AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೊಡಾಫೋನ್- ಐಡಿಯಾ ಬಳಕೆದಾರರಿಗೆ ಶಾಕ್; ನವೆಂಬರ್ 25ರಿಂದಲೇ ಪ್ರಿಪೇಯ್ಡ್ ಸೇವೆಗಳ ದರ ಹೆಚ್ಚಳ

Price Hike: ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ವೊಡಾಫೋನ್- ಐಡಿಯಾ ತನ್ನ ಪ್ರಿಪೇಯ್ಡ್ ಸೇವೆಯ ದರಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದೆ.

ವೊಡಾಫೋನ್- ಐಡಿಯಾ ಬಳಕೆದಾರರಿಗೆ ಶಾಕ್; ನವೆಂಬರ್ 25ರಿಂದಲೇ ಪ್ರಿಪೇಯ್ಡ್ ಸೇವೆಗಳ ದರ ಹೆಚ್ಚಳ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Nov 23, 2021 | 1:31 PM

ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ವೊಡಾಫೋನ್- ಐಡಿಯಾ ತನ್ನ ಸೇವೆಯ ದರಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದೆ. ಪ್ರಿಪೇಯ್ಡ್ ಸೇವೆಗಳಲ್ಲಿನ ಪ್ರಸ್ತುತದ ದರದಲ್ಲಿ ಶೇ.20-25ರಷ್ಟು ಟಾರಿಫ್ ಏರಿಕೆಯಾಗಲಿದೆ ಎಂದು ತಿಳಿಸಲಾಗಿದ್ದು, ಹೊಸ ದರ ನವೆಂಬವರ್ 25ರಿಂದ ಜಾರಿಗೆ ಬರಲಿದೆ. ಕಂಪನಿಯ ಈ ನಿರ್ಧಾರದಿಂದಾಗಿ ಪ್ರತಿ ಬಳಕೆದಾರರಿಂದ ಬರುವ ಸರಾಸರಿ ಆದಾಯ (ARPU)ಹೆಚ್ಚಾಗಲಿದ್ದು, ಪ್ರಸ್ತುತ ಕಂಪನಿ ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಸರಿದೂಗಿಸಲು ಸಹಕಾರಿಯಾಗಲಿದೆ ಎಂದು ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸ್ಥಿರ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ನೆಟ್‌ವರ್ಕ್ ಟೆಸ್ಟಿಂಗ್ ಅಪ್ಲಿಕೇಶನ್‌ಗಳ ಕಂಪನಿ ಓಕ್ಲಾ ಪರಿಶೀಲಿಸಿರುವಂತೆ, ಹೊಸ ಸುಂಕದ ಯೋಜನೆಗಳ ಮುಖಾಂತರ ‘ಭಾರತದ ವೇಗದ ಮೊಬೈಲ್ ನೆಟ್‌ವರ್ಕ್ ಅನ್ನು ಮತ್ತಷ್ಟು ಸುಧಾರಿಸಲು ಸಹಾಯವಾಗುತ್ತದೆ’ ಎಂದು ವಿಐ ಸಂಸ್ಥೆ ಹೇಳಿದೆ.

ಪಿಟಿಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಸರ್ಕಾರದ ಡಿಜಿಟಲ್ ಇಂಡಿಯಾ ಪರಿಕಲ್ಪನೆಯನ್ನು ಸಾಕ್ಷಾತ್ಕಾರಗೊಳಿಸಲು ತನ್ನ ಪಾತ್ರವನ್ನು ನಿರ್ವಹಿಸುವುದಕ್ಕೆ ವೊಡಾಫೋನ್ ಇಂಡಿಯಾ ಬದ್ಧವಾಗಿದೆ. ತನ್ನ ಗ್ರಾಹಕರಿಗೆ ಸರಳ ಮತ್ತು ಅನುಕೂಲಕರ ಉತ್ಪನ್ನಗಳನ್ನು ಒದಗಿಸುವ ಬದ್ಧತೆಗೆ ಅನುಗುಣವಾಗಿ, ಸಂಸ್ಥೆ ಧ್ವನಿ ಮತ್ತು ಡೇಟಾ ಎರಡಕ್ಕೂ ಅತ್ಯುತ್ತಮವಾದ ಯೋಜನೆಗಳನ್ನು ಸಂಗ್ರಹಿಸಿದೆ ನೀಡಲಿದೆ ಎಂದು ವೊಡಾಫೋನ್ ಐಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

VI new price list

ವೊಡಾಫೋನ್ ಐಡಿಯಾ ಹೊಸ ದರಗಳ ಪಟ್ಟಿ

ನವೆಂಬರ್ 22 ರಂದು ಏರ್‌ಟೆಲ್ ಸಂಸ್ಥೆ ಪ್ರಿಪೇಯ್ಡ್ ಬಳಕೆದಾರರಿಗೆ 20-25 ಪ್ರತಿಶತದಷ್ಟು ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ, ವೊಡಾಫೋನ್ ಐಡಿಯಾ ಕೂಡ ತನ್ನ ನಿರ್ಧಾರ ಪ್ರಕಟಿಸಿದೆ.

ಇದನ್ನೂ ಓದಿ:

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆ ನ.25ಕ್ಕೆ; 20 ವರ್ಷದಲ್ಲಿ ಭರ್ಜರಿ ಅಭಿವೃದ್ಧಿಯಾಗಲಿದೆ ಇಲ್ಲಿ !

GoDaddy: ವಿಶ್ವದ ಅತಿದೊಡ್ಡ ವೆಬ್​ಸೈಟ್​ ಡೊಮೈನ್ ಹೋಸ್ಟ್​ ಗೋ ಡ್ಯಾಡಿ ಹ್ಯಾಕ್: ಅಪಾಯದಲ್ಲಿ 12 ಲಕ್ಷ ಬಳಕೆದಾರರ ಡೇಟಾ

Published On - 1:08 pm, Tue, 23 November 21

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್