AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Envestnet Bengaluru: ಬೆಂಗಳೂರಿನ ಕಚೇರಿ ಮುಚ್ಚಿದ ಎನ್ವೆಸ್ಟ್​ನೆಟ್; ಟಿಸಿಎಸ್​ಗೆ ಹೊರಗುತ್ತಿಗೆ ಕೊಟ್ಟು ಕೈತೊಳೆದುಕೊಂಡ ಅಮೆರಿಕನ್ ಕಂಪನಿ

Envestnet Office Closed In Bengaluru: ಬೆಂಗಳೂರಿನಲ್ಲಿರುವ ಅಮೆರಿಕ ಮೂಲದ ಎನ್ವೆಸ್ಟ್​ನೆಟ್​ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ ಅನ್ನು ಮುಚ್ಚಲಾಗಿದೆ. ಇದರಿಂದ ನಡೆಯುತ್ತಿದ್ದ ಕಾರ್ಯಾಚರಣೆಗಳನ್ನು ಟಿಸಿಎಸ್​ಗೆ ಹೊರಗುತ್ತಿಗೆಯಾಗಿ ನೀಡಲಾಗಿದೆ.

Envestnet Bengaluru: ಬೆಂಗಳೂರಿನ ಕಚೇರಿ ಮುಚ್ಚಿದ ಎನ್ವೆಸ್ಟ್​ನೆಟ್; ಟಿಸಿಎಸ್​ಗೆ ಹೊರಗುತ್ತಿಗೆ ಕೊಟ್ಟು ಕೈತೊಳೆದುಕೊಂಡ ಅಮೆರಿಕನ್ ಕಂಪನಿ
ಐಟಿ ಪಾರ್ಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 18, 2023 | 5:43 PM

Share

ಬೆಂಗಳೂರು: ಅಮೆರಿಕದ ಹಣಕಾಸು ತಂತ್ರಜ್ಞಾನ ಸಂಸ್ಥೆ ಎನ್ವೆಸ್ಟ್​ನೆಟ್ (Envestnet) ತನ್ನ ಭಾರತೀಯ ಕಾರ್ಯಾಚರಣೆಗಳನ್ನು ಟಿಸಿಎಸ್​ಗೆ ಹೊರಗುತ್ತಿಗೆಗೆ (Outsourcing) ಕೊಟ್ಟು ಹೊರಬಿದ್ದಿದೆ. ಬೆಂಗಳೂರಿನಲ್ಲಿ ಇದ್ದ ತನ್ನ ಕಚೇರಿಯನ್ನು ಎನ್ವೆಸ್ಟ್​ನೆಟ್ ಮುಚ್ಚಿದೆ. ಅದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಿಗೆ ಪರಿಹಾರ ಕೊಟ್ಟು ಕೆಲಸದಿಂದ ಬಿಡಿಸಿದೆ. ಬೆಂಗಳೂರಿನ ಅದರ ಕಚೇರಿಯು ಗ್ಲೋಬಲ್ ಕೇಪಬಿಲಿಟಿ ಸೆಂಟರ್ (GCC- Global Capability Center) ಆಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಅದನ್ನು ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ಸಂಸ್ಥೆ ನಿಭಾಯಿಸುತ್ತದೆ.

ಇತ್ತೀಚೆಗೆ ವಿವಿಧ ಜಾಗತಿಕ ಕಂಪನಿಗಳು ಭಾರತದಲ್ಲಿನ ಗ್ಲೋಬಲ್ ಕೇಪಬಿಲಿಟಿ ಸೆಂಟರ್​ಗಳ ನಿರ್ವಹಣೆಯನ್ನು ನಿಲ್ಲಿಸಿ ಭಾರತೀಯ ಕಂಪನಿಗಳಿಗೆ ಔಟ್​ಸೋರ್ಸ್ ಮಾಡುವ ಟ್ರೆಂಡ್ ಇದೆ. ಈ ಸಾಲಿಗೆ ಎನ್ವೆಸ್ಟ್​ನೆಟ್ ಸೇರಿದೆ. ಇಂಥ ಜಿಸಿಸಿ ಕೇಂದ್ರಗಳ ನಿರ್ವಹಣಾ ವೆಚ್ಚ ಅಧಿಕ ಇರುವುದಿರಂದ ಇದಾಗುತ್ತಿದೆ. ಅನೇಕ ಕಂಪನಿಗಳು ಇಂಥ ಕೇಂದ್ರಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿವೆ.

ಇದನ್ನೂ ಓದಿSBI Profit: ಎಸ್​ಬಿಐ ಸಖತ್ ಲಾಭ; ಷೇರುದಾರರಿಗೆ ಡಿವಿಡೆಂಡ್ ಸುಗ್ಗಿ; ಐಟಿಸಿ, ಗೇಲ್ ಲಾಭ ಎಷ್ಟಿದೆ ನೋಡಿ?

ಭಾರತದಲ್ಲಿ ಅತ್ಯಧಿಕ ಗ್ಲೋಬಲ್ ಕೇಪಬಿಲಿಟಿ ಸೆಂಟರ್ಸ್

ಜಾಗತಿಕ ಜಿಸಿಸಿ ಕೇಂದ್ರಗಳಲ್ಲಿ ಹೆಚ್ಚಿನವು ಭಾರತದಲ್ಲಿವೆ. 1,500 ಜಿಸಿಸಿಗಳು ಭಾರತದಲ್ಲಿವೆ. ವಿಶ್ವದ ಶೇ. 45ರಷ್ಟು ಗ್ಲೋಬಲ್ ಕೇಪಬಿಲಿಟಿ ಸೆಂಟರ್​ಗಳು ಇಲ್ಲಿದ್ದು, ಭಾರತದ ಐಟಿ ರಫ್ತಿಗೆ ಪ್ರಮುಖ ಕೊಡುಗೆ ನೀಡುತ್ತಿವೆ. ಒಂದು ಅಂದಾಜು ಪ್ರಕಾರ ಭಾರತದಿಂದ ಹೊರದೇಶಗಳಿಗೆ ರಫ್ತಾಗುವ 194 ಬಿಲಿಯನ್ ಡಾಲರ್ ಮೊತ್ತದ ಐಟಿ ಸರ್ವಿಸ್ ಮತ್ತು ಪ್ರಾಡಕ್ಟ್​ಗಳ ಪೈಕಿ ಶೇ. 40ರಷ್ಟು ಈ ಗ್ಲೋಬಲ್ ಕೇಪಬಿಲಿಟಿ ಸೆಂಟರ್​ಗಳಂದಲೇ ಆಗುತ್ತವೆ ಎಂಬುದು ಗಮನಾರ್ಹ.

ಇನ್ನು, ಎನ್ವೆಸ್ಟ್​ನೆಟ್ ಸಂಸ್ಥೆ 2022ರ ಅಕ್ಟೋಬರ್ ತಿಂಗಳಲ್ಲೇ ಟಿಸಿಎಸ್ ಜೊತೆ ಔಟ್​ಸೋರ್ಸಿಂಗ್ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. 10 ವರ್ಷ ಕಾಲ ಈ ಒಪ್ಪಂದದ ಅವಧಿ ಇರುವುದು ತಿಳಿದುಬಂದಿದೆ. ಎನ್ವೆಸ್ಟ್​ನೆಟ್ ಡಾಟಾ ಮತ್ತು ಅನಾಲಿಟಿಕ್ಸ್​ನ ವ್ಯವಹಾರದ ಬ್ಯಾಕ್ ಆಫೀಸ್ ಕಾರ್ಯಗಳು, ಎಂಜಿನಿಯರಿಂಗ್ ಕಾರ್ಯಗಳನ್ನು ಟಿಸಿಎಸ್​ಗೆ ಹೊರಗುತ್ತಿಗೆಯಾಗಿ ನೀಡಿದ್ದಾಗಿ ರೆಗ್ಯುಲೇಟರಿ ಅಥಾರಿಟಿಗೆ ಸಲ್ಲಿಸಿದ ಫೈಲಿಂಗ್​ನಲ್ಲಿ ಎನ್ವೆಸ್ಟ್​ನೆಟ್ ಕಂಪನಿ ತಿಳಿಸಿದೆ.

ಇದನ್ನೂ ಓದಿSuper Rich: ಭಾರತದಲ್ಲಿ ನೂರಕ್ಕೊಬ್ಬ ಶ್ರೀಮಂತರ ಗುಂಪಿಗೆ ಸೇರಬೇಕಾ? ನಿಮಗೆಷ್ಟು ಕೋಟಿ ಹಣವಿರಬೇಕು? ಇಲ್ಲಿದೆ ಡೀಟೇಲ್ಸ್

ಬೆಂಗಳೂರಿನಲ್ಲಿರುವ ಎನ್ವೆಸ್ಟ್​ನೆಟ್ ಕಚೇರಿ ಜಾಗ ಏನು ಮಾಡುತ್ತದೆ?

ಎನ್ವೆಸ್ಟ್​ನೆಟ್ ಕಂಪನಿಯ ಕಚೇರಿ ಸ್ಥಳ ಬೆಂಗಳೂರಿನ ಸರ್ಜಾರಪುರ ಮಾರತ್ತಹಳ್ಳಿ ರಸ್ತೆಯ ಕಾಡುಬೀಸನಹಳ್ಳಿ ಸಮೀಪದ ಪ್ರೆಸ್ಟೀಜ್ ಟೆಕ್ನಾಲಜಿ ಪಾರ್ಕ್​ನಲ್ಲಿದೆ. ಲೀಸ್​ಗೆ ಪಡೆದಿರುವ ಈ ಜಾಗವನ್ನು ಏನು ಮಾಡುವುದೆಂದು ಎನ್ವೆಸ್ಟ್​ನೆಟ್ ಇನ್ನೂ ನಿರ್ಧರಿಸಿಲ್ಲ. ಸಬ್​ಲೀಸ್​ಗೆ ಕೊಡುವುದೋ ಅಥವಾ ಬೇರೆ ಯಾವುದಾಕ್ಕಾದರೂ ಈ ಸ್ಥಳವನ್ನು ಬಳಸುವುದೋ ಇವೇ ಮುಂತಾದ ಆಯ್ಕೆಗಳನ್ನು ಕಂಪನಿ ಪರಾಮರ್ಶಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ