AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಥನಾಲ್ ತಯಾರಿಕೆಗೆ ನಮ್ಮ ಜೋಳ ಬಳಸಿ: ಭಾರತಕ್ಕೆ ಬೇಡಿಕೆ ಇಟ್ಟ ಅಮೆರಿಕ

India Us trade talks: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಲು ಇಂದು ಎರಡೂ ದೇಶಗಳ ತಂಡಗಳಿಂದ ಮಾತುಕತೆ ಪುನಾರಂಭಗೊಂಡಿದೆ. ಈ ಮಧ್ಯೆ ಅಮೆರಿಕವು ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ರಷ್ಯಾದಿಂದ ತೈಲ ಆಮದು ಕಡಿಮೆ ಮಾಡಬೇಕು. ಡಿಫೆನ್ಸ್ ಉತ್ಪನ್ನಗಳನ್ನು ಕಡಿಮೆ ಮಾಡಬೇಕು ಎಂದಿದೆ. ಅಮೆರಿಕದಿಂದ ಜೋಳ ಖರೀದಿಸಿ ಎಥನಾಲ್ ತಯಾರಿಸಿ ಎನ್ನುವ ಬೇಡಿಕೆಯನ್ನೂ ಇಡಲಾಗಿದೆ.

ಇಥನಾಲ್ ತಯಾರಿಕೆಗೆ ನಮ್ಮ ಜೋಳ ಬಳಸಿ: ಭಾರತಕ್ಕೆ ಬೇಡಿಕೆ ಇಟ್ಟ ಅಮೆರಿಕ
ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2025 | 1:00 PM

Share

ನವದೆಹಲಿ, ಸೆಪ್ಟೆಂಬರ್ 16: ಭಾರತದೊಂದಿಗೆ ವ್ಯಾಪಾರ ಒಪ್ಪಂದ (US India trade deal) ಮಾಡಿಕೊಳ್ಳಲು ಅಮೆರಿಕ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವುದು ತಿಳಿದುಬಂದಿದೆ. ಇವತ್ತು ಎರಡೂ ದೇಶಗಳ ತಂಡಗಳ ನಡುವೆ ಹೊಸ ಸುತ್ತಿನ ಮಾತುಕತೆ ನಡೆಯುತ್ತಿರುವ ಹೊತ್ತಲ್ಲೇ ಅಮೆರಿಕದ ಪ್ರಮುಖ ಬೇಡಿಕೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿವೆ. ರಷ್ಯಾದೊಂದಿಗೆ ಭಾರತ ವ್ಯಾಪಾರ ಮೊಟಕುಗೊಳಿಸಬೇಕು ಎಂಬುದು ಒಂದು ಪ್ರಮುಖ ಬೇಡಿಕೆಯಾಗಿದೆ. ಹಾಗೆಯೇ, ಇಥನಾಲ್ ಉತ್ಪಾದನೆಗೆ ಅಮೆರಿಕದಿಂದ ಜೋಳ ಖರೀದಿಸಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆ. ಅಮೆರಿಕ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಲ್ಲಿ ಇವೆರಡು ಸೇರಿವೆ.

ರಷ್ಯಾದಿಂದ ತೈಲ ಖರೀದಿಸಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ರಂಪ್ ಅವರು ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಇನ್ನು, ಭಾರತ ಹಾಗು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡದೇ ಇರುವ ಕಾರಣಕ್ಕೆ ಶೇ. 25ರಷ್ಟು ಮೂಲ ತೆರಿಗೆಯನ್ನು ಅಮೆರಿಕ ಹಾಕಿದೆ. ವ್ಯಾಪಾರ ಒಪ್ಪಂದ ಏರ್ಪಡದೇ ಇರಲು ಕೃಷಿ ಹಾಗೂ ಸಂಬಂಧಿತ ವಲಯಗಳೇ ಕಾರಣ ಎಂಬುದು ಗಮನಾರ್ಹ.

ಇದನ್ನೂ ಓದಿ: ನಮ್ಮಿಂದ ಅವರು ಒಂದು ಜೋಳವನ್ನೂ ಕೊಳ್ಳೋದಿಲ್ಲ: ಭಾರತದ ವ್ಯಾಪಾರ ನೀತಿಯನ್ನು ಟೀಕಿಸಿದ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ

ಭಾರತವು ಕೋಟ್ಯಂತರ ಜನರ ಬದುಕಿಗೆ ಆಸರೆಯಾಗಿರುವ ಕೃಷಿ, ಮೀನುಗಾರಿಕೆ, ಡೈರಿ ಸೆಕ್ಟರ್​ಗಳನ್ನು ಶತಾಯಗತಾಯ ರಕ್ಷಿಸಲು ಪಣತೊಟ್ಟಿದೆ. ಅತ್ತ, ಅಮೆರಿಕದಲ್ಲಿ ಈ ಕೃಷಿ ಉತ್ಪನ್ನಗಳು ಹೆಚ್ಚುವರಿಯಾಗಿದ್ದು, ಅವುಗಳನ್ನು ಸಾಗಹಾಕಲು ಭಾರತದಂತಹ ದೊಡ್ಡ ಮಾರುಕಟ್ಟೆ ಬೇಕಾಗಿದೆ. ಹೀಗಾಗಿ, ಈ ಸೆಕ್ಟರ್​ಗಳನ್ನು ಮುಕ್ತಗೊಳಿಸಬೇಕೆಂದು ಅಮೆರಿಕ ಮೊದಲಿಂದಲೂ ಒತ್ತಡ ಹಾಕುತ್ತಲೇ ಇದೆ.

ಭಾರತಕ್ಕೆ ರೈತ ಮತ್ತು ಧರ್ಮ ಸಂಕಟ

ಅಮೆರಿಕದಲ್ಲಿ ಕಾರ್ಪೊರೇಟ್ ಶೈಲಿಯಲ್ಲಿ ಕೃಷಿಗಾರಿಕೆ ನಡೆಯುತ್ತದೆ. ಸರ್ಕಾರ ಕೂಡ ಸಾಕಷ್ಟು ಉತ್ತೇಜನ ನೀಡುತ್ತದೆ. ಅಲ್ಲಿ ಹಸುಗಳಿಗೆ ರಕ್ತ ಇತ್ಯಾದಿ ಮಾಂಸಮಿಶ್ರಿತ ಆಹಾರವನ್ನು ನೀಡಲಾಗುತ್ತದೆ. ಭಾರತದಲ್ಲಿ ಹಾಲನ್ನು ಪರಿಶುದ್ಧ ಆಹಾರವಾಗಿ ಪರಿಗಣಿಸಲಾಗುತ್ತದೆ. ಅಮೆರಿಕದ ಈ ಹಾಲು ಹಾಗೂ ಹಾಲಿನ ಉತ್ಪನ್ನಗಳು ಭಾರತಕ್ಕೆ ಧರ್ಮ ಸಂಕಟ ತರುತ್ತವೆ. ಈ ಕಾರಣಕ್ಕೂ ಭಾರತವು ಅಮೆರಿಕದ ಡೈರಿ ಉತ್ಪನ್ನಗಳಿಗೆ ಅವಕಾಶ ಕೊಡಲು ಹಿಂದೇಟು ಹಾಕುತ್ತಿದೆ.

ಇದನ್ನೂ ಓದಿ: ಇಥನಾಲ್ ಬಂದ ನಂತರ ಸಕ್ಕರೆ ಕಾರ್ಖಾನೆಗಳಿಗೆ ಬಂತು ಜೀವ: ನಿತಿನ್ ಗಡ್ಕರಿ

ಅಮೆರಿಕದ ಕೃಷಿ ಉತ್ಪನ್ನಗಳು ಭಾರತದಕ್ಕಿಂತ ಕಡಿಮೆ ಬೆಲೆಯದ್ದಾಗಿದೆ. ಒಂದು ವೇಳೆ ಭಾರತದ ಮಾರುಕಟ್ಟೆಯಲ್ಲಿ ಅಮೆರಿಕದ ಈ ಉತ್ಪನ್ನಗಳನ್ನು ಮುಕ್ತವಾಗಿ ಬರಲು ಬಿಟ್ಟರೆ ಭಾರತೀಯ ಕೃಷಿಕರು, ರೈತರಿಗೆ ದೊಡ್ಡ ಹೊಡೆತ ಬೀಳುವ ಸಂಭವ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ