AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಸೇಜ್ ಟ್ರೇಸ್ ಮಾಡೋಕ್ಕಾಗಲ್ಲ; ಬಲವಂತಪಡಿಸಿದರೆ ಭಾರತವನ್ನೇ ತೊರೆಯಬೇಕಾಗುತ್ತೆ: ವಾಟ್ಸಾಪ್ ಬೆದರಿಕೆ

Whatsapp Threatens to Shut Down Its Services In India: ವಾಟ್ಸಾಪ್ ಮೆಸೇಜ್​ಗಳನ್ನು ಟ್ರೇಸ್ ಮಾಡಲು ಆಗುವುದಿಲ್ಲ. ಆ ರೀತಿ ಟ್ರೇಸ್ ಮಾಡಲಾಗುವಂತೆ ಎನ್​ಕ್ರಿಪ್ಷನ್ ವ್ಯವಸ್ಥೆಯನ್ನು ಸಡಿಲಗೊಳಿಸಿದರೆ ಬಳಕೆದಾರರ ಗೌಪ್ಯತೆಗೆ ಧಕ್ಕೆಯಾಗುತ್ತದೆ. ಮೆಸೇಜ್ ಟ್ರೇಸಿಂಗ್​ಗೆ ಬಲವಂತ ಪಡಿಸಿದರೆ ಭಾರತದಿಂದ ತನ್ನ ವ್ಯವಹಾರಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ವಾಟ್ಸಾಪ್ ಸಂಸ್ಥೆ ಹೇಳಿದೆ. ಫೇಸ್​ಬುಕ್​ನ ಸೋದರಸಂಸ್ಥೆಯಾದ ವಾಟ್ಸಾಪ್ ಇತ್ತೀಚೆಗೆ ದೆಹಲಿ ಹೈಕೋರ್ಟ್ ವಿಚಾರಣೆಯಲ್ಲಿ ಈ ವಿಚಾರದಲ್ಲಿ ತನ್ನ ಅಭಿಪ್ರಾಯಗಳನ್ನು ತಿಳಿಸಿದೆ.

ಮೆಸೇಜ್ ಟ್ರೇಸ್ ಮಾಡೋಕ್ಕಾಗಲ್ಲ; ಬಲವಂತಪಡಿಸಿದರೆ ಭಾರತವನ್ನೇ ತೊರೆಯಬೇಕಾಗುತ್ತೆ: ವಾಟ್ಸಾಪ್ ಬೆದರಿಕೆ
ವಾಟ್ಸಾಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 26, 2024 | 3:29 PM

Share

ನವದೆಹಲಿ, ಏಪ್ರಿಲ್ 26: ಬಳಕೆದಾರರ ಗೌಪ್ಯತೆ (users privacy) ವಿಚಾರದಲ್ಲಿ ಆ್ಯಪಲ್ ಸಂಸ್ಥೆ ಬಹಳ ಕಟ್ಟುನಿಟ್ಟು. ವಾಟ್ಸಾಪ್ ಕೂಡ ಅದೇ ಪ್ರವೃತ್ತಿ ತೋರುತ್ತಿದೆ. ತನ್ನ ಪ್ಲಾಟ್​ಫಾರ್ಮ್​ನಲ್ಲಿ ಮೆಸೇಜ್​ಗಳನ್ನು ಟ್ರೇಸ್ ಮಾಡಲು ಬಲವಂತಪಡಿಸಿದರೆ ಭಾರತದಲ್ಲಿ ಸೇವೆ ನಿಲ್ಲಿಸಬೇಕಾಗುತ್ತದೆ ಎಂದು ವಾಟ್ಸಾಪ್ (Whatsapp) ಎಚ್ಚರಿಕೆ ನೀಡಿದೆ. ಮೊನ್ನೆಮೊನ್ನೆ ದೆಹಲಿ ಹೈಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ತನ್ನ ನಿಲುವನ್ನು ವಾಟ್ಸಾಪ್ ನಿವೇದಿಸಿಕೊಂಡಿದೆ. ವಾಟ್ಸಾಪ್ ಬಳಕೆದಾರರಿಗೆ ತಮ್ಮ ಗೌಪ್ಯತೆ ಬಗ್ಗೆ ಭದ್ರತಾ ಭಾವನೆ ಇದೆ. ಅದರಲ್ಲಿರುವ ಎನ್​ಕ್ರಿಪ್ಷನ್​ಗಳು ಬಳಕೆದಾರರ ಸಂದೇಶದ ಗೌಪ್ಯತೆಗೆ ಕಾರಣವಾಗಿದೆ. ಈ ಎನ್​ಕ್ರಿಪ್ಷನ್ ವ್ಯವಸ್ಥೆಯನ್ನು ಸಡಿಲಗೊಳಿಸಿದರೆ ವಾಟ್ಸಾಪ್​ನ ವಿಶ್ವಾಸಾರ್ಹತೆ ಕಡಿಮೆ ಆಗುತ್ತದೆ ಎಂದು ವಾಟ್ಸಾನ್ ನ್ಯಾಯಾಲಯದ ಮುಂದೆ ವಿವರಣೆ ನೀಡಿದೆ.

ವಾಟ್ಸಾಪ್ ಅನ್ನು ಸೈಬರ್ ಕ್ರೈಮ್​ಗಳಿಗೆ ಬಳಸಲಾಗುತ್ತಿದೆ. ಸಮಾಜ ಘಾತುಕ ಶಕ್ತಿಗಳು ಪ್ರಚೋದನಕಾರಿ ಸಂಗತಿಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಳ್ಳುತ್ತಿವೆ. ಹೀಗಾಗಿ, ಇಂಥ ಸಂದೇಶಗಳ ಮೂಲವನ್ನು ಪತ್ತೆ ಹಚ್ಚಲು ವಾಟ್ಸಾಪ್ ಸೇರಿದಂತೆ ಇತರ ಮೆಸೇಜಿಂಗ್ ಅಪ್ಲಿಕೇಶನ್​ಗಳು ನೆರವಾಗಬೇಕು ಎಂದು ಭಾರತ ಸರ್ಕಾರ ಹಲವು ಬಾರಿ ಒತ್ತಾಯ ಹಾಕುತ್ತಿದೆ. ವಾಟ್ಸಾಪ್​ನಲ್ಲಿ ಪೋಸ್ಟ್ ಆಗುವ ಪ್ರತಿಯೊಂದು ಚ್ಯಾಟ್ ಎನ್​ಕ್ರಿಪ್ಟ್ ಆಗಿರುತ್ತದೆ. ಇದರ ಕೀ ವಾಟ್ಸಾಪ್​ಗೂ ಗೊತ್ತಿರುವುದಿಲ್ಲ. ಈ ವ್ಯವಸ್ಥೆಯನ್ನು ಸಡಿಲಗೊಳಿಸುವುದೆಂದರೆ ಬಳಕೆದಾರರಿಗೆ ವಾಟ್ಸಾಪ್ ಮೇಲಿನ ವಿಶ್ವಾಸ ಹೋಗಬಹುದು. ಭಾರತದ ಸಂವಿಧಾನದತ್ತವಾಗಿ ಸಿಗುವ ಗೌಪ್ಯತೆಯ ಉಲ್ಲಂಘನೆಯೂ ಆದಂತಾಗುತ್ತದೆ. ಈ ವಾದವನ್ನು ಮುಂದಿಟ್ಟುಕೊಂಡು ಭಾರತದ ಐಟಿ ನಿಯಮಗಳ ವಿರುದ್ಧ ನಿಲ್ಲಲು ವಾಟ್ಸಾಪ್ ನಿರ್ಧರಿಸಿದೆ.

ಇದನ್ನೂ ಓದಿ: ವಾಟ್ಸಾಪ್​ನಲ್ಲಿ ಇಂಟರ್ನೆಟ್ ಇಲ್ಲದೆಯೂ ಫೋಟೋ, ವಿಡಿಯೋ ಷೇರ್ ಮಾಡಬಹುದು; ಬರಲಿದೆ ಹೊಸ ಫೀಚರ್

ಭಾರತದಿಂದ ನಿರ್ಗಮಿಸುತ್ತದಾ ವಾಟ್ಸಾಪ್?

ಭಾರತದಲ್ಲಿ 40 ಕೋಟಿ ಸಕ್ರಿಯ ವಾಟ್ಸಾಪ್ ಬಳಕೆದಾರರಿದ್ದಾರೆ. ಜಾಗತಿಕವಾಗಿ ಇರುವ ವಾಟ್ಸಾಪ್ ಬಳಕೆದಾರರಲ್ಲಿ ಹೆಚ್ಚಿನವರು ಭಾರತೀಯರಿದ್ದಾರೆ. ಅಲ್ಲದೇ ಭಾರತದಲ್ಲಿ ವಾಟ್ಸಾಪ್​ನಲ್ಲಿ ಯುಪಿಐ ಪೇಮೆಂಟ್ ಫೀಚರ್ ಕೂಡ ಇದೆ. ಅಷ್ಟು ಸುಲಭಕ್ಕೆ ವಾಟ್ಸಾಪ್ ಭಾರತದ ವ್ಯವಹಾರವನ್ನು ಬಂದ್ ಮಾಡುವುದಿಲ್ಲ.

ಭಾರತದಲ್ಲಿ ಮಾತ್ರವಲ್ಲ ಬೇರೆ ದೇಶಗಳಲ್ಲೂ ವಾಟ್ಸಾಪ್ ಈ ರೀತಿಯಾಗಿ ಮೆಸೇಜ್ ಟ್ರೇಸಿಂಗ್​ಗೆ ಒತ್ತಡಗಳನ್ನು ಎದುರಿಸುತ್ತಿದೆ. ಹಾಗೂ ಹೀಗೂ ಆ ಕಾನೂನುಗಳಿಗೆ ವಾಟ್ಸಾಪ್ ಪ್ರತಿರೋಧ ತೋರುತ್ತಾ ತನ್ನ ಗೌಪ್ಯತಾ ನೀತಿಯನ್ನು ಉಳಿಸಿಕೊಂಡು ಬರುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Fri, 26 April 24

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು