AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fresher Demand: ದಿನಕ್ಕೆ 4 ಗಂಟೆ, ವಾರಕ್ಕೆ 4 ದಿನ ಕೆಲಸ; ಸಂಬಳ 50,000 ರೂ ಬೇಕಂತೆ; ಹೊಸಬರ ಬೇಡಿಕೆಗೆ ಸಂದರ್ಶಕರ ಪ್ರತಿಕ್ರಿಯೆ ಹೇಗಿತ್ತು..!

Viral Twitter Post: ಹೊಸಬರೊಬ್ಬರು ಇಂಟರ್​ವ್ಯೂ ವೇಳೆ ತಾನು ದಿನಕ್ಕೆ 4 ತಾಸು, ವಾರಕ್ಕೆ 4 ದಿನ ಮಾತ್ರ ಕೆಲಸ ಮಾಡುತ್ತೇನೆ. ಸಂಬಳ 50,000 ರೂ ಬೇಕು ಎಂದು ಡಿಮ್ಯಾಂಡ್ ಇಟ್ಟ ಸಂಗತಿಯನ್ನು ಆತನ ಸಂದರ್ಶನ ಮಾಡಿದವರೊಬ್ಬರು ತಿಳಿಸಿದ್ದಾರೆ.

Fresher Demand: ದಿನಕ್ಕೆ 4 ಗಂಟೆ, ವಾರಕ್ಕೆ 4 ದಿನ ಕೆಲಸ; ಸಂಬಳ 50,000 ರೂ ಬೇಕಂತೆ; ಹೊಸಬರ ಬೇಡಿಕೆಗೆ ಸಂದರ್ಶಕರ ಪ್ರತಿಕ್ರಿಯೆ ಹೇಗಿತ್ತು..!
ಜಾಬ್ ಇಂಟರ್ವ್ಯೂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 23, 2023 | 5:56 PM

Share

ಕೈತುಂಬ ಸಂಬಳ, ವಾರಕ್ಕೆ ಮೂರ್ನಾಲ್ಕು ದಿನ ರಜೆ, ದಿನಕ್ಕೆ ಕೆಲವೇ ತಾಸು ಮಾತ್ರ ಕೆಲಸ. ಇದು ಬಹುಶಃ ಎಲ್ಲಾ ವ್ಯಕ್ತಿಗಳು ಕನಸು ಕಾಣುವ ಹಣಸಂಪಾದನೆಯ ಮಾರ್ಗ. ಇವೆಲ್ಲಾ ವಾಸ್ತವದಲ್ಲಿ ಆಗುವಂಥದ್ದೇ? ಕೋಲ್ಕತಾದಲ್ಲಿ ವಕೀಲರೊಬ್ಬರು ತಮಗಾದ ಅನುಭವವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಲಿಟಿಗೇಶನ್ ಅಸೋಸಿಯೇಟ್ ಹುದ್ದೆಗೆ ಅವರು ಇಂಟರ್ವ್ಯೂ ಏರ್ಪಡಿಸಿದ್ದಾಗ ಒಬ್ಬ ಅಭ್ಯರ್ಥಿಯ ಧೋರಣೆ ಕಂಡು ಚಕಿತಗೊಂಡಿದ್ದಾರೆ. ಈಗಷ್ಟೇ ಓದು ಮುಗಿಸಿ ಕೆಲಸಕ್ಕೆ ಸೇರಲು ಹೊರಟಿದ್ದ ಆ ಅಭ್ಯರ್ಥಿ ಹಾಕಿದ ಷರತ್ತುಗಳು, ಬೇಡಿಕೆಗಳ ವಿವರವನ್ನು ವಕೀಲೆ ಝುಮಾ ಸೇನ್ (Jhuma Sen) ಹಂಚಿಕೊಂಡಿದ್ದಾರೆ.

‘ಕೋಲ್ಕತಾದಲ್ಲಿ ಲಿಟಿಗೇಶನ್ ಅಸೋಸಿಯೇಟ್ ಹುದ್ದೆಗೆ ಹೊಸಬರೊಬ್ಬರನ್ನು ಇಂಟರ್ವ್ಯೂ ಮಾಡಿದೆ. ಆ ವ್ಯಕ್ತಿ ವಾರಕ್ಕೆ 4 ದಿನ ಮಾತ್ರ, ದಿನಕ್ಕೆ 4 ಗಂಟೆ ಮಾತ್ರ ಕೆಲಸ ಮಾಡುತ್ತಾರಂತೆ. ಕೋರ್ಟ್​ಗೆ ಹೋಗಲು ಇಷ್ಟವಿಲ್ಲ, ಕಚೇರಿಯಲ್ಲೇ ಕೆಲಸ ಮಾಡುತ್ತಾರಂತೆ. ಸಂಬಳ 50,000 ರೂ ಬೇಕಂತೆ…’ ಎಂದು ಝುಮಾ ಹೆಸರಿನ ವಕೀಲರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿVideo Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

ಬಳಿಕ ತಮ್ಮ ಟ್ವೀಟ್​ನ ಕೊನೆಗೆ ಝುಮಾ ಅವರು ‘ಈ ತಲೆಮಾರಿಗೆ ಶುಭವಾಗಲಿ’ ಎಂದು ವ್ಯಂಗ್ಯವಾಗಿ ಹಾರೈಕೆ ಮಾಡಿದ್ದಾರೆ. ಈ ಪೋಸ್ಟ್​ಗೆ ಕೆಲವೊಂದಿಷ್ಟು ಪ್ರತಿಕ್ರಿಯೆಗಳು ಬಂದಿವೆ. ಬಹುತೇಕ ಎಲ್ಲರೂ ಅಭ್ಯರ್ಥಿಯ ಬೇಡಿಕೆ ಕಂಡು ದಂಗಾಗಿದ್ದಾರೆ.

ಇವತ್ತಿನ ದಿನಗಳಲ್ಲಿ ಯಾವ ವಿಚಾರಗಳನ್ನು ಇಟ್ಟುಕೊಂಡು ಇವರೆಲ್ಲಾ ಕಾನೂನು ಶಾಲೆಗಳಿಂದ ಬರುತ್ತಾರೆ ಎಂದು ಅಚ್ಚರಿ ಆಗುತ್ತದೆ ಎಂದು ಸಂದೀಪ್ ಭಟ್ಟಾಚಾರ್ಯ ಎಂಬುವವರು ಹೇಳಿದ್ದಾರೆ. ಇಂಥವರಿಗೆ ಇಷ್ಟೊಂದು ಧೈರ್ಯ ಹೇಗೆ ಬರುತ್ತೆ ಎಂದು ಒಬ್ಬರು ಹೇಳಿದರೆ, ಈತ ಮಾಡುವ ಕೆಲಸವನ್ನು ಎಐ ಇನ್ನೂ ಚೆನ್ನಾಗಿ ಮಾಡಬಲ್ಲುದು ಎಂದು ಹಲವರು ಟೀಕಿಸಿದ್ದಾರೆ.

ಇದನ್ನೂ ಓದಿSuguna Chicken: ಸುಗುಣ ಚಿಕನ್ ಸ್ಥಾಪನೆ ಹಾಗೂ ಅದರ ಮಾಲೀಕರ ಇಂಟರೆಸ್ಟಿಂಗ್ ಕಥೆ

ಹಾಗೆಯೇ, ಕೆಲವರು ಆ ಅಭ್ಯರ್ಥಿಯನ್ನು ಸಮರ್ಥನೆ ಕೂಡ ಮಾಡಿಕೊಂಡಿದ್ದಾರೆ. ಆತನ ಧೋರಣೆ ಸರಿ ಇದೆ. ಶೋಷಣೆ ಏನೆಂದು ಅರ್ಥ ಮಾಡಿಕೊಂಡಿದ್ದಾನೆ ಎಂದು ಒಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಅತ್ಯಂತ ಕಡಿಮೆ ಜೀವನವೆಚ್ಚದ ನಗರಗಳಲ್ಲಿ ಕೋಲ್ಕತಾ ಒಂದು. ಇಲ್ಲಿ ಹೊಸಬರೊಬ್ಬರಿಗೆ 50,000 ರೂ ಸಂಬಳ ಎಂದರೆ ಅದು ದೊಡ್ಡದೇ. ಈ ಅಂಶದ ಬಗ್ಗೆಯೂ ಕೆಲ ಟ್ವೀಟಿಗರು ಕುತೂಹಲಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!