Viral Video: ಮೊಬೈಲ್ ಕಳವಾದರೆ ಫೋನ್​ಪೇ ಸಹಾಯವಾಣಿಗೆ ಕರೆ ಮಾಡಿ; ಆರ್​ಬಿಐ ಗವರ್ನರ್ ಅವರ ವೈರಲ್ ವಿಡಿಯೋದ ಅಸಲಿಯತ್ತು ಇಲ್ಲಿದೆ

ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್ ಖಾತೆಯನ್ನು ಕೆಲವೇ ನಿಮಿಷಗಳಲ್ಲಿ ಖಾಲಿ ಮಾಡಬಹುದು. ಈ ಬಗ್ಗೆ ಎಚ್ಚರವಾಗಿರಿ.

Viral Video: ಮೊಬೈಲ್ ಕಳವಾದರೆ ಫೋನ್​ಪೇ ಸಹಾಯವಾಣಿಗೆ ಕರೆ ಮಾಡಿ; ಆರ್​ಬಿಐ ಗವರ್ನರ್ ಅವರ ವೈರಲ್ ವಿಡಿಯೋದ ಅಸಲಿಯತ್ತು ಇಲ್ಲಿದೆ
ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ವೈರಲ್ ವಿಡಿಯೋದ ಅಸಲಿಯತ್ತು
Follow us
| Updated By: Rakesh Nayak Manchi

Updated on:Sep 30, 2022 | 2:47 PM

ಇಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೊ ದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು ಹೆಚ್ಚಳ ಮಾಡಲಾಗಿದೆ. ಅದೇ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಅವರ ವಿಡಿಯೋ ವೈರಲ್ (Video Viral) ಆಗುತ್ತಿದೆ. ನಿಮ್ಮ ಮೊಬೈಲ್ ಕಳ್ಳತನವಾದರೆ PhonePe, Paytm ಮತ್ತು Google Payನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ನೀವು ಸಹಾಯ ಪಡೆಯಬಹುದು ಎಂದು ಶಕ್ತಿಕಾಂತ್ ದಾಸ್ ಹೇಳಿರುವುದು ಈ ವೀಡಿಯೊದಲ್ಲಿ ಕಂಡುಬಂದಿದೆ. ಹಾಗಿದ್ದರೆ ಇದು ನಿಜವೇ? ದೂರವಾಣಿ ಕರೆ ಮಾಡಿದರೆ ಮೊಬೈಲ್ ಪತ್ತೆ ಹಚ್ಚಲು ಸಹಾಯಕವಾಗಲಿದೆಯೇ? ವೈರಲ್ ವಿಡಿಯೋದ ಅಸಲಿಯತ್ತು ಏನು? ಇಲ್ಲಿದೆ ಮಾಹಿತಿ.

ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆ ಅದರ ಅಸಲಿಯತ್ತನ್ನು ಬಯಲಿಗೆಳೆಯಲು ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿದೆ. ಈ ವೇಳೆ ಇದು ಸುಳ್ಳು ಎಂದು ತಿಳಿದುಬಂದಿರುವ ಹಿನ್ನೆಲೆ ನೀವು ವಿಡಿಯೋವನ್ನು ನೋಡಿ ಅದರಲ್ಲಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಲು ಮುಂದಾಗದಿರಿ. ಈ ಬಗ್ಗೆ ಟ್ವೀಟ್ ಮಾಡಿದ ಪಿಐಬಿ ಫ್ಯಾಕ್ಟ್ ಚೆಕ್, ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂದಿದೆ. ಈ ವಿಡಿಯೋದಲ್ಲಿ ಕೇಳಿಬರುತ್ತಿರುವ ಧ್ವನಿ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರದ್ದಲ್ಲ. ಇದರಲ್ಲಿ ಮತ್ತೊಬ್ಬ ವ್ಯಕ್ತಿಯ ಧ್ವನಿಯನ್ನು ಅಳವಡಿಸಲಾಗಿದೆ ಎಂದು ಹೇಳಿದೆ.

ಹಾಗೆಂದು ವಿಡಿಯೋದಲ್ಲಿ ನೀಡಿರುವ ಮಾಹಿತಿಯೂ ಸತ್ಯವಲ್ಲ, ಮಾಹಿತಿ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ವಿಡಿಯೋದಲ್ಲಿ Paytm, PhonePe ಮತ್ತು Google Pay ಹೆಸರಿನಲ್ಲಿ ಹಂಚಿಕೊಂಡಿರುವ ಸಂಖ್ಯೆಗೆ ನೀವು ಕರೆ ಮಾಡಬಾರದು. ಈ ಸಂಖ್ಯೆಗಳಲ್ಲಿ ನಿಮ್ಮ ಯಾವುದೇ ವೈಯಕ್ತಿಕ ಅಥವಾ ಬ್ಯಾಂಕಿಂಗ್ ವಿವರಗಳನ್ನು ಹಂಚಿಕೊಳ್ಳಬೇಡಿ. ಇದು ನಿಮ್ಮೊಂದಿಗೆ ವಂಚನೆಯ ಸಾಧನವಾಗಿರಬಹುದು. ಇದರೊಂದಿಗೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್ ಖಾತೆಯನ್ನು ಕೆಲವೇ ನಿಮಿಷಗಳಲ್ಲಿ ಖಾಲಿ ಮಾಡಬಹುದು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Fri, 30 September 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು