AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಥನಾಲ್ ತಯಾರಿಕೆಗೆ ನಮ್ಮ ಜೋಳ ಬಳಸಿ: ಭಾರತಕ್ಕೆ ಬೇಡಿಕೆ ಇಟ್ಟ ಅಮೆರಿಕ

India Us trade talks: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಲು ಇಂದು ಎರಡೂ ದೇಶಗಳ ತಂಡಗಳಿಂದ ಮಾತುಕತೆ ಪುನಾರಂಭಗೊಂಡಿದೆ. ಈ ಮಧ್ಯೆ ಅಮೆರಿಕವು ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ರಷ್ಯಾದಿಂದ ತೈಲ ಆಮದು ಕಡಿಮೆ ಮಾಡಬೇಕು. ಡಿಫೆನ್ಸ್ ಉತ್ಪನ್ನಗಳನ್ನು ಕಡಿಮೆ ಮಾಡಬೇಕು ಎಂದಿದೆ. ಅಮೆರಿಕದಿಂದ ಜೋಳ ಖರೀದಿಸಿ ಎಥನಾಲ್ ತಯಾರಿಸಿ ಎನ್ನುವ ಬೇಡಿಕೆಯನ್ನೂ ಇಡಲಾಗಿದೆ.

ಇಥನಾಲ್ ತಯಾರಿಕೆಗೆ ನಮ್ಮ ಜೋಳ ಬಳಸಿ: ಭಾರತಕ್ಕೆ ಬೇಡಿಕೆ ಇಟ್ಟ ಅಮೆರಿಕ
ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2025 | 1:00 PM

Share

ನವದೆಹಲಿ, ಸೆಪ್ಟೆಂಬರ್ 16: ಭಾರತದೊಂದಿಗೆ ವ್ಯಾಪಾರ ಒಪ್ಪಂದ (US India trade deal) ಮಾಡಿಕೊಳ್ಳಲು ಅಮೆರಿಕ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವುದು ತಿಳಿದುಬಂದಿದೆ. ಇವತ್ತು ಎರಡೂ ದೇಶಗಳ ತಂಡಗಳ ನಡುವೆ ಹೊಸ ಸುತ್ತಿನ ಮಾತುಕತೆ ನಡೆಯುತ್ತಿರುವ ಹೊತ್ತಲ್ಲೇ ಅಮೆರಿಕದ ಪ್ರಮುಖ ಬೇಡಿಕೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿವೆ. ರಷ್ಯಾದೊಂದಿಗೆ ಭಾರತ ವ್ಯಾಪಾರ ಮೊಟಕುಗೊಳಿಸಬೇಕು ಎಂಬುದು ಒಂದು ಪ್ರಮುಖ ಬೇಡಿಕೆಯಾಗಿದೆ. ಹಾಗೆಯೇ, ಇಥನಾಲ್ ಉತ್ಪಾದನೆಗೆ ಅಮೆರಿಕದಿಂದ ಜೋಳ ಖರೀದಿಸಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆ. ಅಮೆರಿಕ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಲ್ಲಿ ಇವೆರಡು ಸೇರಿವೆ.

ರಷ್ಯಾದಿಂದ ತೈಲ ಖರೀದಿಸಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ರಂಪ್ ಅವರು ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಇನ್ನು, ಭಾರತ ಹಾಗು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡದೇ ಇರುವ ಕಾರಣಕ್ಕೆ ಶೇ. 25ರಷ್ಟು ಮೂಲ ತೆರಿಗೆಯನ್ನು ಅಮೆರಿಕ ಹಾಕಿದೆ. ವ್ಯಾಪಾರ ಒಪ್ಪಂದ ಏರ್ಪಡದೇ ಇರಲು ಕೃಷಿ ಹಾಗೂ ಸಂಬಂಧಿತ ವಲಯಗಳೇ ಕಾರಣ ಎಂಬುದು ಗಮನಾರ್ಹ.

ಇದನ್ನೂ ಓದಿ: ನಮ್ಮಿಂದ ಅವರು ಒಂದು ಜೋಳವನ್ನೂ ಕೊಳ್ಳೋದಿಲ್ಲ: ಭಾರತದ ವ್ಯಾಪಾರ ನೀತಿಯನ್ನು ಟೀಕಿಸಿದ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ

ಭಾರತವು ಕೋಟ್ಯಂತರ ಜನರ ಬದುಕಿಗೆ ಆಸರೆಯಾಗಿರುವ ಕೃಷಿ, ಮೀನುಗಾರಿಕೆ, ಡೈರಿ ಸೆಕ್ಟರ್​ಗಳನ್ನು ಶತಾಯಗತಾಯ ರಕ್ಷಿಸಲು ಪಣತೊಟ್ಟಿದೆ. ಅತ್ತ, ಅಮೆರಿಕದಲ್ಲಿ ಈ ಕೃಷಿ ಉತ್ಪನ್ನಗಳು ಹೆಚ್ಚುವರಿಯಾಗಿದ್ದು, ಅವುಗಳನ್ನು ಸಾಗಹಾಕಲು ಭಾರತದಂತಹ ದೊಡ್ಡ ಮಾರುಕಟ್ಟೆ ಬೇಕಾಗಿದೆ. ಹೀಗಾಗಿ, ಈ ಸೆಕ್ಟರ್​ಗಳನ್ನು ಮುಕ್ತಗೊಳಿಸಬೇಕೆಂದು ಅಮೆರಿಕ ಮೊದಲಿಂದಲೂ ಒತ್ತಡ ಹಾಕುತ್ತಲೇ ಇದೆ.

ಭಾರತಕ್ಕೆ ರೈತ ಮತ್ತು ಧರ್ಮ ಸಂಕಟ

ಅಮೆರಿಕದಲ್ಲಿ ಕಾರ್ಪೊರೇಟ್ ಶೈಲಿಯಲ್ಲಿ ಕೃಷಿಗಾರಿಕೆ ನಡೆಯುತ್ತದೆ. ಸರ್ಕಾರ ಕೂಡ ಸಾಕಷ್ಟು ಉತ್ತೇಜನ ನೀಡುತ್ತದೆ. ಅಲ್ಲಿ ಹಸುಗಳಿಗೆ ರಕ್ತ ಇತ್ಯಾದಿ ಮಾಂಸಮಿಶ್ರಿತ ಆಹಾರವನ್ನು ನೀಡಲಾಗುತ್ತದೆ. ಭಾರತದಲ್ಲಿ ಹಾಲನ್ನು ಪರಿಶುದ್ಧ ಆಹಾರವಾಗಿ ಪರಿಗಣಿಸಲಾಗುತ್ತದೆ. ಅಮೆರಿಕದ ಈ ಹಾಲು ಹಾಗೂ ಹಾಲಿನ ಉತ್ಪನ್ನಗಳು ಭಾರತಕ್ಕೆ ಧರ್ಮ ಸಂಕಟ ತರುತ್ತವೆ. ಈ ಕಾರಣಕ್ಕೂ ಭಾರತವು ಅಮೆರಿಕದ ಡೈರಿ ಉತ್ಪನ್ನಗಳಿಗೆ ಅವಕಾಶ ಕೊಡಲು ಹಿಂದೇಟು ಹಾಕುತ್ತಿದೆ.

ಇದನ್ನೂ ಓದಿ: ಇಥನಾಲ್ ಬಂದ ನಂತರ ಸಕ್ಕರೆ ಕಾರ್ಖಾನೆಗಳಿಗೆ ಬಂತು ಜೀವ: ನಿತಿನ್ ಗಡ್ಕರಿ

ಅಮೆರಿಕದ ಕೃಷಿ ಉತ್ಪನ್ನಗಳು ಭಾರತದಕ್ಕಿಂತ ಕಡಿಮೆ ಬೆಲೆಯದ್ದಾಗಿದೆ. ಒಂದು ವೇಳೆ ಭಾರತದ ಮಾರುಕಟ್ಟೆಯಲ್ಲಿ ಅಮೆರಿಕದ ಈ ಉತ್ಪನ್ನಗಳನ್ನು ಮುಕ್ತವಾಗಿ ಬರಲು ಬಿಟ್ಟರೆ ಭಾರತೀಯ ಕೃಷಿಕರು, ರೈತರಿಗೆ ದೊಡ್ಡ ಹೊಡೆತ ಬೀಳುವ ಸಂಭವ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು