AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್

Venu Srinivasan exit from Tata Trust's Bai Hirabai Charitable trust: ದಿವಂಗತ ರತನ್ ಟಾಟಾ ಅವರಿಂದ ಟ್ರಸ್ಟೀ ಆಗಿ ನೇಮಕಾತಿ ಅಗಿದ್ದ ವೇಣು ಶ್ರೀನಿವಾಸನ್ ಅವರು ಹೊರಬಿದ್ದಿದ್ದಾರೆ. ಟಾಟಾ ಟ್ರಸ್ಟ್ಸ್ ಅಡಿಗೆ ಬರುವ ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ನಲ್ಲಿ ಅವರು ಒಬ್ಬ ಟ್ರಸ್ಟೀ ಆಗಿದ್ದರು. ಈ ಟ್ರಸ್ಟ್ ನಿಬಂಧನೆಗಳ ಪ್ರಕಾರ ಪಾರ್ಸಿ ಸಮುದಾಯದವರು ಮಾತ್ರ ಟ್ರಸ್ಟೀ ಆಗಬಹುದು ಎಂದು ಮಾಜಿ ಟ್ರಸ್ಟೀ ಮೆಹ್ಲೀ ಮಿಸ್ತ್ರಿ ಆಕ್ಷೇಪ ಎತ್ತಿದ್ದಾರೆ.

ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್
ಟಾಟಾImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 05, 2026 | 12:32 PM

Share

ನವದೆಹಲಿ, ಏಪ್ರಿಲ್ 5: ಟಾಟಾ ಟ್ರಸ್ಟ್ಸ್ ಅಡಿಗೆ ಬರುವ ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ನಿಂದ ವೇಣು ಶ್ರೀನಿವಾಸನ್ (Venu Srinivasan) ಅವರು ಹೊರಬಿದ್ದಿದ್ದಾರೆ. ನಿಯಮಗಳ ಪ್ರಕಾರ ಟ್ರಸ್ಟೀ ಆಗಿ ಕೆಲಸ ಮಾಡಲು ಅರ್ಹತೆ ಹೊಂದಿಲ್ಲ ಎನ್ನುವ ತಕರಾರು ಬಂದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾಜಿ ಟ್ರಸ್ಟೀ ಮೆಹ್ಲೀ ಮಿಸ್ತ್ರಿ ಅವರು ಟ್ರಸ್ಟೀಗಳ ಆಯ್ಕೆ ಅಕ್ರಮವಾಗಿ ಆಗಿದೆ ಎಂದು ಆಕ್ಷೇಪ ಸಲ್ಲಿಕೆ ಮಾಡಿದ್ದರು.

ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ಗೆ (Bai Hirabai Charitable Trust) ವೇಣು ಶ್ರೀನಿವಾಸನ್ ಅವರನ್ನು ಟ್ರಸ್ಟೀ ಆಗಿ ಮಾಡಿದ್ದೇ ರತನ್ ಟಾಟಾ. ಆಗಲೇ ಈ ನೇಮಕಾತಿ ಬಗ್ಗೆ ತಕರಾರುಗಳು ಮತ್ತು ಚರ್ಚೆಗಳು ನಡೆದಿದ್ದವು. ಟ್ರಸ್ಟ್​ನಲ್ಲಿ ಅಕ್ರಮ ನಡೆದಿದ್ದು ಅದರ ತನಿಖೆ ನಡೆಸಿಸಬೇಕೆಂದು ಮೆಹ್ಲಿ ಮಿಸ್ತ್ರಿ ಅವರು ಮಹಾರಾಷ್ಟ್ರ ಚಾರಿಟಿ ಕಮಿಷನರ್ ಎದುರು ಅಫಿಡವಿಟ್ ಸಲ್ಲಿಸಿದ್ದಾರೆ. ವೇಣು ಶ್ರೀನಿವಾಸನ್ ಮತ್ತು ವಿಜಯ್ ಸಿಂಗ್ ಅವರ ನೇಮಕಾತಿಯನ್ನು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್​ನಿಂದ ಹೈಟೆಕ್ ಟೋಲ್​ಬೂತ್; ಯುಆನ್, ಕ್ರಿಪ್ಟೋದಲ್ಲಿ ಟೋಲ್ ಕಟ್ಟಿರಿ, ಸೀಕ್ರೆಟ್ ಕೋಡ್ ಪಡೆಯಿರಿ

ವೇಣು ಶ್ರೀನಿವಾಸನ್ ನೇಮಕಾತಿಯಲ್ಲಿ ಏನಿದೆ ಅಕ್ರಮ?

ಟಾಟಾ ಕುಟುಂಬದಲ್ಲಿ ಹಲವು ಟ್ರಸ್ಟ್​ಗಳು ಕಾರ್ಯನಿರ್ವಹಿಸುತ್ತಿವೆ. ಅವೆಲ್ಲವನ್ನು ಕೂಡ ಸರ್ ರತನ್ ಟಾಟಾ ಟ್ರಸ್ಟ್ ಅಡಿಗೆ ಸೇರಿಸಲಾಗಿದೆ. ಈ ಟ್ರಸ್ಟ್​ಗಳಲ್ಲಿ ಬಾಯ್ ಹೀರಾಬಾಯ್ ಜಮ್​ಶೆಟ್​ಜಿ ಟಾಟಾ ನವಸಾರಿ ಚಾರಿಟಬಲ್ ಇನ್ಸ್​ಟಿಟ್ಯೂಶನ್​ನ ಟ್ರಸ್ಟ್ ಡೀಡ್ ಆಗಿದ್ದು 1923ರಲ್ಲಿ. ಈ ಟ್ರಸ್ಟ್​ನ ನಿಬಂಧನೆಗಳ ಪ್ರಕಾರ ಪಾರ್ಸೀ ಸಮುದಾಯದವರೇ ಇದರ ಟ್ರಸ್ಟೀಗಳಾಗಬೇಕು ಎಂದಿದೆ.

ಪ್ರಸಕ್ತ ಟ್ರಸ್ಟೀಗಳಾಗಿರುವ ವೇಣು ಶ್ರೀನಿವಾಸನ್ ಮತ್ತು ವಿಜಯ್ ಸಿಂಗ್ ಅವರು ಪಾರ್ಸಿ ಸಮುದಾಯಕ್ಕೆ ಸೇರಿದವರಲ್ಲ. ಹಿಂದೆ ಟ್ರಸ್ಟೀ ಆಗಿದ್ದ ಆರ್ ಕೃಷ್ಣಕುಮಾರ್ ಅವರೂ ಪಾರ್ಸಿ ಸಮುದಾಯದವರಲ್ಲ. ಹೀಗಾಗಿ, ಈ ನೇಮಕಾತಿಗಳು ಮೂಲ ನಿಬಂಧನೆಗಳ ಉಲ್ಲಂಘನೆಯಾಗಿದೆ. ಈ ರೀತಿ ಅಕ್ರಮವಾಗಿ ಟ್ರಸ್ಟೀಗಳಾದವರು ತೆಗೆದುಕೊಳ್ಳುವ ನಿರ್ಧಾರಗಳು ಸಿಂಧುವೆನಿಸುವುದಿಲ್ಲ ಎಂದು ಮಿಸ್ತ್ರಿ ಅವರ ವಾದ.

ಇದನ್ನೂ ಓದಿ: ಭಾರತಕ್ಕೆ ತೈಲ ಮತ್ತು ಅನಿಲ ಪೂರೈಕೆ ಹೆಚ್ಚಿಸಲು ಸಿದ್ಧ: ರಷ್ಯಾ ಅಭಯ

ಮುಂಬೈ ಮತ್ತು ನವಸಾರಿಯಲ್ಲಿ ಪಾರ್ಸಿ ಸಮುದಾಯಕ್ಕೆಂದು ಅಗ್ನಿ ಮಂದಿರ, ಶಾಲೆ ಮತ್ತು ವಾಸ ಸೌಕರ್ಯಗಳು ಇತ್ಯಾದಿ ಆಸ್ತಿಗಳನ್ನು ಈ ಟ್ರಸ್ಟ್ ನಿರ್ವಹಿಸುತ್ತಿದೆ. ಶತಮಾನದ ಹಿಂದಿನ ಈ ಟ್ರಸ್ಟ್​ನಲ್ಲಿ ಆಡಳಿತ ದುರುಪಯೋಗ ತಡೆಯಬೇಕು ಎಂದು ಮಿಸ್ತ್ರಿ ಹೇಳುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್