ಭಾರತದಲ್ಲಿ ತರಕಾರಿ ಬೆಲೆ ಎಷ್ಟು ಹೆಚ್ಚಿದೆ? ಯಾವಾಗ ಬೆಲೆ ಇಳಿಕೆ ಆಗುತ್ತೆ? ಆರ್​ಬಿಐ ಸಮಾಧಾನ ಇಲ್ಲಿದೆ

RBI Expectation On Vegetable Price: ಟೊಮೆಟೋ ಸೇರಿದಂತೆ ಭಾರತದಲ್ಲಿ ತರಕಾರಿ ಬೆಲೆ ಬಹಳ ಹೆಚ್ಚಾಗಿದೆ. ಇದರ ಪರಿಣಾಮ ಹಣದುಬ್ಬರ ಶೇ. 7.44ರ ಮಟ್ಟಕ್ಕೆ ಹೋಗುವಂತೆ ಮಾಡಿದೆ. ಜುಲೈನಿಂದ ಹೆಚ್ಚಳ ಕಂಡಿದ್ದ ತರಕಾರಿ ಬೆಲೆ ಸೆಪ್ಟಂಬರ್​ನಿಂದ ಕಡಿಮೆ ಆಗಬಹುದು ಎಂದು ಆರ್​ಬಿಐ ನಿರೀಕ್ಷಿಸಿದೆ.

ಭಾರತದಲ್ಲಿ ತರಕಾರಿ ಬೆಲೆ ಎಷ್ಟು ಹೆಚ್ಚಿದೆ? ಯಾವಾಗ ಬೆಲೆ ಇಳಿಕೆ ಆಗುತ್ತೆ? ಆರ್​ಬಿಐ ಸಮಾಧಾನ ಇಲ್ಲಿದೆ
ತರಕಾರಿ
Follow us
|

Updated on: Aug 24, 2023 | 11:35 AM

ನವದೆಹಲಿ, ಆಗಸ್ಟ್ 24: ಭಾರತದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋದಿಂದ ಶುರುವಾದ ಬೆಲೆ ಏರಿಕೆ, ಈಗ ಬಹುತೇಕ ಎಲ್ಲಾ ತರಕಾರಿಗಳನ್ನೂ ದುಬಾರಿಯನ್ನಾಗಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ತರಕಾರಿ ಬೆಲೆ (Vegetable Price) ಶೇ. 37ರಷ್ಟು ಹೆಚ್ಚಿದೆ. ಟೊಮೆಟೋ ಬೆಲೆಯಂತೂ ಶೇ. 201ರಷ್ಟು ಹೆಚ್ಚಾಗಿದೆ. ಈರುಳ್ಳಿ ಬೆಲೆ ಏರತೊಡಗಿದೆ. ಈ ಆಹಾರವಸ್ತುಗಳ ಬೆಲೆ ಏರಿಕೆ ಪರಿಣಾಮ ಜುಲೈ ತಿಂಗಳಲ್ಲಿ ಹಣದುಬ್ಬರ (Inflation) ಶೇ. 7.44ರಷ್ಟು ಮಟ್ಟಕ್ಕೆ ಹೋಗಿದೆ. ಇದು ಕಳೆದ 15 ತಿಂಗಳಲ್ಲೇ ಗರಿಷ್ಠ ಹಣದುಬ್ಬರ ಎನಿಸಿದೆ. ಆರ್​ಬಿಐನ ತಾಳಿಕೆ ಮಿತಿಯ ಒಳಗಿದ್ದ ಹಣದುಬ್ಬರ ಈಗ ಕೈಮೀರಿ ಹೋಗುವಂತಿದೆ. ಸರ್ಕಾರ ಇನ್ನಷ್ಟು ಹಣದುಬ್ಬರ ಹೆಚ್ಚಳ ತಪ್ಪಿಸಲು ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಹಾಕಿದೆ. ಸಕ್ಕರೆ ರಫ್ತು ನಿಷೇಧಿಸುವ ಆಲೋಚನೆಯಲ್ಲಿದೆ.

ಸೆಪ್ಟೆಂಬರ್​ನಲ್ಲಿ ತರಕಾರಿ ಬೆಲೆ ಇಳಿಕೆ ಸಾಧ್ಯತೆ

ಟೊಮೆಟೋ ಇತ್ಯಾದಿ ತರಕಾರಿ ಬೆಲೆಗಳ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ತುಸು ಕೊಡುವ ಸುದ್ದಿಯನ್ನು ಆರ್​ಬಿಐ ಕೊಟ್ಟಿದೆ. ಸೆಪ್ಟೆಂಬರ್​ನಿಂದ ತರಕಾರಿ ಬೆಲೆಗಳು ಕಡಿಮೆ ಆಗಬಹುದು ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: ಭಾರತದಿಂದ ಏಳು ವರ್ಷದಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತು ನಿಷೇಧ ಸಾಧ್ಯತೆ

ಜುಲೈನಲ್ಲಿ ಏರತೊಡಗಿದ ತರಕಾರಿ ಬೆಲೆಗಳು ಕಡಿಮೆ ಆಗತೊಡಗಿವೆ. ಹೊಸ ತರಕಾರಿ ಆವಕದಿಂದ ಬೆಲೆ ಕಡಿಮೆ ಆಗುತ್ತಿದೆ. ಈರುಳ್ಳಿ ಬೆಲೆ ಕೈಮೀರಿ ಹೋಗುವ ಮುನ್ನ ತಹಬದಿಗೆ ತರಲಾಗುತ್ತಿದೆ. ಸೆಪ್ಟಂಬರ್​ನಿಂದ ತರಕಾರಿ ಹಣದುಬ್ಬರ ಸಾಕಷ್ಟು ಕಡಿಮೆ ಆಗಬಹುದು ಎಂದು ನಿರೀಕ್ಷಿಸಿದ್ದೇವೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆಗಸ್ಟ್ 23ರಂದು ಹೇಳಿದ್ದಾರೆ.

ಜಾಗತಿಕ ರಾಜಕೀಯ ಬಿಕ್ಕಟ್ಟುಗಳಿಂದಾಗಿ ಆಹಾರ ಬೆಲೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದ್ದರೂ ಬೇಳೆ ಕಾಳುಗಳ ಬೆಲೆ ನಿಯಂತ್ರಣದಲ್ಲಿ ಇರುವ ಸಾಧ್ಯತೆ ಇದೆ. ಆದರೆ, ಆಹಾರ ವಸ್ತು ಬೆಲೆ ಏರಿಕೆಯ ಬಿಸಿ ಪದೇ ಪದೇ ತಾಕುತ್ತಿರುವುದರಿಂದ ಹಣದುಬ್ಬರದ ಮೇಲೆ ಪರಿಣಾಮ ಬೀರುತ್ತಿದೆ. ನಾವು ಈ ಬಗ್ಗೆ ನಿಗಾ ಇಟ್ಟಿದ್ದೇವೆ ಎಂದು ಆರ್​ಬಿಐ ಗವರ್ನರ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್