Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ತರಕಾರಿ ಬೆಲೆ ಎಷ್ಟು ಹೆಚ್ಚಿದೆ? ಯಾವಾಗ ಬೆಲೆ ಇಳಿಕೆ ಆಗುತ್ತೆ? ಆರ್​ಬಿಐ ಸಮಾಧಾನ ಇಲ್ಲಿದೆ

RBI Expectation On Vegetable Price: ಟೊಮೆಟೋ ಸೇರಿದಂತೆ ಭಾರತದಲ್ಲಿ ತರಕಾರಿ ಬೆಲೆ ಬಹಳ ಹೆಚ್ಚಾಗಿದೆ. ಇದರ ಪರಿಣಾಮ ಹಣದುಬ್ಬರ ಶೇ. 7.44ರ ಮಟ್ಟಕ್ಕೆ ಹೋಗುವಂತೆ ಮಾಡಿದೆ. ಜುಲೈನಿಂದ ಹೆಚ್ಚಳ ಕಂಡಿದ್ದ ತರಕಾರಿ ಬೆಲೆ ಸೆಪ್ಟಂಬರ್​ನಿಂದ ಕಡಿಮೆ ಆಗಬಹುದು ಎಂದು ಆರ್​ಬಿಐ ನಿರೀಕ್ಷಿಸಿದೆ.

ಭಾರತದಲ್ಲಿ ತರಕಾರಿ ಬೆಲೆ ಎಷ್ಟು ಹೆಚ್ಚಿದೆ? ಯಾವಾಗ ಬೆಲೆ ಇಳಿಕೆ ಆಗುತ್ತೆ? ಆರ್​ಬಿಐ ಸಮಾಧಾನ ಇಲ್ಲಿದೆ
ತರಕಾರಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 24, 2023 | 11:35 AM

ನವದೆಹಲಿ, ಆಗಸ್ಟ್ 24: ಭಾರತದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋದಿಂದ ಶುರುವಾದ ಬೆಲೆ ಏರಿಕೆ, ಈಗ ಬಹುತೇಕ ಎಲ್ಲಾ ತರಕಾರಿಗಳನ್ನೂ ದುಬಾರಿಯನ್ನಾಗಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ತರಕಾರಿ ಬೆಲೆ (Vegetable Price) ಶೇ. 37ರಷ್ಟು ಹೆಚ್ಚಿದೆ. ಟೊಮೆಟೋ ಬೆಲೆಯಂತೂ ಶೇ. 201ರಷ್ಟು ಹೆಚ್ಚಾಗಿದೆ. ಈರುಳ್ಳಿ ಬೆಲೆ ಏರತೊಡಗಿದೆ. ಈ ಆಹಾರವಸ್ತುಗಳ ಬೆಲೆ ಏರಿಕೆ ಪರಿಣಾಮ ಜುಲೈ ತಿಂಗಳಲ್ಲಿ ಹಣದುಬ್ಬರ (Inflation) ಶೇ. 7.44ರಷ್ಟು ಮಟ್ಟಕ್ಕೆ ಹೋಗಿದೆ. ಇದು ಕಳೆದ 15 ತಿಂಗಳಲ್ಲೇ ಗರಿಷ್ಠ ಹಣದುಬ್ಬರ ಎನಿಸಿದೆ. ಆರ್​ಬಿಐನ ತಾಳಿಕೆ ಮಿತಿಯ ಒಳಗಿದ್ದ ಹಣದುಬ್ಬರ ಈಗ ಕೈಮೀರಿ ಹೋಗುವಂತಿದೆ. ಸರ್ಕಾರ ಇನ್ನಷ್ಟು ಹಣದುಬ್ಬರ ಹೆಚ್ಚಳ ತಪ್ಪಿಸಲು ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಹಾಕಿದೆ. ಸಕ್ಕರೆ ರಫ್ತು ನಿಷೇಧಿಸುವ ಆಲೋಚನೆಯಲ್ಲಿದೆ.

ಸೆಪ್ಟೆಂಬರ್​ನಲ್ಲಿ ತರಕಾರಿ ಬೆಲೆ ಇಳಿಕೆ ಸಾಧ್ಯತೆ

ಟೊಮೆಟೋ ಇತ್ಯಾದಿ ತರಕಾರಿ ಬೆಲೆಗಳ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ತುಸು ಕೊಡುವ ಸುದ್ದಿಯನ್ನು ಆರ್​ಬಿಐ ಕೊಟ್ಟಿದೆ. ಸೆಪ್ಟೆಂಬರ್​ನಿಂದ ತರಕಾರಿ ಬೆಲೆಗಳು ಕಡಿಮೆ ಆಗಬಹುದು ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: ಭಾರತದಿಂದ ಏಳು ವರ್ಷದಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತು ನಿಷೇಧ ಸಾಧ್ಯತೆ

ಜುಲೈನಲ್ಲಿ ಏರತೊಡಗಿದ ತರಕಾರಿ ಬೆಲೆಗಳು ಕಡಿಮೆ ಆಗತೊಡಗಿವೆ. ಹೊಸ ತರಕಾರಿ ಆವಕದಿಂದ ಬೆಲೆ ಕಡಿಮೆ ಆಗುತ್ತಿದೆ. ಈರುಳ್ಳಿ ಬೆಲೆ ಕೈಮೀರಿ ಹೋಗುವ ಮುನ್ನ ತಹಬದಿಗೆ ತರಲಾಗುತ್ತಿದೆ. ಸೆಪ್ಟಂಬರ್​ನಿಂದ ತರಕಾರಿ ಹಣದುಬ್ಬರ ಸಾಕಷ್ಟು ಕಡಿಮೆ ಆಗಬಹುದು ಎಂದು ನಿರೀಕ್ಷಿಸಿದ್ದೇವೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆಗಸ್ಟ್ 23ರಂದು ಹೇಳಿದ್ದಾರೆ.

ಜಾಗತಿಕ ರಾಜಕೀಯ ಬಿಕ್ಕಟ್ಟುಗಳಿಂದಾಗಿ ಆಹಾರ ಬೆಲೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದ್ದರೂ ಬೇಳೆ ಕಾಳುಗಳ ಬೆಲೆ ನಿಯಂತ್ರಣದಲ್ಲಿ ಇರುವ ಸಾಧ್ಯತೆ ಇದೆ. ಆದರೆ, ಆಹಾರ ವಸ್ತು ಬೆಲೆ ಏರಿಕೆಯ ಬಿಸಿ ಪದೇ ಪದೇ ತಾಕುತ್ತಿರುವುದರಿಂದ ಹಣದುಬ್ಬರದ ಮೇಲೆ ಪರಿಣಾಮ ಬೀರುತ್ತಿದೆ. ನಾವು ಈ ಬಗ್ಗೆ ನಿಗಾ ಇಟ್ಟಿದ್ದೇವೆ ಎಂದು ಆರ್​ಬಿಐ ಗವರ್ನರ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್