AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ತರಕಾರಿ ಬೆಲೆ ಎಷ್ಟು ಹೆಚ್ಚಿದೆ? ಯಾವಾಗ ಬೆಲೆ ಇಳಿಕೆ ಆಗುತ್ತೆ? ಆರ್​ಬಿಐ ಸಮಾಧಾನ ಇಲ್ಲಿದೆ

RBI Expectation On Vegetable Price: ಟೊಮೆಟೋ ಸೇರಿದಂತೆ ಭಾರತದಲ್ಲಿ ತರಕಾರಿ ಬೆಲೆ ಬಹಳ ಹೆಚ್ಚಾಗಿದೆ. ಇದರ ಪರಿಣಾಮ ಹಣದುಬ್ಬರ ಶೇ. 7.44ರ ಮಟ್ಟಕ್ಕೆ ಹೋಗುವಂತೆ ಮಾಡಿದೆ. ಜುಲೈನಿಂದ ಹೆಚ್ಚಳ ಕಂಡಿದ್ದ ತರಕಾರಿ ಬೆಲೆ ಸೆಪ್ಟಂಬರ್​ನಿಂದ ಕಡಿಮೆ ಆಗಬಹುದು ಎಂದು ಆರ್​ಬಿಐ ನಿರೀಕ್ಷಿಸಿದೆ.

ಭಾರತದಲ್ಲಿ ತರಕಾರಿ ಬೆಲೆ ಎಷ್ಟು ಹೆಚ್ಚಿದೆ? ಯಾವಾಗ ಬೆಲೆ ಇಳಿಕೆ ಆಗುತ್ತೆ? ಆರ್​ಬಿಐ ಸಮಾಧಾನ ಇಲ್ಲಿದೆ
ತರಕಾರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 24, 2023 | 11:35 AM

Share

ನವದೆಹಲಿ, ಆಗಸ್ಟ್ 24: ಭಾರತದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋದಿಂದ ಶುರುವಾದ ಬೆಲೆ ಏರಿಕೆ, ಈಗ ಬಹುತೇಕ ಎಲ್ಲಾ ತರಕಾರಿಗಳನ್ನೂ ದುಬಾರಿಯನ್ನಾಗಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ತರಕಾರಿ ಬೆಲೆ (Vegetable Price) ಶೇ. 37ರಷ್ಟು ಹೆಚ್ಚಿದೆ. ಟೊಮೆಟೋ ಬೆಲೆಯಂತೂ ಶೇ. 201ರಷ್ಟು ಹೆಚ್ಚಾಗಿದೆ. ಈರುಳ್ಳಿ ಬೆಲೆ ಏರತೊಡಗಿದೆ. ಈ ಆಹಾರವಸ್ತುಗಳ ಬೆಲೆ ಏರಿಕೆ ಪರಿಣಾಮ ಜುಲೈ ತಿಂಗಳಲ್ಲಿ ಹಣದುಬ್ಬರ (Inflation) ಶೇ. 7.44ರಷ್ಟು ಮಟ್ಟಕ್ಕೆ ಹೋಗಿದೆ. ಇದು ಕಳೆದ 15 ತಿಂಗಳಲ್ಲೇ ಗರಿಷ್ಠ ಹಣದುಬ್ಬರ ಎನಿಸಿದೆ. ಆರ್​ಬಿಐನ ತಾಳಿಕೆ ಮಿತಿಯ ಒಳಗಿದ್ದ ಹಣದುಬ್ಬರ ಈಗ ಕೈಮೀರಿ ಹೋಗುವಂತಿದೆ. ಸರ್ಕಾರ ಇನ್ನಷ್ಟು ಹಣದುಬ್ಬರ ಹೆಚ್ಚಳ ತಪ್ಪಿಸಲು ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಹಾಕಿದೆ. ಸಕ್ಕರೆ ರಫ್ತು ನಿಷೇಧಿಸುವ ಆಲೋಚನೆಯಲ್ಲಿದೆ.

ಸೆಪ್ಟೆಂಬರ್​ನಲ್ಲಿ ತರಕಾರಿ ಬೆಲೆ ಇಳಿಕೆ ಸಾಧ್ಯತೆ

ಟೊಮೆಟೋ ಇತ್ಯಾದಿ ತರಕಾರಿ ಬೆಲೆಗಳ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ತುಸು ಕೊಡುವ ಸುದ್ದಿಯನ್ನು ಆರ್​ಬಿಐ ಕೊಟ್ಟಿದೆ. ಸೆಪ್ಟೆಂಬರ್​ನಿಂದ ತರಕಾರಿ ಬೆಲೆಗಳು ಕಡಿಮೆ ಆಗಬಹುದು ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: ಭಾರತದಿಂದ ಏಳು ವರ್ಷದಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತು ನಿಷೇಧ ಸಾಧ್ಯತೆ

ಜುಲೈನಲ್ಲಿ ಏರತೊಡಗಿದ ತರಕಾರಿ ಬೆಲೆಗಳು ಕಡಿಮೆ ಆಗತೊಡಗಿವೆ. ಹೊಸ ತರಕಾರಿ ಆವಕದಿಂದ ಬೆಲೆ ಕಡಿಮೆ ಆಗುತ್ತಿದೆ. ಈರುಳ್ಳಿ ಬೆಲೆ ಕೈಮೀರಿ ಹೋಗುವ ಮುನ್ನ ತಹಬದಿಗೆ ತರಲಾಗುತ್ತಿದೆ. ಸೆಪ್ಟಂಬರ್​ನಿಂದ ತರಕಾರಿ ಹಣದುಬ್ಬರ ಸಾಕಷ್ಟು ಕಡಿಮೆ ಆಗಬಹುದು ಎಂದು ನಿರೀಕ್ಷಿಸಿದ್ದೇವೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆಗಸ್ಟ್ 23ರಂದು ಹೇಳಿದ್ದಾರೆ.

ಜಾಗತಿಕ ರಾಜಕೀಯ ಬಿಕ್ಕಟ್ಟುಗಳಿಂದಾಗಿ ಆಹಾರ ಬೆಲೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದ್ದರೂ ಬೇಳೆ ಕಾಳುಗಳ ಬೆಲೆ ನಿಯಂತ್ರಣದಲ್ಲಿ ಇರುವ ಸಾಧ್ಯತೆ ಇದೆ. ಆದರೆ, ಆಹಾರ ವಸ್ತು ಬೆಲೆ ಏರಿಕೆಯ ಬಿಸಿ ಪದೇ ಪದೇ ತಾಕುತ್ತಿರುವುದರಿಂದ ಹಣದುಬ್ಬರದ ಮೇಲೆ ಪರಿಣಾಮ ಬೀರುತ್ತಿದೆ. ನಾವು ಈ ಬಗ್ಗೆ ನಿಗಾ ಇಟ್ಟಿದ್ದೇವೆ ಎಂದು ಆರ್​ಬಿಐ ಗವರ್ನರ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು