ಯುಪಿಐ ವಹಿವಾಟಿನಲ್ಲಿ ಗಮನಾರ್ಹ ಪ್ರಗತಿ: ಆರ್ಥಿಕತೆ ಮುನ್ನಡೆಯ ದ್ಯೋತಕ ಎಂದ ಸಚಿವ ಅಶ್ವಿನಿ ವೈಷ್ಣವ್

ಯುಪಿಐ ವಹಿವಾಟಿನ ಮೊತ್ತವನ್ನು ಡಾಲರ್​ ಮೌಲ್ಯದಲ್ಲಿ ಲೆಕ್ಕಹಾಕಿದರೆ ಸೆಪ್ಟೆಂಬರ್ ತಿಂಗಳಲ್ಲಿ 86.19 ಶತಕೋಟಿ ಡಾಲರ್ ವಹಿವಾಟು ನಡೆದಿದೆ ಎಂದು ಸಚಿವರು ಹೇಳಿದ್ದಾರೆ.

ಯುಪಿಐ ವಹಿವಾಟಿನಲ್ಲಿ ಗಮನಾರ್ಹ ಪ್ರಗತಿ: ಆರ್ಥಿಕತೆ ಮುನ್ನಡೆಯ ದ್ಯೋತಕ ಎಂದ ಸಚಿವ ಅಶ್ವಿನಿ ವೈಷ್ಣವ್
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 04, 2021 | 4:49 PM

ಬೆಂಗಳೂರು: ಏಕೀಕೃತ ಪಾವತಿ ವ್ಯವಸ್ಥೆ – ಯುಪಿಐ (Unified Payments Interface – UPI) ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್​ ತಿಂಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಈ ಮಾಹಿತಿಯನ್ನು ಸ್ವತಃ ಕೇಂದ್ರದ ಎಲೆಕ್ಟ್ರಾನಿಕ್ಸ್​ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಕೂ ಮೂಲಕ ಹಂಚಿಕೊಂಡಿದ್ದಾರೆ.

2021ರ ಜನವರಿಯಿಂದ ಸೆಪ್ಟೆಂಬರ್ ಅವಧಿಯ ಪ್ರತಿ ತಿಂಗಳ ಯುಪಿಐ ವಹಿವಾಟು ಅಂಕಿಅಂಶ ಹಂಚಿಕೊಂಡಿರುವ ಸಚಿವರು, ತಿಂಗಳಿನಿಂದ ತಿಂಗಳಿಗೆ ವಹಿವಾಟಿನ ಗಾತ್ರ ಗಮನಾರ್ಹ ಪ್ರಮಾಣದಲ್ಲಿ ವೃದ್ಧಿಯಾಗಿರುವುದನ್ನು ಎತ್ತಿತೋರಿಸಿದ್ದಾರೆ. ಜನವರಿ 2021ರಲ್ಲಿ ₹ 4,31,181 ಕೋಟಿ (₹ 4.31 ಲಕ್ಷ ಕೋಟಿ) ಮೊತ್ತದ ವಹಿವಾಟು ಯುಪಿಐ ಮೂಲಕ ನಡೆದಿದ್ದರೆ, ಸೆಪ್ಟೆಂಬರ್​ ತಿಂಗಳಲ್ಲಿ ಈ ಮೊತ್ತವು ₹ 6,54,351 ಕೋಟಿಗೆ (₹ 6.54 ಲಕ್ಷ ಕೋಟಿ) ಮುಟ್ಟಿದೆ.

ಅಮೆರಿಕ ಡಾಲರ್​ ಎದುರಿನ ಭಾರತೀಯ ರೂಪಾಯಿ ಮೌಲ್ಯದ ಲೆಕ್ಕಾಚಾರದಲ್ಲಿ ಕಳೆದ ಆಗಸ್ಟ್​ನಲ್ಲಿ ನಡೆದಿರುವ ಯುಪಿಐ ವಹಿವಾಟಿನ ಮೊತ್ತ 86.19 ಶತಕೋಟಿ ಡಾಲರ್. ಸೆಪ್ಟೆಂಬರ್ ತಿಂಗಳಲ್ಲಿ ಇದು 88.25 ಶತಕೋಟಿ ಡಾಲರ್​ಗೆ ಮುಟ್ಟಿದೆ.

ದೇಶದ ಆರ್ಥಿಕತೆಯನ್ನು ಬೃಹತ್ ಗಾತ್ರದಲ್ಲಿ ವಿಸ್ತರಿಸುವ ಕನಸು ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ 5 ಲಕ್ಷ ಕೋಟಿ ಡಾಲರ್ (5 ಟ್ರಿಲಿಯನ್ ಡಾಲರ್) ಆರ್ಥಿಕತೆಯ ಬಗ್ಗೆ ಪ್ರಸ್ತಾಪಿಸಿದ್ದರು. ಈ ಕನಸು ಸಾಕಾರಗೊಳ್ಳಲು ಭಾರತದ ಆರ್ಥಿಕತೆಯು ಪ್ರತಿವರ್ಷ 1 ಲಕ್ಷ ಕೋಟಿ ಡಾಲರ್​ನಷ್ಟು ಬೆಳೆಯಬೇಕು ಎಂದು ಸಲಹೆ ಮಾಡಿದ್ದರು.

ಅಶ್ವನಿ ವೈಷ್ಣವ್ ಸಹ ತಾವು ಮಾಡಿರುವ ಕೂನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. #UPIChalega ಹ್ಯಾಷ್​ಟ್ಯಾಗ್​ನೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಭಾರತದ ಯುಪಿಐ ವಹಿವಾಟು ಗಾತ್ರವು ಪ್ರತಿವರ್ಷ 1 ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಸಾಧಿಸಲು ಅಗತ್ಯ ವೇಗ ಸಿಗುತ್ತಿರುವ ದ್ಯೋತಕ’ ಎಂದು ವಿವರಿಸಿದ್ದಾರೆ.

ಭೀಮ್, ಫೋನ್ ಪೇ, ಗೂಗಲ್ ಪೇ, ಪೇಟಿಎಂ ಆ್ಯಪ್​ಗಳನ್ನು ಬಳಸಿ ಯುಪಿಐ ಮೂಲಕ ಹಣ ವರ್ಗಾಯಿಸಲು ಸಾಧ್ಯವಿದೆ. ಅಂಗಡಿಗಳ ಮುಂದೆ ಪ್ರದರ್ಶಿಸಿರುವ ಕ್ಯುಆರ್​ ಕೋಡ್​ಗಳು ಸಹ ಯುಪಿಐ ತಂತ್ರಜ್ಞಾನ ಆಧರಿಸಿಯೇ ಕೆಲಸ ಮಾಡುತ್ತವೆ.

(UPI Transactions Improved in Last August September Union IT Minister Ashwini Vaishnaw Says its Indication of Growing Economy)

ಇದನ್ನೂ ಓದಿ: Offline UPI: ಇಂಟರ್ನೆಟ್ ಕನೆಕ್ಷನ್ ಇಲ್ಲದೆಯೂ ಯುಪಿಐ ಮೂಲಕ ಹಣ ಕಳುಹಿಸುವ ಟ್ರಿಕ್ ನಿಮಗೆ ಗೊತ್ತೇ?

ಇದನ್ನೂ ಓದಿ: UPI Autopay: ಯುಪಿಐ ಆಟೋ ಪೇ ಬಗ್ಗೆ ಇಲ್ಲಿದೆ ಹಂತ ಹಂತವಾದ ಮಾಹಿತಿ

Published On - 4:36 pm, Mon, 4 October 21

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ