AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Group: ಈಗ ಅದಾನಿ ಸಮೂಹ ಕಂಪನಿಗಳ ಷೇರು ಖರೀದಿಸುವುದು ಉತ್ತಮವೇ? ಚಾಟ್​ ಜಿಪಿಟಿ ಕೊಟ್ಟ ಉತ್ತರ ಹೀಗಿದೆ ನೋಡಿ!

ಒಟ್ಟಾರೆಯಾಗಿ ಕಳೆದ ಎರಡು ದಿನಗಳಲ್ಲಿ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ 2.3 ಲಕ್ಷ ಕೋಟಿ ರೂ. ಕಳೆದುಕೊಂಡಿವೆ. ಇದು ಹೂಡಿಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ, ಚಾಟ್​​ ಜಿಪಿಟಿ ಬಳಿ ಅದಾನಿ ಸಮೂಹದ ಕಂಪನಿಗಳ ಷೇರು ಖರೀದಿ ಬಗ್ಗೆ ಪ್ರಶ್ನೆ ಕೇಳಲಾಗಿದೆ.

Adani Group: ಈಗ ಅದಾನಿ ಸಮೂಹ ಕಂಪನಿಗಳ ಷೇರು ಖರೀದಿಸುವುದು ಉತ್ತಮವೇ? ಚಾಟ್​ ಜಿಪಿಟಿ ಕೊಟ್ಟ ಉತ್ತರ ಹೀಗಿದೆ ನೋಡಿ!
ಸಾಂದರ್ಭಿಕ ಚಿತ್ರ (ಕೃಪೆ; ರಾಯಿಟರ್ಸ್)Image Credit source: Reuters
ಗಣಪತಿ ಶರ್ಮಾ
|

Updated on: Jan 27, 2023 | 3:26 PM

Share

ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್​ (Hindenburg Research) ಮಾಡಿರುವ ಆರೋಪಗಳಿಂದಾಗಿ ಅದಾನಿ ಸಮೂಹ(Adani Group) ಕಂಪನಿಗಳ ಷೇರು ಮೌಲ್ಯ ಭಾರೀ ಕುಸಿತ ಕಾಣುತ್ತಿದೆ. ಅದಾನಿ ಟೋಟಲ್ ಗ್ಯಾಸ್, ಅದಾನಿ ಟ್ರಾನ್ಸ್​​ಮಿಷನ್, ಅದಾನಿ ಗ್ರೀನ್​ ಎನರ್ಜಿ, ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್, ಅದಾನಿ ವಿಲ್ಮರ್, ಅದಾನಿ ಪವರ್, ಅದಾನಿ ಎಂಟರ್​ಪ್ರೈಸಸ್ ಹಾಗೂ ಇತರ ಕಂಪನಿಗಳ ಷೇರು ಮೌಲ್ಯದಲ್ಲಿ ಗಣನೀಯ ಕುಸಿತವಾಗಿದೆ. ಪರಿಸ್ಥಿತಿ ಹೀಗಿರುವಾಗ, ಅದಾನಿ ಸಮೂಹದ ಕಂಪನಿಗಳ ಷೇರುಗಳನ್ನು ಈಗ ಖರೀದಿಸುವುದು ಉತ್ತಮವೇ ಅಥವಾ ಈಗ ಖರೀದಿಸುವುದು ಬೇಡವೇ ಎಂಬ ಪ್ರಶ್ನೆ ಹೂಡಿಕೆದಾರರಲ್ಲಿ ಉದ್ಭವಿಸುವುದು ಸಹಜ. ಹೂಡಿಕೆ ತಜ್ಞರೂ ಇದಕ್ಕೆ ವಿವಿಧ ರೀತಿಯ ಉತ್ತರಗಳನ್ನು ನೀಡುತ್ತಿದ್ದಾರೆ.

ಒಟ್ಟಾರೆಯಾಗಿ ಕಳೆದ ಎರಡು ದಿನಗಳಲ್ಲಿ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ 2.3 ಲಕ್ಷ ಕೋಟಿ ರೂ. ಕಳೆದುಕೊಂಡಿವೆ. ಇದು ಹೂಡಿಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ, ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್​ಬಾಟ್ ತಂತ್ರಾಂಶ ಚಾಟ್​​ ಜಿಪಿಟಿ ಬಳಿ ಅದಾನಿ ಸಮೂಹದ ಕಂಪನಿಗಳ ಷೇರು ಖರೀದಿ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅದಾನಿ ಸಮೂಹದ ಕಂಪನಿಗಳ ಷೇರುಗಳನ್ನು ಈಗ ಖರೀದಿಸುವುದು ಉತ್ತಮವೇ ಎಂದು ಪ್ರಶ್ನಿಸಲಾಗಿದೆ. ಅದಕ್ಕೆ ಚಾಟ್​​ ಜಿಪಿಟಿ ನೀಡಿರುವ ಉತ್ತರ ಇಲ್ಲಿದೆ.

ಇದನ್ನೂ ಓದಿ: ChatGPT: ಏನಿದು ಚಾಟ್​ ಜಿಪಿಟಿ, ಹೇಗೆ ಕೆಲಸ ಮಾಡುತ್ತೆ? ಇತಿ, ಮಿತಿಗಳ ಬಗ್ಗೆ ಇಲ್ಲಿದೆ ವಿವರ

‘ಕ್ಷಮಿಸಿ. ಹಣಕಾಸು ಅಥವಾ ಹೂಡಿಕೆ ಸಲಹೆ ನೀಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೂಡಿಕೆಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ನೀವಾಗಿಯೇ ಅಧ್ಯಯನ ನಡೆಸುವುದು ಹಾಗೂ ಹಣಕಾಸು ಸಲಹೆಗಾರರ ಬಳಿ ಸಮಾಲೋಚನೆ ನಡೆಸುವುದು ಉತ್ತಮ’ ಎಂದು ಚಾಟ್​​ ಜಿಪಿಟಿ ಉತ್ತರಿಸಿದೆ.

ಓಪನ್ ಎಐ ಎಂಬ ಕೃತಕಬುದ್ಧಿಮತ್ತೆ ಕಂಪನಿ ಚಾಟ್​​ ಜಿಪಿಟಿಯನ್ನು ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರಿಗೆ ಲಭ್ಯವಾಗಿರುವಂತೆ ಮಾಡಿರುವುದಾಗಿ 2022ರ ಡಿಸೆಂಬರ್ ಆರಂಭದಲ್ಲಿ ತಿಳಿಸಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ಈ ಚಾಟಿಂಗ್ ತಾಣ ಬಳಕೆದಾರರು ಏನೇ ಕೇಳಿದರೂ ಬರಹ ರೂಪದಲ್ಲಿ ಉತ್ತರ ನೀಡುತ್ತದೆ. ಕಳೆದ ಕೆಲವು ದಿನಗಳಿಂದ ಟೆಕ್ ವಲಯದಲ್ಲಿ ಇದು ಭಾರೀ ಸುದ್ದಿಗೆ ಗ್ರಾಸವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ