AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಪ್ರಮುಖ ನಿರ್ಧಾರಗಳೇನು? ಸಿರಿಧ್ಯಾನದ ಮೇಲಿನ ಸರಕು-ಸೇವೆ ತೆರಿಗೆ ಇಳಿಸಿದ ಕೇಂದ್ರ

ಇಂದು ದೆಹಲಿಯಲ್ಲಿ ನಡೆದ 52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯ ನಂತರ ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ಪುಡಿಮಾಡಿದ ಸಿರಿಧ್ಯಾನದ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) 5% ಕ್ಕೆ ಇಳಿಸಲು ನಿರ್ಧಾರಿಸಲಾಗಿದೆ.

52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಪ್ರಮುಖ ನಿರ್ಧಾರಗಳೇನು? ಸಿರಿಧ್ಯಾನದ ಮೇಲಿನ ಸರಕು-ಸೇವೆ ತೆರಿಗೆ ಇಳಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
| Edited By: |

Updated on:Oct 07, 2023 | 5:08 PM

Share

ದೆಹಲಿ, ಅ.7: ಇಂದು ದೆಹಲಿಯಲ್ಲಿ ನಡೆದ 52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ (52nd GST Council Meeting) ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.  ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ಪುಡಿಮಾಡಿದ ಸಿರಿಧ್ಯಾನದ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) 5% ಕ್ಕೆ ಇಳಿಸಲು ನಿರ್ಧಾರಿಸಲಾಗಿದೆ. ಈ ಹಿಂದೆ ಇವುಗಳ ಮೇಲೆ ಶೇಕಾಡ 18ರಷ್ಟು ತೆರಿಗೆ ಇತ್ತು. ಇದೀಗ ಶೇಕಾಡ 18 ರಿಂದ ಶೇಕಾಡ 5 ಕ್ಕೆ ಇಳಿಸಲಾಗಿದೆ. ಇದು ಮಾತ್ರವಲ್ಲದೆ, ಶೇಕಾಡ 70 ಅಥವಾ ಅದಕ್ಕಿಂತ ಹೆಚ್ಚಿನ ಸಂಯೋಜನೆ ಹೊಂದಿರುವ ಸಿರಿಧ್ಯಾನಕ್ಕೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಮತ್ತು ಸಿರಿಧ್ಯಾನದ ಬ್ರಾಂಡ್ ಉತ್ಪನ್ನಗಳಿಗೆ ಶೇಕಾಡ 5ರಷ್ಟು ಜಿಎಸ್ಟಿ ವಿಧಿಸಲಾಗುತ್ತದೆ ಎಂದು ಈ ಸಭೆಯಲ್ಲಿ ಘೋಷಣೆ ಮಾಡಲಾಗಿದೆ. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳನ್ನು ಈ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್​​ ಅವರು ಮಾಧ್ಯಮ ಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಜಿಎಸ್‌ಟಿ ಕೌನ್ಸಿಲ್​​ ಕಬ್ಬಿನ ಉಪ-ಉತ್ಪನ್ನವಾದ ಮತ್ತು ಆಲ್ಕೋಹಾಲ್ ಉತ್ಪಾದನೆಗೆ ಕಚ್ಚಾ ವಸ್ತುವಾಗಿ ಬಳಸಲಾಗುವ ಕಾಕಂಬಿ ( molasses) ಮೇಲಿನ ತೆರಿಗೆ ದರವನ್ನು 18 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ ಎಂದು ಹೇಳಿದೆ. ಜಿಎಸ್‌ಟಿ ಕೌನ್ಸಿಲ್‌ನ ಸದಸ್ಯರಾಗಿರುವ ಛತ್ತೀಸ್‌ಗಢದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ಡಿಯೋ ಅವರು ಕಾಕಂಬಿ ಮೇಲಿನ ತೆರಿಗೆ ವಿನಾಯಿತಿ ಕೈಗಾರಿಕಾ ಕ್ಷೇತ್ರಕ್ಕೆ  ನೀಡಿರುವ ಬಲ ಎಂದು ಹೇಳಿದ್ದಾರೆ.

ಇನ್ನು ದಿನ ಬಳಕೆ ಅಂದರೆ ಕುಡಿಯಲು ಉಪಯೋಗಿಸುವ ಆಲ್ಕೋಹಾಲ್​​ಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ದೆಹಲಿ ಮತ್ತು ಗೋವಾ ರಾಜ್ಯಗಳಲ್ಲಿ ನಡೆಸಲಾಗುವ ಆನ್‌ಲೈನ್ ಗೇಮಿಂಗ್ ಕಂಪನಿಗಳು ಜಿಎಸ್‌ಟಿ ಪಾವತಿಯಲ್ಲಿ ವಂಚನೆ ಮಾಡಿದೆ ಎಂದು ಈ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಕಂಪನಿಗಳ ಮೇಲಿನ ಶುಲ್ಕಗಳ (ತೆರಿಗೆ ಬೇಡಿಕೆ ಸೂಚನೆ) ಬಗ್ಗೆ ಹಿಂದಿನಿಂದ ಸಭೆಯಲ್ಲೇ ಚರ್ಚೆ ನಡೆದಿದೆ ಎಂದು ಟಿಎಸ್ ಸಿಂಗ್ ಡಿಯೋ ಹೇಳಿದ್ದಾರೆ.

51ನೇ ಜಿಎಸ್‌ಟಿ ಕೌನ್ಸಿಲ್​ನಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಇಂದು ಕೆಲವು ತಿದ್ದುಪಡಿಗಳನ್ನು ಮಾಡಲು ಸಭೆ ನಿರ್ಧರಿಸಿದೆ. ಜಿಎಸ್‌ಟಿ ಕೌನ್ಸಿಲ್​​ನ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿಯನ್ನು ಈ ಹಿಂದೆ 65 ರಿಂದ 67 ವರ್ಷಕ್ಕೆ ಸಿಮೀತಗೊಳಿಸಲಾಗಿತ್ತು. ಆದರೆ ಇದೀಗ 67ರಿಂದ 70 ವರ್ಷಗಳವರೆಗೆ ಮುಂದುವರಿಸಲಾಗುವುದು ಎಂದು ಈ ಸಭೆಯಲ್ಲಿ ನಿರ್ಧಾರಿಸಲಾಗಿದೆ.

ಇದನ್ನೂ ಓದಿ: ಆನ್ಲೈನ್ ಗೇಮಿಂಗ್, ಜೂಜುಗಳಿಗೆ ಜಿಎಸ್​ಟಿ ವಿಧಿಸಲು ಸಪ್ಲೈ ವ್ಯಾಲ್ಯೂ ಹೇಗೆ? ಇಂದು ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಧಾರ

52 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯು ದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆಯಿತು. ಸಚಿವೆ ನಿರ್ಮಲ ಸೀತಾರಾಮನ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಹಣಕಾಸು ರಾಜ್ಯ ಸಚಿವರು, ರಾಜ್ಯಗಳ ಹಣಕಾಸು ಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಶಾಸಕರು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಆಗಸ್ಟ್‌ನಲ್ಲಿ ನಡೆದ 51ನೇ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಆನ್‌ಲೈನ್ ಗೇಮಿಂಗ್, ಕ್ಯಾಸಿನೊ ಮತ್ತು ಕುದುರೆ ರೇಸಿಂಗ್‌ಗಳ ಮೇಲೆ ಶೇಕಡಾ 28ರಷ್ಟು ತೆರಿಗೆಯನ್ನು ವಿಧಿಸಲು ನಿರ್ಧರಿಸಲಾಯಿತು ಮತ್ತು ಅದನ್ನು ಕಾರ್ಯಗತಗೊಳಿಸುವ ವಿಧಾನಗಳ ಬಗ್ಗೆ ಚರ್ಚಿಸಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Sat, 7 October 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!