Sign In

By signing in or creating an account, you agree with Associated Broadcasting Company's Terms & Conditions and Privacy Policy.

Videocon CEO Arrested: ಚಂದಾ ಕೊಚ್ಚರ್‌ ಬೆನ್ನಲ್ಲೇ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ

Venugopal Dhoot Arrested; ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ.

Videocon CEO Arrested: ಚಂದಾ ಕೊಚ್ಚರ್‌ ಬೆನ್ನಲ್ಲೇ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ
ವೇಣುಗೋಪಾಲ್ ಧೂತ್Image Credit source: Twitter
Follow us
TV9 Web
| Updated By: Ganapathi Sharma

Updated on:Dec 26, 2022 | 7:35 PM

ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ (Videocon Group) ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ (Venugopal Dhoot) ಅವರನ್ನು ಸಿಬಿಐ (CBI) ಸೋಮವಾರ ಬಂಧಿಸಿದೆ. ಐಸಿಐಸಿ ಬ್ಯಾಂಕ್​​ನ (ICICI Bank) ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ (Chanda Kochhar) ಹಾಗೂ ಅವರ ಪತಿ ದೀಪಕ್ ಕೊಚ್ಚರ್​ ಅವರನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಧೂತ್ ಬಂಧನವಾಗಿದೆ. 2009ರ ಜೂನ್​ನಿಂದ 2011ರ ಅಕ್ಟೋಬರ್​ ಅವಧಿಯಲ್ಲಿ ವಿಡಿಯೊಕಾನ್ ಗ್ರೂಪ್ ಮತ್ತು ಅದರ ಅಂಗಸಂಸ್ಥೆಗಳಿಗೆ ಐಸಿಐಸಿ ಬ್ಯಾಂಕ್​ನಿಂದ ಅಕ್ರಮವಾಗಿ ಸುಮಾರು 3,000 ಕೋಟಿ ರೂ. ಸಾಲ ನೀಡಲಾಗಿತ್ತು ಎಂಬ ಆರೋಪ ದಾಖಲಾಗಿದ್ದು, ಆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿತ್ತು. ಅವರಿಬ್ಬರೂ ಸದ್ಯ ಸಿಬಿಐ ವಶದಲ್ಲಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ 2018ರಲ್ಲಿ ತನಿಖೆ ಆರಂಭವಾಗಿತ್ತು. ಅದೇ ಸಂದರ್ಭದಲ್ಲಿ ಚಂದಾ ಕೊಚ್ಚರ್ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಆಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.

ಇದನ್ನೂ ಓದಿ: Chanda Kochhar: ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿ ಮೂರು ದಿನ ಸಿಬಿಐ ವಶಕ್ಕೆ

2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿತ್ತು ಎನ್ನಲಾಗಿದೆ. ಇದಾದ ಕೆಲ ತಿಂಗಳ ನಂತರ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ಪ್ರಗತಿಯಲ್ಲಿದೆ. ಸದ್ಯ ಕೊಚ್ಚರ್ ದಂಪತಿ ಸಿಬಿಐ ವಶದಲ್ಲಿದ್ದಾರೆ.

ಚಂದಾ ಕೊಚ್ಚರ್ ಮತ್ತೆ ಮೂರು ದಿನ ಸಿಬಿಐ ವಶಕ್ಕೆ

ಚಂದಾ ಕೊಚ್ಚರ್ ಮತ್ತು ಅವರ ಪತಿಯನ್ನು ಮುಂಬೈ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಬಿಐ ವಶಕ್ಕೊಪ್ಪಿಸಿದೆ. ಈ ಹಿಂದೆ ಶುಕ್ರವಾರ ಅವರನ್ನು ನ್ಯಾಯಾಲಯವು 3 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿತ್ತು. ಇದೀಗ ದಂಪತಿ ಮತ್ತೆ ಸಿಬಿಐ ವಶವಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Mon, 26 December 22

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು