AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಭಾರತವನ್ನು ಆರ್ಥಿಕವಾಗಿ ಬದಲಾಯಿಸುವ ಕ್ರಮ ಹೇಗೆ? ಟಿವಿ9 ಜತೆಗೆ ಹಂಚಿಕೊಳ್ಳಲಿರುವ ಅಮುಲ್, ಎಸ್‌ಬಿಐ ಮುಖ್ಯಸ್ಥರು

ಆರ್ಥಿಕತೆಯಲ್ಲಿ ಇತರ ದೇಶಗಳಿಗೆ ಮಾದರಿಯಾಗುತ್ತಿದೆ ಭಾರತ. ಭಾರತದ ಮುಂದೆ ಇರುವ ಆರ್ಥಿಕ ಸವಾಲುಗಳು ಏನು? ಇಷ್ಟು ಅಭಿವೃದ್ಧಿಯ ಯೋಜನೆಗಳೇನು? ಎಂಬ ಪ್ರಶ್ನೆಗಳಿಗೆ ಟಿವಿ9 ನೆಟ್​​​ವರ್ಕ್​​ ನಡೆಸುತ್ತಿರುವ What India Thinks Today ಕಾರ್ಯಕ್ರಮದಲ್ಲಿ ಉತ್ತರ ಸಿಗಲಿದೆ. ಫೆ,25ರಿಂದ ಫೆ.27ರವರೆಗೆ ಈ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದೆ. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಆರ್ಥಿಕ ವಿಚಾರವಾವಾಗಿ ಅಮುಲ್ ಎಂಡಿ ಜಾಯೆನ್ ಮೆಹ್ತಾ ಮತ್ತು ಎಸ್‌ಬಿಐ ಮಾಜಿ ಅಧ್ಯಕ್ಷ ಮತ್ತು ಭಾರತ್‌ಪೇ ಪ್ರಸ್ತುತ ಅಧ್ಯಕ್ಷ ರಜನೀಶ್ ಕುಮಾರ್ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ.

What India Thinks Today: ಭಾರತವನ್ನು ಆರ್ಥಿಕವಾಗಿ ಬದಲಾಯಿಸುವ ಕ್ರಮ ಹೇಗೆ? ಟಿವಿ9 ಜತೆಗೆ ಹಂಚಿಕೊಳ್ಳಲಿರುವ ಅಮುಲ್, ಎಸ್‌ಬಿಐ ಮುಖ್ಯಸ್ಥರು
TV9 Web
| Edited By: |

Updated on: Feb 24, 2024 | 12:20 PM

Share

ಜಗತ್ತಿನ ಇತರ ದೇಶಗಳು ಆರ್ಥಿಕವಾಗಿ ಹಿಂಜರಿತಗೊಂಡಿದೆ. ಆದರೆ ಭಾರತ ಮಾತ್ರ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದೆ. ಡಿಜಿಟಲ್ ಫೈನಾನ್ಸ್ ಮತ್ತು ಫಿನ್‌ಟೆಕ್ ವಲಯವು ಭಾರತದ ಈ ಯಶಸ್ಸಿನ ಹಿಂದೆ ದೊಡ್ಡ ಪಾತ್ರವನ್ನು ಹೊಂದಿದೆ. ಇದು ದೇಶದಲ್ಲಿ ಆರ್ಥಿಕತೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ಇದರ ಜತೆಗೆ ಸಹಕಾರಿ ಕ್ಷೇತ್ರದಲ್ಲಿ ಅಮುಲ್‌ನಂತಹ ಕಂಪನಿಗಳು ಆರ್ಥಿಕತೆಯನ್ನು ಹೆಚ್ಚಿಸಿದ್ದಲ್ಲದೆ ಕೋಟಿಗಟ್ಟಲೆ ಜನರಿಗೆ ಉದ್ಯೋಗವನ್ನೂ ಒದಗಿಸಿವೆ.

ಇಂತಹ ಪರಿಸ್ಥಿತಿಯಲ್ಲಿ, ಈ ಕ್ಷೇತ್ರಗಳಿಗೆ ಸಂಬಂಧಿಸಿದ ಜನರು ಭಾರತದ ಭವಿಷ್ಯದ ಬಗ್ಗೆ ಏನು ಯೋಚಿಸುತ್ತಾರೆ? ಈ ಪ್ರಶ್ನೆಗೆ ಉತ್ತರ ದೇಶದ ನಂಬರ್-1 ಸಂಸ್ಥೆ ಟಿವಿ9 ನೆಟ್​​​ವರ್ಕ್​ ನೀಡಲಿದೆ. ಅಮುಲ್ ಎಂಡಿ ಜಾಯೆನ್ ಮೆಹ್ತಾ ಮತ್ತು ಎಸ್‌ಬಿಐ ಮಾಜಿ ಅಧ್ಯಕ್ಷ ಮತ್ತು ಭಾರತ್‌ಪೇ ಪ್ರಸ್ತುತ ಅಧ್ಯಕ್ಷ ರಜನೀಶ್ ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

What India Thinks Today ಕಾರ್ಯಕ್ರಮದ ಮೂಲಕ ಆರ್ಥಿಕ ಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ವೇದಿಕೆಯಲ್ಲಿ ಮೋದಿ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಸಿನಿಮಾ ಕ್ಷೇತ್ರದ ಸಾಧಕರು, ವಿಜ್ಞಾನಿಗಳು ಹಾಗೂ ಕ್ರೀಡಾ ಸಾಧಕರು, ಉದ್ಯಮಿಗಳು ಈ ಕಾರ್ಯಕ್ರಮದಲ್ಲಿ ಚರ್ಚಿಸಲಿದ್ದಾರೆ. ಮುಖ್ಯವಾಗಿ ಈ ಕಾರ್ಯಕ್ರಮದಲ್ಲಿ ಪ್ರಸಿದ್ಧ ವೆಂಚರ್ ಕ್ಯಾಪಿಟಲಿಸ್ಟ್‌ಗಳು, ಸಿಎಗಳು, ಸಿಇಒಗಳು ಮತ್ತು ಕಂಪನಿಗಳ ಅಧ್ಯಕ್ಷರು ಸಹ ಈ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಟಿವಿ9ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಕ್ಷಣಗಳನ್ನು ಹಂಚಿಕೊಳ್ಳಲಿರುವ ನಟಿ ರವೀನಾ ಟಂಡನ್

ಅಮುಲ್ ಎಂಡಿ ಜಯನ್ ಮೆಹ್ತಾ

ಅಮುಲ್ ಬ್ರಾಂಡ್‌ನ ಮೌಲ್ಯ 61 ಸಾವಿರ ಕೋಟಿ ರೂ.ಗಿಂತ ಹೆಚ್ಚಿದ್ದು, ಇದನ್ನು ಗುಜರಾತ್ ಕೋಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಹೊಂದಿದೆ. ಇನ್ನು ಜಯನ್ ಮೆಹ್ತಾ ಕಂಪನಿಯ ಎಂಡಿ ಆಗಿ ಅಧಿಕಾರ ವಹಿಸಿಕೊಂಡಾಗ, ಡೈರಿ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟವು ಕಂಪನಿಯ ಪ್ರಮುಖ ವ್ಯವಹಾರವಾಗಿದೆ. ಜಯನ್ ಮೆಹ್ತಾ 1991ರಲ್ಲಿ ಮೊದಲ ಬಾರಿಗೆ ಅಮುಲ್ ಜೊತೆ ಕೈಜೋಡಿಸಿದರು. ಅವರು ಇಲ್ಲಿ ಬ್ರಾಂಡ್ ಮ್ಯಾನೇಜರ್, ಗ್ರೂಪ್ ಪ್ರಾಡಕ್ಟ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡಿದರು. ಏಪ್ರಿಲ್-ಸೆಪ್ಟೆಂಬರ್ 2018 ರಿಂದ ಅಮುಲ್ ಡೈರಿಯ ಎಂಡಿ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಭಾರತ್ ಪೇ ಅಧ್ಯಕ್ಷ ರಜನೀಶ್ ಕುಮಾರ್

ಒಂದು ಕಾಲದಲ್ಲಿ ದೇಶದ ಐದನೇ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆಗಿದ್ದ ಯೆಸ್ ಬ್ಯಾಂಕ್ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಆ ಸಮಯದಲ್ಲಿ ಅದನ್ನು ಪುನರ್​​ಜೀವಗೊಳಿಸುವ ಜವಾಬ್ದಾರಿಯನ್ನು ಎಸ್‌ಬಿಐನ ರಜನೀಶ್ ಕುಮಾರ್‌ಗೆ ನೀಡಲಾಯಿತು. ಅದಕ್ಕೆ ತಕ್ಕಂತೆ ಒಳ್ಳೆಯ ಬೆಳವಣಿಯನ್ನು ಕಂಡಿದೆ. ಅವರು ಎಸ್‌ಬಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಪ್ರಸ್ತುತ ಅವರು ಭಾರತ್ ಪೇ ಅಧ್ಯಕ್ಷರಾಗಿದ್ದಾರೆ. ರಜನೀಶ್ ಕುಮಾರ್ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ 40 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಅವರಿಗೆ ಸಾಲ, ಯೋಜನೆಯ ಹಣಕಾಸು, ವಿದೇಶಿ ವಿನಿಮಯ ಮತ್ತು ಚಿಲ್ಲರೆ ಬ್ಯಾಂಕಿಂಗ್‌ಗೆ ಸಂಬಂಧಿಸಿದ ವಿಚಾರಗಳನ್ನು ನಿರ್ವಹಿಸಿದ ಅನುಭವವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ