AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾರಿಫ್ ಗದ್ದಲಗಳ ಮಧ್ಯೆ ಅಮೆರಿಕದೊಂದಿಗೆ ಟ್ರೇಡ್ ಡೀಲ್​ಗೆ ಮಾತುಕತೆ ಪುನಾರಂಭಿಸಿದ ಭಾರತ

India-US trade talks resume: ಭಾರತದ ಮೇಲೆ ಶೇ. 50ರಷ್ಟು ಟ್ಯಾರಿಫ್ ಹೇರಿರುವ ಅಮೆರಿಕದ ಜೊತೆ ಭಾರತ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ಪುನಾರಂಭಿಸಿದೆ. ಅಮೆರಿಕದೊಂದಿಗೆ ಟ್ರೇಡ್ ಡೀಲ್​ಗೆ ಮಾತುಕತೆ ನಡೆಯುತ್ತಿದೆ ಎಂದು ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ತಿಳಿಸಿದ್ಧಾರೆ. ವ್ಯಾಪಾರ ಒಪ್ಪಂದ ಮಾಡಿಕೊಳ್ಳದ ದೇಶಗಳ ಮೇಲೆ ಅಮೆರಿಕ ಅಧಿಕ ಪ್ರಮಾಣದ ಟ್ಯಾರಿಫ್ ಹಾಕುತ್ತಿದೆ.

ಟ್ಯಾರಿಫ್ ಗದ್ದಲಗಳ ಮಧ್ಯೆ ಅಮೆರಿಕದೊಂದಿಗೆ ಟ್ರೇಡ್ ಡೀಲ್​ಗೆ ಮಾತುಕತೆ ಪುನಾರಂಭಿಸಿದ ಭಾರತ
ಪೀಯೂಶ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 02, 2025 | 2:57 PM

Share

ನವದೆಹಲಿ, ಸೆಪ್ಟೆಂಬರ್ 2: ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (bilateral trade deal) ಏರ್ಪಡಿಸಲು ಭಾರತ ಮಾತುಕತೆ ನಡೆಸುತ್ತಿದೆ. ಕೇಂದ್ರ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕದ ಮಾತ್ರವಲ್ಲ, ಯೂರೋಪಿಯನ್ ಒಕ್ಕೂಟ, ಚಿಲಿ, ಪೆರು, ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಓಮನ್ ಮೊದಲಾದ ದೇಶಗಳೊಂದಿಗೂ ಭಾರತವು ಹೊಸ ವ್ಯಾಪಾರ ಒಪ್ಪಂದಕ್ಕೆ ಪ್ರಯತ್ನಿಸುತ್ತಿರುವುದಾಗಿ ಪೀಯೂಶ್ ಗೋಯಲ್ (Piyush Goyal) ತಿಳಿಸಿದ್ದಾರೆ.

ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕಾಗಿ ಭಾರತ ಮತ್ತು ಅಮೆರಿಕ ಮಧ್ಯೆ ಸಾಕಷ್ಟು ತಿಂಗಳುಗಳಿಂದ ಮಾತುಕತೆ, ಸಂಧಾನಗಳು ನಡೆಯುತ್ತಿವೆ. ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆದುಹೋಗಿವೆ. ಆಗಸ್ಟ್ 7ರೊಳಗೆ ಒಪ್ಪಂದವನ್ನು ಅಂತಿಮಗೊಳಿಸಲು ಆಗಿರಲಿಲ್ಲ. ಒಪ್ಪಂದದ ಮಾತುಕತೆಗೆ ಅಮೆರಿಕಕ್ಕೆ ಹೋಗಿದ್ದ ಭಾರತೀಯರ ತಂಡ ಬರಿಗೈಲಿ ಮರಳಿತ್ತು. ಸೆಪ್ಟೆಂಬರ್​ನಲ್ಲಿ ಮಾತುಕತೆ ಮುಂದುವರಿಯುತ್ತದೆ ಎಂದು ಹೇಳಲಾಗಿತ್ತು. ಈಗ ಅದು ಪುನಾರಂಭಗೊಂಡಿರಬಹುದು.

ಇದನ್ನೂ ಓದಿ: ಭಾರತದೊಂದಿಗಿನ ವ್ಯಾಪಾರ ಏಕಪಕ್ಷೀಯ ವಿಪತ್ತು; ಡೊನಾಲ್ಡ್ ಟ್ರಂಪ್

ಭಾರತ ಈಗಾಗಲೇ ಯುಕೆ, ಯುಎಇ, ಇಎಫ್​ಟಿಎ ಬ್ಲಾಕ್​ನೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಅಂತಿಮಗೊಳಿಸಿದೆ. ಅಮೆರಿಕವೂ ಸೇರಿದಂತೆ ಇನ್ನೂ ಹಲವು ದೇಶಗಳೊಂದಿಗೆ ಒಪ್ಪಂದ ಕುದುರಿಸಿ ಮಾರುಕಟ್ಟೆ ವಿಸ್ತರಿಸಿಕೊಳ್ಳಲು ಭಾರತ ಯೋಜಿಸಿದೆ.

ಭಾರತ ವ್ಯಾಪಾರ ಒಪ್ಪಂದ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಅಮೆರಿಕವು ಆಗಸ್ಟ್ ತಿಂಗಳಲ್ಲಿ ಭಾರತದ ಸರಕುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ಹಾಕಿತ್ತು. ನಂತರ, ರಷ್ಯಾ ಜೊತೆ ವ್ಯವಹರಿಸುತ್ತಿರುವ ಕಾರಣವೊಡ್ಡಿ ಹೆಚ್ಚುವರಿ ಶೇ. 25ರಷ್ಟು ಟ್ಯಾರಿಫ್ ಹಾಕಿದೆ.

ಇದನ್ನೂ ಓದಿ: ಹೊಸ ಗೇಮಿಂಗ್ ಕಾಯ್ದೆ: ಉದ್ಯಮ ಪ್ರತಿನಿಧಿಗಳೊಂದಿಗೆ ಸರ್ಕಾರದ ಸಭೆ; ಇಸ್ಪೋರ್ಟ್, ಸೋಷಿಯಲ್ ಗೇಮ್​ಗಳ ಉತ್ತೇಜನಕ್ಕೆ ಮುಂದು

ಅಮೆರಿಕದೊಂದಿಗೆ ಟ್ರೇಡ್ ಡೀಲ್​ಗೆ ಏನು ತೊಡಕು?

ಅಮೆರಿಕ ತನ್ನ ಕೆಲ ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಮುಕ್ತ ಪ್ರವೇಶ ಬಯಸುತ್ತಿದೆ. ಜೋಳ, ಸೋಯಾಬೀನ್, ಸೇಬು, ಆಲ್ಮಂಡ್, ಇಥನಾಲ್ ಮೊದಲಾದ ಉತ್ಪನ್ನಗಳಿಗೆ ಭಾರತ ವಿಧಿಸುತ್ತಿರುವ ಟ್ಯಾರಿಫ್ ಅನ್ನು ನಿಲ್ಲಿಸಬೇಕು, ಅಥವಾ ಕಡಿಮೆ ಮಾಡಬೇಕು. ಅಮೆರಿಕದ ಹಾಲಿನ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಮುಕ್ತ ಅವಕಾಶ ಕೊಡಬೇಕು ಎಂಬುದು ಅಮೆರಿಕದ ಪ್ರಮುಖ ಬೇಡಿಕೆ. ಆದರೆ, ಹೀಗೆ ಮಾಡಿದರೆ ಭಾರತದ ಕೃಷಿ ಮತ್ತು ಹೈನೋದ್ಯಮಕ್ಕೆ ಧಕ್ಕೆಯಾಗುತ್ತದೆ, ಕೋಟ್ಯಂತರ ರೈತರ ಬದುಕು ಮೂರಾಬಟ್ಟೆಯಾಗುತ್ತದೆ ಎಂಬುದು ಭಾರತ ಸರ್ಕಾರಕ್ಕಿರುವ ಕಳವಳ. ಹೀಗಾಗಿ, ಅಮೆರಿಕದೊಂದಿಗೆ ಭಾರತಕ್ಕೆ ಟ್ರೇಡ್ ಡೀಲ್ ಅಂತಿಮಗೊಳಿಸಲು ಆಗುತ್ತಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ