RBI: ನೀವು ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ಮೂಲ ಆಸ್ತಿ ದಾಖಲೆ ಕಳೆದುಹೋದರೆ ಏನಾಗುತ್ತೆ? ಆರ್​ಬಿಐ ತರುತ್ತಿದೆ ಹೊಸ ಕಾನೂನು

Penalties On Banks If Property Papers Lost: ಸಾಲ ಪಡೆಯಲು ಅಡಮಾನವಾಗಿ ಇಡುವ ಆಸ್ತಿಪತ್ರಗಳು ಬ್ಯಾಂಕ್​ನಲ್ಲೇ ಕಳೆದುಹೋದರೆ ಅಥವಾ ಅದು ಮರಳುವುದು ವಿಳಂಬವಾದರೆ ಗ್ರಾಹಕರಿಗೆ ಪರಿಹಾರ ಕೊಡಬೇಕು ಎಂದು ಆರ್​ಬಿಐನ ಸಮಿತಿಯೊಂದು ಶಿಫಾರಸು ಮಾಡಿತ್ತು. ಅದನ್ನು ಆರ್​ಬಿಐ ಜಾರಿಗೊಳಿಸುವ ಸಾಧ್ಯತೆ ಇದೆ.

RBI: ನೀವು ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ಮೂಲ ಆಸ್ತಿ ದಾಖಲೆ ಕಳೆದುಹೋದರೆ ಏನಾಗುತ್ತೆ? ಆರ್​ಬಿಐ ತರುತ್ತಿದೆ ಹೊಸ ಕಾನೂನು
ಬ್ಯಾಂಕು
Follow us
|

Updated on: Jun 11, 2023 | 1:07 PM

ನವದೆಹಲಿ: ಬ್ಯಾಂಕುಗಳಲ್ಲಿ ಸಾಲ ಪಡೆಯಲು ನಾವು ಅಡಮಾನವಾಗಿ ಇಡುವ ಮನೆಪತ್ರ, ಇನ್ಷೂರೆನ್ಸ್ ಸರ್ಟಿಫಿಕೇಟ್ ಇತ್ಯಾದಿ ಮೂಲ ಆಸ್ತಿಪತ್ರಗಳು (Property Documents) ಕಳೆದುಹೋದರೆ ಏನು ಗತಿ? ಇಂಥ ಕೆಲ ಪ್ರಕರಣಗಳು ಬೆಳಕಿಗೆ ಬಂದಿರುವುದುಂಟು. ಇದೀಗ ಆರ್​ಬಿಐ ಈ ನಿಟ್ಟಿನಲ್ಲಿ ಗಮನ ಹರಿಸಿದ್ದು, ಸಾಲ ಪಡೆಯುವವರ ಆಸ್ತಿ ದಾಖಲೆಗಳು ಬ್ಯಾಂಕ್​ನಲ್ಲಿ ಕಳೆದುಹೋಗಿದ್ದರೆ ಆ ಗ್ರಾಹಕರಿಗೆ ಬ್ಯಾಂಕುಗಳು ಪರಿಹಾರ ನೀಡಬೇಕು. ಜೊತೆಗೆ ದಂಡವನ್ನೂ ಕಟ್ಟಿಕೊಡಬೇಕಾಗುವಂತಹ ನಿಯಮ ಮಾರಿ ಮಾಡಲು ಹೊರಟಿದೆ.

ಬ್ಯಾಂಕುಗಳು ಹಾಗೂ ಇತರ ಹಣಕಾಸು ಸಂಸ್ಥೆಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಸೇವೆಯ ಮಟ್ಟವನ್ನು ಪರಿಶೀಲಿಸಲು ಆರ್​ಬಿಐ ಕಳೆದ ವರ್ಷ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿತ್ತು. ಮಾಜಿ ಡೆಪ್ಯೂಟಿ ಆರ್​ಬಿಐ ಗವರ್ನರ್ ಬಿ.ಪಿ. ಕಣುಂಗೋ ನೇತೃತ್ವದ ಈ ಸಮಿತಿ ಹಲವು ಶಿಫಾರಸುಗಳನ್ನು ಒಳಗೊಂಡಿರುವ ತನ್ನ ವರದಿಯನ್ನು ಇದೇ ಏಪ್ರಿಲ್ ತಿಂಗಳಲ್ಲಿ ರಿಸರ್ವ್ ಬ್ಯಾಂಕ್​ಗೆ ಸಲ್ಲಿಸಿತ್ತು. ಆಸ್ತಿಪತ್ರ ಕಳೆದುಹೋದಾಗ ಬ್ಯಾಂಕುಗಳು ಗ್ರಾಹಕರಿಗೆ ಪರಿಹಾರ ಮತ್ತು ದಂಡ ಕಟ್ಟಿಕೊಡಬೇಕೆನ್ನುವುದು ಈ ಸಮಿತಿ ಮಾಡಿದ ಶಿಫಾರಸುಗಳಲ್ಲಿ ಸೇರಿದೆ.

ಇದನ್ನೂ ಓದಿEarn Money: ನಿಮ್ಮ ಟ್ವೀಟ್​ಗಳಿಗೆ ಬರುವ ರಿಪ್ಲೈಗಳಿಂದ ಹಣ ಮಾಡಲು ಅವಕಾಶ; ಶೀಘ್ರದಲ್ಲೇ ಈ ಸೌಲಭ್ಯ; ಇದು ಹೇಗೆ ಸಾಧ್ಯ?

ಈ ಸಮಿತಿ ಮಾಡಿದ ಶಿಫಾರಸುಗಳ ಬಗ್ಗೆ ಸಂಬಂಧಿತ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆರ್​ಬಿಐ ಪ್ರತಿಕ್ರಿಯೆಗಳನ್ನು ಆಹ್ವಾನಿಸಿತ್ತು. ಈ ಪ್ರತಿಕ್ರಿಯೆಗಳನ್ನು ಪರಿಶೀಲಿಸಿರುವ ಆರ್​ಬಿಐ ತನ್ನ ಸಮಿತಿಯ ಕೆಲ ಶಿಫಾರಸುಗಳನ್ನು ಜಾರಿಗೊಳಿಸಲು ನಿರ್ಧರಿಸಿರುವುದು ತಿಳಿದುಬಂದಿದೆ.

ವಿಳಂಬ ಮಾಡಿದರೂ ದಂಡ; ಸಮಿತಿ ಶಿಫಾರಸಿನಲ್ಲಿ ಏನಿದೆ ಅಂಶಗಳು?

ಬ್ಯಾಂಕ್​ನಲ್ಲಿ ಸಾಲದ ಖಾತೆ ಮುಗಿದ ಬಳಿಕ ನಿರ್ದಿಷ್ಟ ಅವಧಿಯೊಳಗೆ ಅಡಮಾನದ ಆಸ್ತಿದಾಖಲೆಗಳನ್ನು ಗ್ರಾಹಕರಿಗೆ ಮರಳಿಸಬೇಕು. ಈ ಗಡುವು ಮೀರಿದರೆ ಅಷ್ಟು ವಿಳಂಬ ಅವಧಿಗೆ ಪರಿಹಾರ ಅಥವಾ ದಂಡವನ್ನು ಬ್ಯಾಂಕುಗಳು ಗ್ರಾಹರಿಗೆ ನೀಡಬೇಕು.

ಇದನ್ನೂ ಓದಿLIC vs Bank Deposit: ಎಲ್​ಐಸಿ ಪಾಲಿಸಿಗೆ ಹಾಕುವ ಹಣ ಬ್ಯಾಂಕ್​ನಲ್ಲಿ ಠೇವಣಿ ಇಟ್ಟರೆ ಎಷ್ಟು ಸಿಗುತ್ತೆ ರಿಟರ್ನ್ಸ್? ಇಲ್ಲಿದೆ ಒಂದು ಹೋಲಿಕೆ

ಒಂದು ವೇಳೆ, ಆಸ್ತಿದಾಖಲೆ ಕಳೆದುಹೋದರೆ ಆ ದಾಖಲೆಗಳ ಸರ್ಟಿಫೈಡ್ ಕಾಪಿಗಳನ್ನು ಪಡೆಯಲು ಬ್ಯಾಂಕು ತನ್ನದೇ ಖರ್ಚಿನಲ್ಲಿ ಗ್ರಾಹಕರಿಗೆ ನೆರವಾಗಬೇಕು. ಜೊತೆಗೆ ವಿಳಂಬಗೊಂಡ ಸಮಯದ ಆಧಾರದ ಮೇಲೆ ಗ್ರಾಹಕರಿಗೆ ಪರಿಹಾರವನ್ನೂ ಕೊಡಬೇಕು ಎಂದು ಆರ್​ಬಿಐನ ಈ ಸಮಿತಿ ತನ್ನ ಶಿಫಾರಸಿನಲ್ಲಿ ಸಲಹೆ ನೀಡಿತ್ತು.

ಬ್ಯಾಂಕುಗಳು ದೊಡ್ಡ ಮೊತ್ತದ ಸಾಲ ಕೊಡಲು ಮೂಲ ಆಸ್ತಿಪತ್ರಗಳನ್ನು ಅಡಮಾನವಾಗಿ ಪಡೆಯುತ್ತವೆ. ಸಾಲ ಪೂರ್ಣವಾಗಿ ತೀರಿದ ಬಳಿಕವಷ್ಟೇ ಈ ದಾಖಲೆಗಳನ್ನು ಗ್ರಾಹಕರಿಗೆ ಮರಳಿಸುತ್ತವೆ. ಆದರೆ ಸಾಲ ಮುಗಿದು ಬಹಳ ದಿನಗಳಾದರೂ ಆಸ್ತಿಪತ್ರಗಳನ್ನು ಮರಳಿಸುತ್ತಿಲ್ಲ ಎಂಬ ದೂರಗಳು ಬಹಳ ಕೇಳಿಬಂದಿದ್ದವಂತೆ. ಈ ಹಿನ್ನೆಲೆಯಲ್ಲಿ ಆರ್​ಬಿಐನ ಸಮಿತಿ ಈ ಸಮಸ್ಯೆಯನ್ನು ಪರಿಶೀಲಿಸಿ ನಿಯಮ ರೂಪಿಸಲು ಸಲಹೆ ನೀಡಿದೆ. ಆದರೆ, ಗ್ರಾಹಕರಿಗೆ ಎಷ್ಟು ಪರಿಹಾರ ಕೊಡಬೇಕು ಎಂಬ ಬಗ್ಗೆ ನಿರ್ದಿಷ್ಟವಾಗಿ ಮಾಹಿತಿ ಗೊತ್ತಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!