AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಐ ಧಮಾಕ; 11 ತಿಂಗಳು, 15,547 ಕೋಟಿ ವಹಿವಾಟು; 223 ಲಕ್ಷ ಕೋಟಿ ರೂ ಹಣ ವರ್ಗಾವಣೆ

UPI transactions: 2024ರ ಜನವರಿಯಿಂದ ನವೆಂಬರ್​ವರೆಗೆ ಯುಪಿಐ ಮೂಲಕ 223 ಲಕ್ಷ ಕೋಟಿ ರೂ ಮೌಲ್ಯದ 15,547 ಕೋಟಿ ವಹಿವಾಟುಗಳಾಗಿವೆ. ಅಕ್ಟೋಬರ್ ತಿಂಗಳೊಂದರಲ್ಲಿ 1,658 ಕೋಟಿ ವಹಿವಾಟಿನಲ್ಲಿ 23.49 ಲಕ್ಷ ಕೋಟಿ ರೂ ಹಣ ವರ್ಗಾವಣೆ ಆಗಿದೆ. 2016ರಲ್ಲಿ ಆರಂಭವಾದ ಯುಪಿಐ ಹಣ ಪಾವತಿ ವ್ಯವಸ್ಥೆ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಜನಪ್ರಿಯವಾಗುತ್ತಿರುವುದು ವಿಶೇಷ.

ಯುಪಿಐ ಧಮಾಕ; 11 ತಿಂಗಳು, 15,547 ಕೋಟಿ ವಹಿವಾಟು; 223 ಲಕ್ಷ ಕೋಟಿ ರೂ ಹಣ ವರ್ಗಾವಣೆ
ಯುಪಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 16, 2024 | 1:33 PM

Share

ನವದೆಹಲಿ, ಡಿಸೆಂಬರ್ 16: ಭಾರತದಲ್ಲಿ ಡಿಜಿಟಲ್ ಕ್ರಾಂತಿಗೆ ಕಾರಣವಾಗಿರುವ ಯುಪಿಐನ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಣಕಾಸು ಸಚಿವಾಲ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಈ ವರ್ಷದ (2024) ಜನವರಿಯಿಂದ ನವೆಂಬರ್​ವರೆಗೆ 11 ತಿಂಗಳಲ್ಲಿ ಯುಪಿಐ ಮೂಲಕ 15,547 ಕೋಟಿ ವಹಿವಾಟುಗಳಾಗಿವೆ. ಇವುಗಳಿಂದ 223 ಲಕ್ಷ ಕೋಟಿ ರೂ ಹಣ ವರ್ಗಾವಣೆ ಆಗಿದೆ ಎನ್ನಲಾಗಿದೆ.

2024ರ ಅಕ್ಟೋಬರ್ ತಿಂಗಳಲ್ಲಿ 23.49 ಲಕ್ಷ ಕೋಟಿ ರೂ ಮೌಲ್ಯದ 1,658 ಕೋಟಿ ಸಂಖ್ಯೆಯಷ್ಟು ಯುಪಿಐ ವಹಿವಾಟುಗಳಾಗಿವೆ. ಹಿಂದಿನ ವರ್ಷದ ಅಕ್ಟೋಬರ್​ಗೆ ಹೋಲಿಸಿದರೆ ವಹಿವಾಟು ಪ್ರಮಾಣ ಶೇ. 45ರಷ್ಟು ಹೆಚ್ಚಿದೆ.

ಇದನ್ನೂ ಓದಿ: ಚೀನಾದಿಂದ ಆಟಿಕೆ ಅಮದಿಗೆ ಕಡಿವಾಣ; ಗರಿಗೆದರುತ್ತಿರುವ ಭಾರತದ ಆಟಿಕೆ ಉದ್ಯಮದ ಮುಂದಿದೆ ಒಂದಷ್ಟು ಸವಾಲು

ಭಾರತದಲ್ಲಿ ರೂಪಿಸಲಾಗಿರುವ ಯುಪಿಐ ಪಾವತಿ ವ್ಯವಸ್ಥೆಯು ವಿಶ್ವದಲ್ಲೇ ವಿಶೇಷವಾಗಿದೆ. ಹಲವಾರು ದೇಶಗಳು ಯುಪಿಐ ಅನ್ನು ತಮ್ಮಲ್ಲಿ ಅಳವಡಿಸಲು ಆಸಕ್ತವಾಗಿವೆ. ಯುಎಇ, ಸಿಂಗಾಪುರ್, ಭೂತಾನ್, ನೇಪಾಳ್, ಶ್ರೀಲಂಕಾ, ಫ್ರಾನ್ಸ್ ಮತ್ತು ಮಾರಿಷಸ್ ಈ ಏಳು ದೇಶಗಳಲ್ಲಿ ಯುಪಿಐ ಅಳವಡಿಕೆ ಆಗಿದೆ. ಈ ಏಳು ದೇಶಗಳಿಂದ ಜನರು ಭಾರತಕ್ಕೆ ಯುಪಿಐ ಮೂಲಕ ಹಣ ವರ್ಗಾವಣೆ ಮಾಡಲು ಸಾಧ್ಯ.

ರಾಷ್ಟ್ರೀಯ ಪಾವತಿ ನಿಗಮವಾದ ಎನ್​ಪಿಸಿಐ 2016ರಲ್ಲಿ ಯುಪಿಐ ಅನ್ನು ಆರಂಭಿಸಿದೆ. ಬ್ಯಾಂಕ್ ಖಾತೆಗಳ ನಡುವೆ ಬಹಳ ವೇಗವಾಗಿ ಹಣ ವರ್ಗಾವಣೆ ಮಾಡುವ ಸಾಧನಗಳಲ್ಲಿ ಯುಪಿಐ ಒಂದು. ಒಂದು ಯುಪಿಐ ಅಪ್ಲಿಕೇಶನ್​ನಲ್ಲಿ ಹಲವು ಬ್ಯಾಂಕ್ ಖಾತೆಗಳನ್ನು ಜೋಡಿಸಬಹುದು.

ಇದನ್ನೂ ಓದಿ: 2 ಲಕ್ಷ ರೂ ವಿಮಾ ಕವರೇಜ್ ನೀಡುವ ಜೀವನ್​ಜ್ಯೋತಿ ಬಿಮಾ ಯೋಜನೆ; 21 ಕೋಟಿ ದಾಟಿದ ಫಲಾನುಭವಿಗಳ ಸಂಖ್ಯೆ

ಯುಪಿಐ ಪ್ಲಾಟ್​ಫಾರ್ಮ್​ನಲ್ಲಿ 632 ಬ್ಯಾಂಕುಗಳು ಕೈಜೋಡಿಸಿವೆ. ಇದರಿಂದ ಹೆಚ್ಚೆಚ್ಚು ಜನರು ಯುಪಿಐ ಬಳಸುವುದು ಹೆಚ್ಚಾಗಿದೆ. ಸಣ್ಣ ಉದ್ದಿಮೆಗಳು, ಬೀದಿಬದಿ ವ್ಯಾಪಾರಿಗಳು ಮೊದಲಾದ ಸಣ್ಣ ವರ್ತಕರಿಗೆ ಯುಪಿಐ ಸಾಕಷ್ಟು ಪ್ರಯೋಜನಕಾರಿಯಾಗಿದೆ. ವ್ಯಾಪಾರ ವಹಿವಾಟಿನಲ್ಲಿ ಸಾಮಾನ್ಯವಾಗಿ ಎದುರಾಗುತ್ತಿದ್ದ ‘ಚಿಲ್ಲರೆ’ ಸಮಸ್ಯೆಯೂ ಯುಪಿಐನಿಂದ ಹೆಚ್ಚಿನಂಶ ನಿವಾರಣೆಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ