AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ನೀವು ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ಮೂಲ ಆಸ್ತಿ ದಾಖಲೆ ಕಳೆದುಹೋದರೆ ಏನಾಗುತ್ತೆ? ಆರ್​ಬಿಐ ತರುತ್ತಿದೆ ಹೊಸ ಕಾನೂನು

Penalties On Banks If Property Papers Lost: ಸಾಲ ಪಡೆಯಲು ಅಡಮಾನವಾಗಿ ಇಡುವ ಆಸ್ತಿಪತ್ರಗಳು ಬ್ಯಾಂಕ್​ನಲ್ಲೇ ಕಳೆದುಹೋದರೆ ಅಥವಾ ಅದು ಮರಳುವುದು ವಿಳಂಬವಾದರೆ ಗ್ರಾಹಕರಿಗೆ ಪರಿಹಾರ ಕೊಡಬೇಕು ಎಂದು ಆರ್​ಬಿಐನ ಸಮಿತಿಯೊಂದು ಶಿಫಾರಸು ಮಾಡಿತ್ತು. ಅದನ್ನು ಆರ್​ಬಿಐ ಜಾರಿಗೊಳಿಸುವ ಸಾಧ್ಯತೆ ಇದೆ.

RBI: ನೀವು ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ಮೂಲ ಆಸ್ತಿ ದಾಖಲೆ ಕಳೆದುಹೋದರೆ ಏನಾಗುತ್ತೆ? ಆರ್​ಬಿಐ ತರುತ್ತಿದೆ ಹೊಸ ಕಾನೂನು
ಬ್ಯಾಂಕು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 11, 2023 | 1:07 PM

Share

ನವದೆಹಲಿ: ಬ್ಯಾಂಕುಗಳಲ್ಲಿ ಸಾಲ ಪಡೆಯಲು ನಾವು ಅಡಮಾನವಾಗಿ ಇಡುವ ಮನೆಪತ್ರ, ಇನ್ಷೂರೆನ್ಸ್ ಸರ್ಟಿಫಿಕೇಟ್ ಇತ್ಯಾದಿ ಮೂಲ ಆಸ್ತಿಪತ್ರಗಳು (Property Documents) ಕಳೆದುಹೋದರೆ ಏನು ಗತಿ? ಇಂಥ ಕೆಲ ಪ್ರಕರಣಗಳು ಬೆಳಕಿಗೆ ಬಂದಿರುವುದುಂಟು. ಇದೀಗ ಆರ್​ಬಿಐ ಈ ನಿಟ್ಟಿನಲ್ಲಿ ಗಮನ ಹರಿಸಿದ್ದು, ಸಾಲ ಪಡೆಯುವವರ ಆಸ್ತಿ ದಾಖಲೆಗಳು ಬ್ಯಾಂಕ್​ನಲ್ಲಿ ಕಳೆದುಹೋಗಿದ್ದರೆ ಆ ಗ್ರಾಹಕರಿಗೆ ಬ್ಯಾಂಕುಗಳು ಪರಿಹಾರ ನೀಡಬೇಕು. ಜೊತೆಗೆ ದಂಡವನ್ನೂ ಕಟ್ಟಿಕೊಡಬೇಕಾಗುವಂತಹ ನಿಯಮ ಮಾರಿ ಮಾಡಲು ಹೊರಟಿದೆ.

ಬ್ಯಾಂಕುಗಳು ಹಾಗೂ ಇತರ ಹಣಕಾಸು ಸಂಸ್ಥೆಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಸೇವೆಯ ಮಟ್ಟವನ್ನು ಪರಿಶೀಲಿಸಲು ಆರ್​ಬಿಐ ಕಳೆದ ವರ್ಷ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿತ್ತು. ಮಾಜಿ ಡೆಪ್ಯೂಟಿ ಆರ್​ಬಿಐ ಗವರ್ನರ್ ಬಿ.ಪಿ. ಕಣುಂಗೋ ನೇತೃತ್ವದ ಈ ಸಮಿತಿ ಹಲವು ಶಿಫಾರಸುಗಳನ್ನು ಒಳಗೊಂಡಿರುವ ತನ್ನ ವರದಿಯನ್ನು ಇದೇ ಏಪ್ರಿಲ್ ತಿಂಗಳಲ್ಲಿ ರಿಸರ್ವ್ ಬ್ಯಾಂಕ್​ಗೆ ಸಲ್ಲಿಸಿತ್ತು. ಆಸ್ತಿಪತ್ರ ಕಳೆದುಹೋದಾಗ ಬ್ಯಾಂಕುಗಳು ಗ್ರಾಹಕರಿಗೆ ಪರಿಹಾರ ಮತ್ತು ದಂಡ ಕಟ್ಟಿಕೊಡಬೇಕೆನ್ನುವುದು ಈ ಸಮಿತಿ ಮಾಡಿದ ಶಿಫಾರಸುಗಳಲ್ಲಿ ಸೇರಿದೆ.

ಇದನ್ನೂ ಓದಿEarn Money: ನಿಮ್ಮ ಟ್ವೀಟ್​ಗಳಿಗೆ ಬರುವ ರಿಪ್ಲೈಗಳಿಂದ ಹಣ ಮಾಡಲು ಅವಕಾಶ; ಶೀಘ್ರದಲ್ಲೇ ಈ ಸೌಲಭ್ಯ; ಇದು ಹೇಗೆ ಸಾಧ್ಯ?

ಈ ಸಮಿತಿ ಮಾಡಿದ ಶಿಫಾರಸುಗಳ ಬಗ್ಗೆ ಸಂಬಂಧಿತ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆರ್​ಬಿಐ ಪ್ರತಿಕ್ರಿಯೆಗಳನ್ನು ಆಹ್ವಾನಿಸಿತ್ತು. ಈ ಪ್ರತಿಕ್ರಿಯೆಗಳನ್ನು ಪರಿಶೀಲಿಸಿರುವ ಆರ್​ಬಿಐ ತನ್ನ ಸಮಿತಿಯ ಕೆಲ ಶಿಫಾರಸುಗಳನ್ನು ಜಾರಿಗೊಳಿಸಲು ನಿರ್ಧರಿಸಿರುವುದು ತಿಳಿದುಬಂದಿದೆ.

ವಿಳಂಬ ಮಾಡಿದರೂ ದಂಡ; ಸಮಿತಿ ಶಿಫಾರಸಿನಲ್ಲಿ ಏನಿದೆ ಅಂಶಗಳು?

ಬ್ಯಾಂಕ್​ನಲ್ಲಿ ಸಾಲದ ಖಾತೆ ಮುಗಿದ ಬಳಿಕ ನಿರ್ದಿಷ್ಟ ಅವಧಿಯೊಳಗೆ ಅಡಮಾನದ ಆಸ್ತಿದಾಖಲೆಗಳನ್ನು ಗ್ರಾಹಕರಿಗೆ ಮರಳಿಸಬೇಕು. ಈ ಗಡುವು ಮೀರಿದರೆ ಅಷ್ಟು ವಿಳಂಬ ಅವಧಿಗೆ ಪರಿಹಾರ ಅಥವಾ ದಂಡವನ್ನು ಬ್ಯಾಂಕುಗಳು ಗ್ರಾಹರಿಗೆ ನೀಡಬೇಕು.

ಇದನ್ನೂ ಓದಿLIC vs Bank Deposit: ಎಲ್​ಐಸಿ ಪಾಲಿಸಿಗೆ ಹಾಕುವ ಹಣ ಬ್ಯಾಂಕ್​ನಲ್ಲಿ ಠೇವಣಿ ಇಟ್ಟರೆ ಎಷ್ಟು ಸಿಗುತ್ತೆ ರಿಟರ್ನ್ಸ್? ಇಲ್ಲಿದೆ ಒಂದು ಹೋಲಿಕೆ

ಒಂದು ವೇಳೆ, ಆಸ್ತಿದಾಖಲೆ ಕಳೆದುಹೋದರೆ ಆ ದಾಖಲೆಗಳ ಸರ್ಟಿಫೈಡ್ ಕಾಪಿಗಳನ್ನು ಪಡೆಯಲು ಬ್ಯಾಂಕು ತನ್ನದೇ ಖರ್ಚಿನಲ್ಲಿ ಗ್ರಾಹಕರಿಗೆ ನೆರವಾಗಬೇಕು. ಜೊತೆಗೆ ವಿಳಂಬಗೊಂಡ ಸಮಯದ ಆಧಾರದ ಮೇಲೆ ಗ್ರಾಹಕರಿಗೆ ಪರಿಹಾರವನ್ನೂ ಕೊಡಬೇಕು ಎಂದು ಆರ್​ಬಿಐನ ಈ ಸಮಿತಿ ತನ್ನ ಶಿಫಾರಸಿನಲ್ಲಿ ಸಲಹೆ ನೀಡಿತ್ತು.

ಬ್ಯಾಂಕುಗಳು ದೊಡ್ಡ ಮೊತ್ತದ ಸಾಲ ಕೊಡಲು ಮೂಲ ಆಸ್ತಿಪತ್ರಗಳನ್ನು ಅಡಮಾನವಾಗಿ ಪಡೆಯುತ್ತವೆ. ಸಾಲ ಪೂರ್ಣವಾಗಿ ತೀರಿದ ಬಳಿಕವಷ್ಟೇ ಈ ದಾಖಲೆಗಳನ್ನು ಗ್ರಾಹಕರಿಗೆ ಮರಳಿಸುತ್ತವೆ. ಆದರೆ ಸಾಲ ಮುಗಿದು ಬಹಳ ದಿನಗಳಾದರೂ ಆಸ್ತಿಪತ್ರಗಳನ್ನು ಮರಳಿಸುತ್ತಿಲ್ಲ ಎಂಬ ದೂರಗಳು ಬಹಳ ಕೇಳಿಬಂದಿದ್ದವಂತೆ. ಈ ಹಿನ್ನೆಲೆಯಲ್ಲಿ ಆರ್​ಬಿಐನ ಸಮಿತಿ ಈ ಸಮಸ್ಯೆಯನ್ನು ಪರಿಶೀಲಿಸಿ ನಿಯಮ ರೂಪಿಸಲು ಸಲಹೆ ನೀಡಿದೆ. ಆದರೆ, ಗ್ರಾಹಕರಿಗೆ ಎಷ್ಟು ಪರಿಹಾರ ಕೊಡಬೇಕು ಎಂಬ ಬಗ್ಗೆ ನಿರ್ದಿಷ್ಟವಾಗಿ ಮಾಹಿತಿ ಗೊತ್ತಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ