AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಅದಾನಿ ಗ್ರೂಪ್​ಗೆ ಧನಸಹಾಯ ಕೊಡುವ ಮುನ್ನ ಹಿಂಡನ್ಬರ್ಗ್ ವರದಿ ಅವಲೋಕಿಸಿದ್ದ ಅಮೆರಿಕದ ಸರ್ಕಾರ

US, Adani Group and Hindenburg Report: ಅದಾನಿ ಪೋರ್ಟ್ಸ್ ಅಂಡ್ ಎಸ್​ಇಝಡ್ ಸಂಸ್ಥೆ ಶ್ರೀಲಂಕಾದ ಕೊಲಂಬೋದ ಬಂದರಿನಲ್ಲಿ ಕಂಟೈನರ್ ಟರ್ಮಿನಲ್​ವೊಂದನ್ನು ನಿರ್ಮಿಸುತ್ತಿದೆ. ಅದಾನಿ ಗ್ರೂಪ್​ನ ಈ ಪೋರ್ಟ್ ಪ್ರಾಜೆಕ್ಟ್​ಗೆ ಅಮೆರಿಕದ ಇಂಟರ್ನ್ಯಾಷನಲ್ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪ್ ಕಳೆದ ತಿಂಗಳು ಹಣದ ನೆರವು ಘೋಷಿಸಿತ್ತು. ಅದಾನಿ ಗ್ರೂಪ್​ನ ಷೇರು ಅಕ್ರಮಗಳ ವಿರುದ್ಧ ಹಿಂಡನ್ಬರ್ಗ್ ರಿಸರ್ಚ್​ನ ವರದಿಯ ಅಂಶಗಳನ್ನು ಅವಲೋಕಿಸಿಯೇ ಅದಾನಿ ಕಂಪನಿಗೆ ಧನಸಹಾಯ ಒದಗಿಸಲಾಗಿದೆ.

ಶ್ರೀಲಂಕಾದಲ್ಲಿ ಅದಾನಿ ಗ್ರೂಪ್​ಗೆ ಧನಸಹಾಯ ಕೊಡುವ ಮುನ್ನ ಹಿಂಡನ್ಬರ್ಗ್ ವರದಿ ಅವಲೋಕಿಸಿದ್ದ ಅಮೆರಿಕದ ಸರ್ಕಾರ
ಅದಾನಿ ಗ್ರೂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 05, 2023 | 11:48 AM

Share

ವಾಷಿಂಗ್ಟನ್, ಡಿಸೆಂಬರ್ 5: ಶ್ರೀಲಂಕಾದಲ್ಲಿ ಅದಾನಿ ಗ್ರೂಪ್​ನ ಸಂಸ್ಥೆಯೊಂದು ನಡೆಸುತ್ತಿರುವ ಪೋರ್ಟ್ ಪ್ರಾಜೆಕ್ಟ್​ಗೆ ಕಳೆದ ತಿಂಗಳು ಅಮೆರಿಕದಿಂದ ಧನಸಹಾಯ ಘೋಷಣೆ ಆಗಿತ್ತು. ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ ಅದಾನಿ ಗ್ರೂಪ್ ವಿರುದ್ಧ ಅಕ್ರಮ ಆರೋಪಗಳನ್ನು (Hindenburg Research Report) ಮಾಡಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದ್ದು ಹಲವರ ಹುಬ್ಬೇರಿಸಿತ್ತು. ಆದರೆ, ಅಮೆರಿಕದ ಸರ್ಕಾರ ಯಾವುದೋ ಮರ್ಜಿಯಲ್ಲಿ ಅದಾನಿ ಗ್ರೂಪ್​ಗೆ ಹಣದ ನೆರವು ಒದಗಿಸಿಲ್ಲ ಎಂಬುದು ಅಲ್ಲಿನ ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ ದೃಢೀಕರಿಸಿದೆ. ಅದಾನಿ ಗ್ರೂಪ್​ನ ಪೋರ್ಟ್ ಪ್ರಾಜೆಕ್ಟ್​ಗೆ ಹಣದ ನೆರವು ಒದಗಿಸುವ ಮುನ್ನ ಹಿಂಡನ್ಬರ್ಗ್ ವರದಿಯ ಅಂಶಗಳನ್ನು ಅವಲೋಕಿಸಲಾಗಿತ್ತು ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಬ್ಲೂಮ್​ಬರ್ಗ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಅದಾನಿ ಗ್ರೂಪ್​ಗೆ ಸೇರಿದ ಅದಾನಿ ಪೋರ್ಟ್ಸ್ ಅಂಡ್ ಸ್ಪೆಷಲ್ ಎಕನಾಮಿಕ್ ಝೋನ್ ಲಿ ಸಂಸ್ಥೆ ಶ್ರೀಲಂಕಾದ ಕೊಲಂಬೋದ ಬಂದರಿನಲ್ಲಿ ಕಂಟೈನರ್ ಟರ್ಮಿನಲ್​ವೊಂದನ್ನು ನಿರ್ಮಿಸುತ್ತಿದೆ. ಈ ಯೋಜನೆಗೆ ಅಮೆರಿಕದ ಸರ್ಕಾರಿ ಸ್ವಾಮ್ಯದ ಇಂಟರ್ನ್ಯಾಷನಲ್ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಶನ್ ಸಂಸ್ಥೆ (ಡಿಎಫ್​ಸಿ) 553 ಮಿಲಿಯನ್ ಡಾಲರ್ ಮೊತ್ತದ ಸಾಲ ಸೌಲಭ್ಯ ಒದಗಿಸಿತ್ತು.

ಇದನ್ನೂ ಓದಿ: Corporate Bond: ಆರು ವರ್ಷದಲ್ಲಿ ದ್ವಿಗುಣಗೊಳ್ಳಲಿದೆ ಭಾರತದ ಕಾರ್ಪೊರೇಟ್ ಬಾಂಡ್ ಮಾರುಕಟ್ಟೆ; ಏನಿದು ಬಾಂಡ್?

ಈ ಸಾಲ ನೀಡುವ ಮುನ್ನ ಡಿಎಫ್​ಸಿ ಸಂಸ್ಥೆ ಹಿಂಡನ್ಬರ್ಗ್ ವರದಿಯ ಅಂಶಗಳನ್ನು ಅವಲೋಕಿಸಿತ್ತು. ಹಿಂನ್ಬರ್ಗ್ ಮಾಡಿದ ಆರೋಪಗಳು ಶ್ರೀಲಂಕಾದಲ್ಲಿ ಪೋರ್ಟ್ ಪ್ರಾಜೆಕ್ಟ್ ಕೈಗೊಂಡಿರುವ ಅದಾನಿ ಕಂಪನಿಗೆ ಅನ್ವಯ ಆಗುವುದಿಲ್ಲ ಎಂಬುದು ಖಾತ್ರಿ ಆದ ಬಳಿಕ ಸಾಲ ನೀಡಲು ನಿರ್ಧರಿಸಲಾಯಿತು ಎಂದು ಡಿಎಫ್​ಸಿ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಆದರೆ, ಅದಾನಿಯ ಈ ಸಂಸ್ಥೆಯ ಮೇಲೆ ಮತ್ತು ಅದರ ಹಣಕಾಸು ನಡವಳಿಕೆ ಮತ್ತಿತರ ವಿಚಾರದ ಬಗ್ಗೆ ಸದಾ ಒಂದು ಕಣ್ಣಿಟ್ಟಿರಲಾಗುತ್ತದೆ ಎಂದೂ ಅಮೆರಿಕದ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಶನ್ ಸಂಸ್ಥೆ ಹೇಳಿದೆ.

ಕೊಲಂಬೋದಲ್ಲಿ ಅದಾನಿ ಗ್ರೂಪ್ ಕೈಗೊಂಡಿರುವ ಪೋರ್ಟ್ ಪ್ರಾಜೆಕ್ಟ್​ಗೆ ಅಮೆರಿಕ ಬೆಂಬಲ ನೀಡಲು ರಾಜಕೀಯ ಕಾರಣವೂ ಇದೆ. ಶ್ರೀಲಂಕಾದಲ್ಲಿ ಚೀನಾದ ಹಿಡಿತ ದಿನೇ ದಿನೇ ಹೆಚ್ಚುತ್ತಿದೆ. ಚೀನಾದ ಪ್ರಭಾವವನ್ನು ಸರಿದೂಗಿಸುವುದು ಅಥವಾ ಕಡಿಮೆ ಮಾಡುವುದು ಅಮೆರಿಕದ ಗುರಿ. ಈ ಹಿನ್ನೆಲೆಯಲ್ಲಿ ಕೊಲಂಬೋ ಪೋರ್ಟ್ ಯೋಜನೆಯಲ್ಲಿ ಅಮೆರಿಕವೂ ಶಾಮೀಲಾಗಲು ನಿರ್ಧರಿಸಿದಂತಿದೆ.

ಇದನ್ನೂ ಓದಿ: ಅದಾನಿ-ಹಿಂಡನ್ಬರ್ಗ್ ರಿಪೋರ್ಟ್, ಚೀನಾ ಬೆಂಬಲಿಗರ ಕರ್ಮಕಾಂಡ: ರಾಜ್ಯಸಭಾ ಸಂಸದ ಮಹೇಶ್ ಜೇಠ್ಮಲಾನಿ ಅರೋಪ

ಕೊಲಂಬೋದಲ್ಲಿ ಪೋರ್ಟ್ ಈಗಾಗಲೇ ಅಸ್ತಿತ್ವದಲ್ಲಿದೆ. ಅದರಲ್ಲಿ ವಿವಿಧ ಟರ್ಮಿನಲ್​ಗಳಿದ್ದು, ಇನ್ನೂ ಕೆಲ ಹೊಸ ಟರ್ಮಿನಲ್​ಗಳನ್ನು ನಿರ್ಮಿಸಲಾಗುತ್ತಿದೆ. ಅದರ ಒಂದು ಟರ್ಮಿನಲ್ ನಿರ್ಮಾಣದ ಗುತ್ತಿಗೆಯನ್ನು ಅದಾನಿ ಪೋರ್ಟ್ಸ್ ಅಂಡ್ ಎಸ್​ಇಝಡ್ ಕಂಪನಿಗೆ ವಹಿಸಲಾಗಿದೆ. ಇದೇ ಬಂದರಿನಲ್ಲಿ ಚೀನಾ ಬೇರೆ ಒಂದು ಟರ್ಮಿನಲ್ ನಿರ್ಮಿಸಿ ಅದನ್ನು ನಿರ್ವಹಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!