AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ

ಭಾರತ, ಇಸ್ರೇಲ್​ ಮತ್ತು ಪ್ಯಾಲೆಸ್ತನ್ ನಡುವೆ ಉತ್ತಮ ಸಂಬಂಧಕ್ಕೆ ಅವರು ಕಾರಣರಾಗಿದ್ದಾರೆ. ಈ ಗೌರವಕ್ಕೆ ಅವರು ಅರ್ಹರಾಗಿದ್ದಾರೆ ಎಂದು ಇಸ್ರೇಲ್-ಭಾರತದ ವಾಣಿಜ್ಯ ಮಂಡಳಿಯ ಅಧ್ಯಕ್ಷ ರವಿವ್ ಬೈರೊನ್ ತಿಳಿಸಿದ್ದಾರೆ.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ
ರತನ್ ಟಾಟಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 11:33 PM

Share

ದೆಹಲಿ: ಸುಸ್ಥಿರ ಅಭಿವೃದ್ಧಿ ಮತ್ತು ಶಾಂತಿ ಸಾಧಿಸುವ ನೆಲೆಯಲ್ಲಿ ಹೊಸ ಆವಿಷ್ಕಾರಗಳನ್ನು ಬೆಂಬಲಿಸಿದೆ ಭಾರತದ ಜನಪ್ರಿಯ ಉದ್ಯಮಿ ರತನ್ ಟಾಟಾಗೆ ಇಂಡೋ-ಇಸ್ರೇಲ್ ವಾಣಿಜ್ಯ ಮಂಡಳಿ ‘ಗ್ಲೋಬಲ್ ವಿಷನರಿ ಆಫ್ ಸಸ್ಟೈನೆಬಲ್ ಬ್ಯುಸಿನೆಸ್ ಅಂಡ್ ಪೀಸ್’ ಪ್ರಶಸ್ತಿ ನೀಡಿ ಗೌರವಿಸಲಿದೆ. ರತನ್ ಟಾಟಾ ಒಡೆತನದ ಟಾಟಾ ಗ್ರೂಪ್​ಗೆ ಡಿ.21ರಂದು ದುಬೈನಲ್ಲಿ ನಡೆಯುವ ವರ್ಚುಯಲ್ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಲಭಿಸಲಿದೆ.

ಕಾರ್ಯಕ್ರಮದಲ್ಲಿ ಭಾರತ, ಇಸ್ರೇಲ್ ಮತ್ತು ಯುಎಇನ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ರತನ್ ಟಾಟಾ ಕೆಲವಾರು ಬಾರಿ ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಭಾರತ, ಇಸ್ರೇಲ್​ ಮತ್ತು ಪ್ಯಾಲೆಸ್ತೇನಿನ ಉತ್ತಮ ಸಂಬಂಧಕ್ಕೆ ಅವರು ಕಾರಣರಾಗಿದ್ದಾರೆ. ಈ ಗೌರವಕ್ಕೆ ಅವರು ಅರ್ಹರಾಗಿದ್ದಾರೆ ಎಂದು ಇಸ್ರೇಲ್-ಭಾರತದ ವಾಣಿಜ್ಯ ಮಂಡಳಿಯ ಅಧ್ಯಕ್ಷ ರವಿವ್ ಬೈರೊನ್ ತಿಳಿಸಿದ್ದಾರೆ.

ಭಾರತ ಮತ್ತು ಇಸ್ರೇಲ್ ನಡುವಿನ ವ್ಯಾವಹಾರಿಕ ಸಂಬಂಧವನ್ನು ಬಲಗೊಳಿಸುವಲ್ಲಿ ಈ ಸಮಾರಂಭವು ಪ್ರಮುಖ ಪಾತ್ರ ವಹಿಸಲಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪಡೆದಿರುವ 82ರ ಹರೆಯದ ರತನ್ ಟಾಟಾ ಈ ಕಾರ್ಯಕ್ರಮದಲ್ಲಿ ಗೌರವ ಪಡೆಯಲಿದ್ದಾರೆ.

ಯುಎಇ ಮತ್ತು ಬಹ್ರೇನ್ ದೇಶಗಳಲ್ಲಿ ಹಲವಾರು ಭಾರತೀಯರಿದ್ದಾರೆ. ಉನ್ನತ ಹುದ್ದೆ ಮತ್ತು ಉತ್ತಮ ಗೌರವವನ್ನೂ ಅವರು ಸಂಪಾದಿಸಿದ್ದಾರೆ. ಆದ್ದರಿಂದ, ಗಲ್ಫ್, ಭಾರತ ಮತ್ತು ಇಸ್ರೇಲ್​ನ ಸಂಬಂಧ ಬಲಪಡಿಸುವ ನಿಟ್ಟಿನಲ್ಲೂ ನಾವು ಶ್ರಮಿಸಬಹುದು ಎಂದು ರವಿವ್ ಬೈರೊನ್ ಹೇಳಿದ್ದಾರೆ.

Published On - 7:49 pm, Fri, 18 December 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?