆಚ್ಚ ಕಡಿತ ಪ್ರಯತ್ನ ಮಾಡಿ ಕೂಡ ನಿಮ್ಮ ಹೊಟ್ಟೆ ತುಂಬಿಲ್ಲ ಯಾಕೆ? ಈಗ ಜನ ತಮ್ಮ ಕಿಸೆಯಲ್ಲಿಟ್ಟುಯ್ಕೊಂಡು ತಿರುಗುವ ದುಡ್ಡನ್ನೂ ಡಿಜಿಟಲ್ ಮಾಡಿ, ಅದರಲ್ಲೂ ಪಾಲಿಗೆ ಬರುತ್ತಿದ್ದೀರಲ್ಲಾ ಉದ್ದೇಶ ಏನು’ ಎಂದು ಕಟುವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: UPI: ಫೋನ್ ಪೆ, ಗೂಗಲ್​ ಪೆ, ಭೀಮ್ ವಹಿವಾಟು ಆಗಬಹುದು ದುಬಾರಿ; ಯುಪಿಐ ಆಧರಿತ ವಹಿವಾಟಿಗೆ ಶುಲ್ಕ ವಿಧಿಸಲು ಆರ್​​ಬಿಐ ಚಿಂತನೆ

ಇದೀಗ ಕೇಂದ್ರ ಸರ್ಕಾರವು ಆರ್​ಬಿಐ ಪ್ರಸ್ತಾವಕ್ಕೆ ‘ಇಲ್ಲ’ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಯುಪಿಐ ಪಾವತಿ ಮತ್ತು ಸ್ವೀಕೃತಿಗಳು ಈ ಮೊದಲಿನಂತೆಯೇ ಉಚಿತವಾಗಿರುತ್ತವೆ. ಡಿಜಿಟಲ್ ಆರ್ಥಿಕತೆಯನ್ನು ಬೆಳೆಸಲು ಇದು ಸಹಕಾರಿ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ದೇಶದಲ್ಲಿ ಪ್ರಸ್ತುತ 338 ಬ್ಯಾಂಕುಗಳು ಯುಪಿಐ ಸೇವಾ ವ್ಯವಸ್ಥೆಯಲ್ಲಿ ನೋಂದಾಯಿಸಿಕೊಂಡಿವೆ. ಪ್ರತಿದಿನ 21 ಕೋಟಿಗೂ ಹೆಚ್ಚಿನ ಮೊತ್ತದ ವಹಿವಾಟು ನಡೆಯುತ್ತಿದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ಅಂಕಿಅಂಶಗಳ ತಿಳಿಸುತ್ತವೆ.

ಹಣಕಾಸು, ಉದ್ಯಮಗಳಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Mon, 22 August 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು