ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

Vivek Ramaswamy Wants Elon Musk: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದಿಂದ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಭಾರತ ಮೂಲದ ವಿವೇಕ್ ರಾಮಸ್ವಾಮಿ ತಾನು ಅಮೆರಿಕ ಅಧ್ಯಕ್ಷನಾದರೆ ಇಲಾನ್ ಮಸ್ಕ್ ಅವರನ್ನು ಸಲಹೆಗಾರರನ್ನಾಗಿ ನೇಮಿಸಲು ಬಯಸುವುದಾಗಿ ಹೇಳಿದ್ದಾರೆ. ಟ್ಟಿಟ್ಟರ್​ನಲ್ಲಿ ಉದ್ಯೋಗಿ ಸಂಖ್ಯೆ ಮೊಟಕುಗೊಳಿಸಿ ಆಡಳಿತದಲ್ಲಿ ಸುಧಾರಣೆ ತಂದ ರೀತಿಯಲ್ಲಿ ಅಮೆರಿಕದ ಆಡಳಿತ ನಿರ್ವಹಿಸುವೆ ಎಂದಿದ್ದಾರೆ.

ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿ
Follow us
|

Updated on:Aug 28, 2023 | 2:49 PM

ವಾಷಿಂಗ್ಟನ್, ಆಗಸ್ಟ್ 28: ಅಮೆರಿಕದ ಅಧ್ಯಕ್ಷೀಯ ಸ್ಥಾನದ ಆಕಾಂಕ್ಷಿ ಮತ್ತು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ವಿವೇಕ್ ರಾಮಸ್ವಾಮಿ (Vivek Ramaswamy) ಅವರಿಗೆ ಇಲಾನ್ ಮಸ್ಕ್ ಮಾದರಿಯಂತೆ. ಟ್ವಿಟ್ಟರ್​ನಲ್ಲಿ ಇಲಾನ್ ಕತ್ತರಿ ಹಾಕಿ ಚೊಕ್ಕಟ ಮಾಡಿದಂತೆ ಅಮೆರಿಕ ಆಡಳಿತದಲ್ಲಿ ಸುಧಾರಣೆ ತರುವೆ ಎಂದು ಭಾರತ ಮೂಲದ 38 ವರ್ಷದ ವಿ ರಾಮಸ್ವಾಮಿ ಹೇಳಿದ್ದಾರೆ. ತಾನೊಂದು ವೇಳೆ ಅಮೆರಿಕದ ಅಧ್ಯಕ್ಷನಾಗಿದ್ದೇ ಆದಲ್ಲಿ ನನ್ನ ಸಲಹೆಗಾರನಾಗಿ ಮಸ್ಕ್ (Elon Musk) ಅವರನ್ನೇ ನೇಮಕ ಮಾಡುವುದಾಗಿ ಅವರು ತಿಳಿಸಿದ್ದಾರೆ. 2022ರಲ್ಲಿ ಟ್ವಿಟ್ಟರ್ ಅನ್ನು ಖರೀದಿಸಿದ ಬಳಿಕ ಇಲಾನ್ ಮಸ್ಕ್ ಅವರು ಉದ್ಯೋಗಿಗಳ ಸಂಖ್ಯೆ ಕಡಿತಗೊಳಿಸಿದ ಬಳಿಕ ಕಂಪನಿಯ ಕಾರ್ಯನಿರ್ವಹಣೆ ಉತ್ತಮಗೊಂಡಿತ್ತು. ಅಂಥದ್ದೇ ರೀತಿಯಲ್ಲಿ ಅಮೆರಿಕದ ಅಧ್ಯಕ್ಷೀಯ ಆಡಳಿತದ ಕಾರ್ಯಕ್ಷಮೆ ಹೆಚ್ಚಿಸುವುದಾಗಿ ವಿವೇಕ್ ರಾಮಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಒಳಗೆ ಇರದ ಮತ್ತು ಹೊಚ್ಚ ಹೊಸ ಮುಖಗಳು ನನಗೆ ಬೇಕು. ಇತ್ತೀಚೆಗೆ ಇಲಾನ್ ಮಸ್ಕ್ ಬಗ್ಗೆ ಹೆಚ್ಚೆಚ್ಚು ತಿಳಿದುಕೊಂಡು ಅಚ್ಚರಿಪಟ್ಟಿದ್ದೇನೆ. ನನಗೆ ಸಲಹೆಗಾರರಾಗಿ ಅವರು ಇರಬೇಕೆಂದು ಅಪೇಕ್ಷಿಸುತ್ತೇನೆ. ಟ್ವಿಟ್ಟರ್​ನಲ್ಲಿ ಶೇ. 75ರಷ್ಟು ಉದ್ಯೋಗಿಗಳನ್ನು ಅವರು ಲೇ ಆಫ್ ಮಾಡಿದರು. ಅದರ ಪರಿಣಾಮವಾಗಿ ಕಂಪನಿಯ ಕಾರ್ಯಕ್ಷಮತೆ ಹೆಚ್ಚಿತು ಎಂದು ಅಮೆರಿಕ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ತಿಳಿಸಿದ್ದಾರೆ.

ಟ್ವಿಟ್ಟರ್ ಅನ್ನು ಇಲಾನ್ ಮಸ್ಕ್ ಹೇಗೆ ನಿರ್ವಹಿಸುತ್ತಿದ್ದಾರೋ ಅದೇ ರೀತಿ ಸರ್ಕಾರದ ಆಡಳಿತವನ್ನು ನಡೆಸುತ್ತೇನೆ. ಶೇ. 75ರಷ್ಟು ಅನಗತ್ಯ ವೆಚ್ಚವನ್ನು ತೆಗೆದುಹಾಕುವುದು ಮತ್ತು ಆಡಳಿತದ ಕಾರ್ಯಕ್ಷಮತೆ ಹೆಚ್ಚಿಸುವುದು ಹೇಗೆಂಬುದಕ್ಕೆ ಟ್ಟಿಟ್ಟರ್ ಒಂದು ಉತ್ತಮ ನಿದರ್ಶನ ಎಂದು ಫಾಕ್ಸ್ ನ್ಯೂಸ್ ವಾಹಿನಿಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಇದನ್ನೂ ಓದಿ: Reynolds 045 Fine Carbure ಪೆನ್ ಇನ್ನು ಗತ ಇತಿಹಾಸವಾ? ರೇನಾಲ್ಡ್ಸ್ ಕಂಪನಿ ಹೇಳುವುದೇನು? ಭಾರತೀಯರಿಗೆ ಯಾಕೆ ಇದು ಅಚ್ಚುಮೆಚ್ಚು?

ರಿಪಬ್ಲಿಕನ್ ಪಕ್ಷದ ಅತ್ಯಂತ ಕಿರಿಯ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

ವಿವೇಕ್ ರಾಮಸ್ವಾಮಿ ಅಮೆರಿಕದಲ್ಲಿರುವ ಭಾರತ ಮೂಲದ ಸಮುದಾಯದ ಎರಡನೇ ತಲೆಮಾರಿಗೆ ಸೇರಿದವರು. ಅಂದರೆ, ಇವರು ಅಮೆರಿಕದಲ್ಲೇ ಹುಟ್ಟಿ ಬೆಳೆದವರು. 38 ವರ್ಷದ ವಿವೇಕ್ ರಾಮಸ್ವಾಮಿ ರಿಪಬ್ಲಿಕನ್ ಪಕ್ಷದಿಂದ ಅಮೆರಿಕ ಅಧ್ಯಕ್ಷೀಯ ಸ್ಥಾನಕ್ಕೆ ಸರ್ಧಿಸುವ ಅತ್ಯಂತ ಕಿರಿಯ ವ್ಯಕ್ತಿ ಎನಿಸಿದ್ದಾರೆ. ಭಾರತೀಯ ಅಮೆರಿಕನ್ ಸಮುದಾಯದ ನಿಕಿ ಹ್ಯಾಲೀ ಕೂಡ ಅಭ್ಯರ್ಥಿಯಾಗಲಿದ್ದಾರೆ.

ಡೊನಾಲ್ಡ್ ಟ್ರಂಪ್, ವಿವೇಕ್ ರಾಮಸ್ವಾಮಿ, ನಿಕಿ ಹ್ಯಾಲೀ ಮೊದಲಾದವರು ರಿಪಬ್ಲಿಕನ್ ಪಕ್ಷದೊಳಗೆ ಸ್ಪರ್ಧಿಸಿ, ಅಂತಿಮವಾಗಿ ಒಬ್ಬ ಅಭ್ಯರ್ಥಿಯನ್ನು ಅಮೆರಿಕ ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ಆಯ್ಕೆ ಮಾಡಲಾಗುತ್ತದೆ.

ವಿವೇಕ್ ರಾಮಸ್ವಾಮಿ ಹಾರ್ವರ್ಡ್ ವಿವಿಯಲ್ಲಿ ಜೀವಶಾಸ್ತ್ರ ಓದಿದಬಳಿಕ ಯಾಲೆ ಯೂನಿವರ್ಸಿಟಿಯಿಂದ ಕಾನೂನು ವಿದ್ಯಾಭ್ಯಾಸ ಮಾಡಿದ್ದಾರೆ. ಬಯೋಟೆಕ್ ಕಂಪನಿಗಳನ್ನು ಸ್ಥಾಪಿಸಿದ ಅವರು 40 ವರ್ಷದೊಳಗಿನ ವಯೋಮಾನದ ಅತ್ಯಂತ ಶ್ರೀಮಂತರಲ್ಲಿ ಒಬ್ಬರೆನಿಸಿದ್ದವರು.

ಇದನ್ನೂ ಓದಿ: ಚೀನಾ ಎಲ್ಲಾ ದೇಶಗಳಿಗೂ ತೊಂದರೆ ಕೊಡುವ ಪುಂಡ ದೇಶ; ತಪ್ಪಿಸಿಕೊಳ್ಳುವುದು ಕಷ್ಟ: ಓಆರ್​ಎಫ್ ವಿಪಿ ಅನಿಸಿಕೆ

ಸದ್ಯ ರಿಪಬ್ಲಿಕನ್ ಪಕ್ಷದ ಅತ್ಯಂತ ಭರವಸೆಯ ಯುವ ನಾಯಕ ಎಂದು ವಿವೇಕ್ ರಾಮಸ್ವಾಮಿ ಹೆಸರುವಾಸಿಯಾಗಿದ್ದಾರೆ. ಶಿಕ್ಷಣ ಇಲಾಖೆ, ಎಫ್​ಬಿಐ, ಎಟಿಎಫ್ ಬ್ಯೂರೋ (Bureau of Alcohol, Tobacco, Firearms and Explosives) ಸಂಸ್ಥೆಗಳನ್ನು ಮುಚ್ಚುತ್ತೇನೆಂದು ಹೇಳುತ್ತಾ ಬಂದಿದ್ದಾರೆ.

ಅಮೆರಿಕದ ರಾಜಕೀಯ ರಂಗದಲ್ಲಿ ಭಾರತೀಯ ಸಮುದಾಯದವರ ಪಾತ್ರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಅಮೆರಿಕದ ಈಗಿನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕೂಡ ಅಧ್ಯಕ್ಷೀಯ ಸ್ಥಾನದ ಆಕಾಂಕ್ಷಿ ಎನಿಸಿದ್ದರು. ಆದರೆ, ಡೆಮಾಕ್ರಾಟ್ ಪಕ್ಷದಿಂದ ಬೈಡನ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಅಮೆರಿಕದ ಕೆಲ ರಾಜ್ಯಗಳಲ್ಲಿ ಭಾರತೀಯ ಸಮುದಾಯದ ವ್ಯಕ್ತಿಗಳು ಗವರ್ನರ್ ಆಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Mon, 28 August 23

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?