AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಕಾರಿ ಬ್ಯಾಂಕುಗಳಲ್ಲಿ ಚಿನ್ನದ ಮೇಲಿನ ಸಾಲದ ಮಿತಿ 4 ಲಕ್ಷಕ್ಕೆ ಹೆಚ್ಚಳ; ಆರ್​ಬಿಐ ಮಹತ್ವದ ನಿರ್ಧಾರ

Gold loan limit raised: ಸಹಕಾರಿ ಬ್ಯಾಂಕುಗಳಲ್ಲಿ ಬುಲೆಟ್ ರೀಪೇಮೆಂಟ್ ಸ್ಕೀಮ್ ಅಡಿಯಲ್ಲಿ ಒದಗಿಸುವ ಸಾಲದ ಮಿತಿಯನ್ನು 2 ಲಕ್ಷ ರುನಿಂದ 4 ಲಕ್ಷ ರುಗೆ ಹೆಚ್ಚಿಸಲು ಆರ್​ಬಿಐ ನಿರ್ಧರಿಸಿದೆ. ಇದಕ್ಕೆ ಕೆಲ ಷರುತ್ತುಗಳು ಅನ್ವಯ ಆಗುತ್ತವೆ. ಹಾಗೆಯೇ ಬ್ಯಾಂಕುಗಳು ತಮ್ಮಲ್ಲಿನ ಹೆಚ್ಚುವರಿ ಹಣವನ್ನು ಆರ್​ಬಿಐನ ಎಸ್​ಡಿಎಫ್ ಸ್ಕೀಮ್​ನಲ್ಲಿ ತೊಡಗಿಸುವ ಬದಲು ಹೆಚ್ಚು ಆದಾಯ ಕೊಡುವ ಸಾಲಕ್ಕೆ ವಿನಿಯೋಗಿಸಬಹುದು ಎಂದು ಸಲಹೆ ನೀಡಲಾಗಿದೆ.

ಸಹಕಾರಿ ಬ್ಯಾಂಕುಗಳಲ್ಲಿ ಚಿನ್ನದ ಮೇಲಿನ ಸಾಲದ ಮಿತಿ 4 ಲಕ್ಷಕ್ಕೆ ಹೆಚ್ಚಳ; ಆರ್​ಬಿಐ ಮಹತ್ವದ ನಿರ್ಧಾರ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 06, 2023 | 1:00 PM

Share

ನವದೆಹಲಿ, ಅಕ್ಟೋಬರ್ 6: ಬುಲೆಟ್ ರೀಪೇಮೆಂಟ್ ಸ್ಕೀಮ್ ಅಡಿಯಲ್ಲಿ ನಗರ ಸಹಕಾರಿ ಬ್ಯಾಂಕುಗಳಲ್ಲಿ ಚಿನ್ನದ ಮೇಲಿನ ಸಾಲದ ಮಿತಿಯನ್ನು (gold loan limit) ದ್ವಿಗುಣಗೊಳಿಸಲಾಗಿದೆ. ಈಗಿರುವ 2 ಲಕ್ಷ ರೂ ಮಿತಿಯನ್ನು 4 ಲಕ್ಷ ರುಪಾಯಿಗೆ ಹೆಚ್ಚಿಸಲು ಆರ್​ಬಿಐ ನಿರ್ಧರಿಸಿದೆ. ಮೂರು ದಿನಗಳ ಕಾಲ ನಡೆದ ಎಂಪಿಸಿ ಸಭೆಯಲ್ಲಿ ತೆಗೆದುಕೊಳ್ಳಲಾದ ಕೆಲ ಪ್ರಮುಖ ನಿರ್ಧಾರಗಳಲ್ಲಿ ಇದೂ ಒಂದು. ಇಂದು ಪತ್ರಿಕಾಗೋಷ್ಠಿಯಲ್ಲಿ ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ ಈ ವಿಚಾರ ತಿಳಿಸಿದರು.

ನಗರ ಸಹಕಾರಿ ಬ್ಯಾಂಕುಗಳು 2023ರ ಮಾರ್ಚ್​ 31ಕ್ಕೆ ಆದ್ಯತಾ ವಲಯದಲ್ಲಿನ ಗುರಿಗಳನ್ನು ಪೂರ್ಣಗೊಳಿಸಿದಲ್ಲಿ, ಬುಲೆಟ್ ರೀಪೇಮೆಂಟ್ ಸ್ಕೀಮ್ ಅಡಿಯಲ್ಲಿ ಗ್ರಾಹಕರಿಗೆ 4 ಲಕ್ಷ ರೂವರೆಗೂ ಒಡವೆ ಸಾಲ ನೀಡಬಹುದು ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: ಆರ್​ಬಿಐ ಎಂಪಿಸಿ ಸಭೆ ಹೈಲೈಟ್ಸ್; ರೆಪೋ ದರ ಶೇ. 6.5ರಲ್ಲಿ ಮುಂದುವರಿಕೆ; ಜಿಡಿಪಿ, ಹಣದುಬ್ಬರ ಅಂದಾಜು ವಿವರ ಇಲ್ಲಿದೆ

ಏನಿದು ಬುಲೆಟ್ ರೀಪೇಮೆಂಟ್ ಸ್ಕೀಮ್?

ಮಾಮೂಲಿಯ ಬ್ಯಾಂಕ್ ಸಾಲದಲ್ಲಿ ತಿಂಗಳಿಗೆ ಇಎಂಐ ಕಟ್ಟಬೇಕಾಗುತ್ತದೆ. ಆದರೆ ಬುಲೆಟ್ ರೀಪೇಮೆಂಟ್ ಸ್ಕೀಮ್​ನಲ್ಲಿ ಗ್ರಾಹಕರು ಕಂತುಗಳಲ್ಲಿ ಹಣ ಕಟ್ಟುವ ಬದಲು ಸಾಲದ ಅವಧಿಯ ಕೊನೆಯಲ್ಲಿ ಅಸಲು ಮತ್ತು ಬಡ್ಡಿ ಎಲ್ಲಾ ಸೇರಿ ಇಡೀ ಮೊತ್ತವನ್ನು ಒಮ್ಮೆಗೇ ಪಾವತಿಸಲು ಅವಕಾಶ ಇರುತ್ತದೆ. ಸಹಕಾರಿ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆಗಳಲ್ಲಿ ಒಡವೆ ಮೇಲೆ ತೆಗೆದುಕೊಳ್ಳುವ ಸಾಲಕ್ಕೆ ಸಾಮಾನ್ಯವಾಗಿ ಈ ಬುಲೆಟ್ ರೀಪೇಮೆಂಟ್ ಸ್ಕೀಮ್ ಇರುತ್ತದೆ.

2007ರವರೆಗೂ 1 ಲಕ್ಷ ರೂ ಮಾತ್ರವೇ ಇದ್ದದ್ದು ಮಿತಿ

2007ರವರೆಗೂ ಬುಲೆಟ್ ರೀಪೇಂಟ್ ಸೌಲಭ್ಯ ಇರುವ ಒಡವೆ ಸಾಲದ ಮಿತಿ 1 ಲಕ್ಷ ರೂ ಇತ್ತು. 2014ರಲ್ಲಿ ಇದನ್ನು 2 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ಇದೀಗ 4 ಲಕ್ಷ ರೂಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಮೂರನೇ ತ್ರೈಮಾಸಿಕ ಅವಧಿಗೆ ಪಿಎಫ್ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹತ್ತು ವಿವಿಧ ಪಿಎಫ್ ನಿಧಿಗಳಿಗೆ ಸರ್ಕಾರ ಎಷ್ಟು ಬಡ್ಡಿ ನೀಡುತ್ತೆ?

ಗ್ರಾಹಕರಿಗೆ ಸಾಲ ಕೊಡುವಂತೆ ಬ್ಯಾಂಕುಗಳಿಗೆ ಉತ್ತೇಜನ

ಬ್ಯಾಂಕುಗಳು ತಮ್ಮಲ್ಲಿರುವ ಹೆಚ್ಚುವರಿ ಹಣವನ್ನು ಕಡಿಮೆ ಬಡ್ಡಿದರದ ಎಸ್​ಡಿಎಫ್​ನಲ್ಲಿ ಇರಿಸುವ ಬದಲು, ಬೇರೆಡೆ ಸಾಲ ನೀಡಿ ಆದಾಯ ಗಳಿಸಲಿ ಎಂದು ಆರ್​ಬಿಐ ಸಲಹೆ ನೀಡಿದೆ.

ಇನ್ನು, ಈ ಬಾರಿಯ ಎಂಪಿಸಿ ಸಭೆಯಲ್ಲಿ ಆರ್​ಬಿಐ ತೆಗೆದುಕೊಂಡ ನಿರ್ಧಾರಗಳು ಬಹುತೇಕ ನಿರೀಕ್ಷಿತವೇ ಆಗಿವೆ. ರೆಪೋದರ ಶೇ. 6.5ರಲ್ಲಿ ಮುಂದುವರಿಸಿದೆ. ಈ ಹಣಕಾಸು ವರ್ಷದಲ್ಲಿ ಹಣದುಬ್ಬರ ಮತ್ತು ಜಿಡಿಪಿ ಬಗ್ಗೆ ಈ ಹಿಂದೆ ಮಾಡಿದ್ದ ಅಂದಾಜನ್ನೇ ಆರ್​ಬಿಐ ಮುಂದುವರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Fri, 6 October 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?