AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜೊತೆ ಗಟ್ಟಿ ಸಂಬಂಧ ಇದ್ದರೆ ಅಮೆರಿಕಕ್ಕೆ ಆಗುವ ಪ್ರಯೋಜನವೇನು? ವಿವೇಕ್ ರಾಮಸ್ವಾಮಿ ಅನಿಸಿಕೆ ಇದು

India-US Relationship: ಚೀನಾ ಜೊತೆ ಆರ್ಥಿಕವಾಗಿ ಅವಲಂಬಿತವಾಗಿರುವ ಅಮೆರಿಕ ಈಗ ಆ ಬಂಧದಿಂದ ಬಿಡಿಸಿಕೊಳ್ಳಲು ಹತಾಶ ಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಭಾರತವು ಅಮೆರಿಕದ ಪಾಲಿಗೆ ವರದಾನದಂತೆ ಕಾಣುತ್ತಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿರುವ ವಿವೇಕ್ ರಾಮಸ್ವಾಮಿ ಈ ಬಗ್ಗೆ ವಿವರಣೆ ನೀಡಿದ್ದಾರೆ.

ಭಾರತದ ಜೊತೆ ಗಟ್ಟಿ ಸಂಬಂಧ ಇದ್ದರೆ ಅಮೆರಿಕಕ್ಕೆ ಆಗುವ ಪ್ರಯೋಜನವೇನು? ವಿವೇಕ್ ರಾಮಸ್ವಾಮಿ ಅನಿಸಿಕೆ ಇದು
ವಿವೇಕ್ ರಾಮಸ್ವಾಮಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 28, 2023 | 2:49 PM

Share

ನವದೆಹಲಿ, ಆಗಸ್ಟ್ 27: ಅಮೆರಿಕದಲ್ಲಿ ಈಗ ಪಕ್ಷಾತೀತವಾಗಿ ಭಾರತಪರ ಧೋರಣೆ ಕಂಡುಬಂದಿದೆ. ಚೀನಾ ಮೇಲೆ ಆರ್ಥಿಕವಾಗಿ ಅವಲಂಬಿತವಾಗಿರುವ ಅಮೆರಿಕಕ್ಕೆ ಈಗ ಭಾರತದ ನೆರವು ಬಹಳ ಅಗತ್ಯ. ಭಾರತ ಬೆಳೆದಷ್ಟೂ ಅಮೆರಿಕ ಚೀನಾದಿಂದ ದೂರವಾಗಲು ಸಾಧ್ಯವಾಗುತ್ತದೆ. ಹೀಗಾಗಿ, ಡೆಮಾಕ್ರಾಟ್ ಮತ್ತು ರಿಪಬ್ಲಿಕನ್ ಪಕ್ಷಗಳ ನಾಯಕರುಗಳು ಭಾರತದ ಜೊತೆ ಸಂಬಂಧ ಗಟ್ಟಿಗೊಳಿಸುವ ಇರಾದೆ ಹೊಂದಿದ್ದಾರೆ. 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿ ವಿವೇಕ್ ರಾಮಸ್ವಾಮಿ (Vivek Ramaswamy) ಅವರು ಭಾರತ ಮತ್ತು ಅಮೆರಿಕ ನಡುವೆ ಗಟ್ಟಿ ಸಂಬಂಧ ಇರಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚೀನಾ ಜೊತೆಗಿನ ಆರ್ಥಿಕ ಅವಲಂಬನೆಯೊಂದಿಗೆ ಮುಕ್ತರಾಗಲು ಭಾರತದೊಂದಿಗೆ ಅಮೆರಿಕದ ಸಂಬಂಧ ಗಟ್ಟಿಯಾಗಿರಬೇಕು ಎಂದು ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ಕಳುಹಿಸಿದ ವಿಡಿಯೋ ಸಂದೇಶದಲ್ಲಿ ವಿವೇಕ್ ರಾಮಸ್ವಾಮಿ ಭಾರತ ಮತ್ತು ಅಮೆರಿಕ ಸಂಬಂಧವೃದ್ಧಿಯಿಂದ ಆಗುವ ಅನುಕೂಲತೆಗಳನ್ನು ವಿಶದವಾಗಿ ತಿಳಿಸಿದ್ದಾರೆ.

ಸಮುದ್ರ ಮೂಲಕ ಚೀನಾಗೆ ಸರಕು ಸಾಗಣೆ ತಡೆಯಲು ಭಾರತದಿಂದ ಸಾಧ್ಯ

ಚೀನಾದ ಪ್ರಾಬಲ್ಯಕ್ಕೆ ಅಂಕುಶ ಹಾಕಲು ಭಾರತ ಮತ್ತು ಅಮೆರಿಕ ಮಿಲಿಟರಿ ಸ್ನೇಹದಿಂದ ಹೇಗೆ ಲಾಭ ಆಗುತ್ತದೆ ಎಂದು ರಿಪಬ್ಲಿಕನ್ ಪಕ್ಷದ ಅಮೆರಿಕ ಅಧ್ಯಕ್ಷೀಯ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ವಿವರಿಸಿದ್ದಾರೆ.

ಇದನ್ನೂ ಓದಿ: ಭಾರತದ ಫಾರೆಕ್ಸ್ ಮೀಸಲು ನಿಧಿಯಲ್ಲಿ ಭಾರೀ ಇಳಿಕೆ; 600 ಬಿಲಿಯನ್ ಡಾಲರ್ ಮಟ್ಟಕ್ಕಿಂತ ಕಡಿಮೆ

ಮಧ್ಯಪ್ರಾಚ್ಯ ದೇಶಗಳಿಂದ ಚೀನಾಗೆ ಸಾಗುವ ಹೆಚ್ಚಿನ ತೈಲ ಸರಬರಾಜು ಮಲಕಾ ಸ್ಟ್ರೇಟ್ (ಸಮುದ್ರ ಮಾರ್ಗ) ಮೂಲಕ ಹೋಗುತ್ತದೆ. ಈ ಮಲಕಾ ಸ್ಟ್ರೇಟ್ ಮಲೇಷ್ಯಾ, ಸಿಂಗಾಪುರ ಹಾದಿಯಲ್ಲಿದೆ. ಇಲ್ಲಿಗೆ ಬರುವ ಮುನ್ನ ಭಾರತಕ್ಕೆ ಸೇರಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಸಮುದ್ರ ಭಾಗದ ಮೂಲಕ ಹಡಗುಗಳು ಸಾಗಿಹೋಗಬೇಕು. ಅವಶ್ಯಕತೆ ಬಿದ್ದರೆ ಭಾರತ ಈ ಹಡಗುಗಳು ಮಲಕಾ ಸ್ಟ್ರೇಟ್​ಗೆ ಹೋಗುವ ಮುನ್ನವೇ ಅಂಡಮಾನ್ ನಿಕೋಬಾರ್ ಬಳಿ ತಡೆಯಬಹುದು ಎಂಬುದು ವಿವೇಕ್ ರಾಮಸ್ವಾಮಿ ಅವರ ತಂತ್ರ.

ರಿಪಬ್ಲಿಕನ್ ಪಕ್ಷದ ನಾಯಕರು ಬಹುತೇಕ ಭಾರತದ ಪರವಾದ ನಿಲುವು ಹೊಂದಿದ್ದಾರೆ. ಹಾಗೆಯೇ, ಆಡಳಿತಾರೂಢ ಡೆಮಾಕ್ರಾಟ್ ಪಕ್ಷದ ನಾಯಕರೂ ಕೂಡ ಭಾರತದ ಪರವಾದ ನೀತಿ ಅನುಸರಿಸುತ್ತಿದ್ದಾರೆ. ಅಮೆರಿಕದ ವಿದೇಶಾಂಗ ಖಾತೆ ಸಹಾಯಕ ಸಚಿವ ಡೊನಾಲ್ಡ್ ಲು ಅವರು ಇತ್ತೀಚೆಗೆ ಭಾರತದ ಆರ್ಥಿಕತೆ ಬಗ್ಗೆ ಮಾತನಾಡುತ್ತಾ, ಅಮೆರಿಕಕ್ಕೆ ಆಗುವ ಲಾಭವನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಮಾಮೂಲಿ ಅಕ್ಕಿ ಜೊತೆಗೆ ಬಾಸ್ಮತಿ ಅಕ್ಕಿ ರಫ್ತಿಗೂ ಕೇಂದ್ರದಿಂದ ನಿರ್ಬಂಧ; ಇಲ್ಲಿದೆ ಡೀಟೇಲ್ಸ್

‘ಭಾರತದ ಆರ್ಥಿಕತೆ ಬೆಳೆಯುವುದನ್ನು ನಾವು ಬೆಂಬಲಿಸುತ್ತೇನೆ. ಭಾರತ ಬೆಳೆದಷ್ಟೂ, ಅದಕ್ಕೆ ಲಾಭವಾಗುವುದರ ಜೊತೆಗೆ ಅಮೆರಿಕ ಹಾಗೂ ವಿಶ್ವಕ್ಕೆ ಲಾಭವಾಗುತ್ತದೆ. ಸಿರಿತನದ ಭಾರತವು ಜಾಗತಿಕ ಸಮಸ್ಯೆಗಳನ್ನು ನಿವಾರಿಸುವಷ್ಟು ಸಂಪನ್ಮೂಲ ಹೊಂದಿರುತ್ತದೆ’ ಎಂದು ಡೊನಾಲ್ಡ್ ಲು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:47 pm, Sun, 27 August 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ