ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

Gold Rate prediction: ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡುವುದು ನಿಶ್ಚಿತವಾಗಿದೆ. ತಜ್ಞರ ಪ್ರಕಾರ ಚಿನ್ನದ ಬೆಲೆ ಸದ್ಯದಲ್ಲೇ ಗ್ರಾಮ್​ಗೆ 20,000 ರೂ ಸಮೀಪ ಮುಟ್ಟಬಹುದು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?
ಚಿನ್ನ

Updated on: Mar 02, 2026 | 4:09 PM

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ (Gold Rates) ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ.

20,000 ರೂ ಸಮೀಪಕ್ಕೆ ಚಿನ್ನದ ಬೆಲೆ?

ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ. ಅಂದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಗ್ರಾಮ್​ಗೆ 17,434 ರು ಬೆಲೆ ಇದೆ. ಈಗ ಜಾಗತಿಕವಾಗಿ ಭಯದ ವಾತಾವರಣ ತೀವ್ರಗೊಳ್ಳುತ್ತಿದ್ದು, ಇಂಥ ಸಂದರ್ಭಗಳಲ್ಲಿ ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುವುದು ಸ್ವಾಭಾವಿಕ. ಈಗ ಅದೇ ಆಗುತ್ತಿರುವುದು. ತಜ್ಞರು ಮಾಡಿರುವ ಅಂದಾಜು ಪ್ರಕಾರ, ಒಂದು ಔನ್ಸ್​ಗೆ 5,400 ಡಾಲರ್ ಇರುವ ಚಿನ್ನದ ಬೆಲೆ ಕೆಲ ದಿನಗಳಲ್ಲಿ 6,000 ಡಾಲರ್ ಮುಟ್ಟಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 19,400 ರೂ ಮುಟ್ಟಬಹುದು.

ಇದನ್ನೂ ಓದಿ: ಇರಾನ್ ಯುದ್ಧ; ಭಾರತದ ಬಾಸ್ಮತಿ ಅಕ್ಕಿ ರಫ್ತುದಾರರಿಗೆ 50,000 ಕೋಟಿ ರೂ ಬ್ಯುಸಿನೆಸ್ ಕೈತಪ್ಪುವ ಚಿಂತೆ

ವಿವಿಧ ದೇಶಗಳ ಸೆಂಟ್ರಲ್ ಬ್ಯಾಂಕುಗಳು ಚಿನ್ನದ ಖರೀದಿ ಹೆಚ್ಚಿಸಲಿವೆ. ಗೋಲ್ಡ್ ಇಟಿಎಫ್​ಗಳ ಮೇಲೆ ಹೂಡಿಕೆ ಹೆಚ್ಚಲಿವೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿಯುತ್ತಿದೆ. ಈ ಮೂರು ಅಂಶಗಳು ಚಿನ್ನದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯೂ ಜಂಪ್ ಪಡೆಯಬಹುದು.

ಭಾರತದಲ್ಲಿ ಚಿನ್ನದ ಬೆಲೆ ಸೋಮವಾರ ಬೆಳಗ್ಗೆ ಭರ್ಜರಿ ಇಳಿಕೆ ಕಂಡು ನಂತರ ಮತ್ತೆ ಶೇ. 4.37ರಷ್ಟು ಮೇಲೇರಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 296 ರೂ ದಾಟಿದೆ.

ಇದನ್ನೂ ಓದಿ: ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ?

ತೈಲ ಬೆಲೆ ಏರಿಕೆ

ಇರಾನ್ ಯುದ್ಧದ ಪರಿಣಾಮ ತೈಲ ಬೆಲೆ ಏರಿಕೆ ಆಗುವ ಭೀತಿ ಇದೆ. ಈಗಾಗಲೇ ಹೆಚ್ಚಿನ ಮಟ್ಟದಲ್ಲಿರುವ ತೈಲ ಬೆಲೆ ಬ್ಯಾರಲ್​ಗೆ 90 ಡಾಲರ್ ಮಟ್ಟದಲ್ಲೇ ಹೆಚ್ಚಿನ ಕಾಲ ಮುಂದುವರಿದರೆ ಭಾರತದ ಆರ್ಥಿಕತೆಗೆ ತುಸು ಹಿನ್ನಡೆ ತರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us