AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wheat Flour Price: ಗೋಧಿ ಹಿಟ್ಟಿನ ದರ ಗಣನೀಯ ಹೆಚ್ಚಳ; ಗೋಧಿ ಪೂರೈಸುವಂತೆ ಸರ್ಕಾರಕ್ಕೆ ವರ್ತಕರ ಆಗ್ರಹ

ಈ ವರ್ಷ ಸರ್ಕಾರವು ಮುಕ್ತ ಮಾರುಕಟ್ಟೆ ಯೋಜನೆಯಡಿ ಗೋಧಿಯನ್ನು ಖಾಸಗಿ ಮಾರುಕಟ್ಟೆಗೆ ಬಿಡುಗಡೆ ಮಾಡದಿರುವುದೂ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

Wheat Flour Price: ಗೋಧಿ ಹಿಟ್ಟಿನ ದರ ಗಣನೀಯ ಹೆಚ್ಚಳ; ಗೋಧಿ ಪೂರೈಸುವಂತೆ ಸರ್ಕಾರಕ್ಕೆ ವರ್ತಕರ ಆಗ್ರಹ
ಸಾಂದರ್ಭಿಕ ಚಿತ್ರImage Credit source: The Indian Expres
Follow us
TV9 Web
| Updated By: Ganapathi Sharma

Updated on:Nov 28, 2022 | 1:12 PM

ನವದೆಹಲಿ: ಚಿಲ್ಲರೆ ಮಾರಾಟದ (Retail) ಗೋಧಿ ಹಿಟ್ಟಿನ (Wheat Flour) ಬೆಲೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಒಂದು ವರ್ಷದ ಅವಧಿಯಲ್ಲಿ ಗೋಧಿ ಹಿಟ್ಟಿನ ಬೆಲೆ ಶೇಕಡಾ 17ರಷ್ಟು ಏರಿಕೆಯಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಗೋಧಿ (Wheat) ಲಭ್ಯತೆ ಕಡಿಮಯಾಗಿರುವುದೇ ದರ ಹೆಚ್ಚಳಕ್ಕೆ ಕಾರಣ ಎಂದು ವರ್ತಕರು ಮತ್ತು ಮಿಲ್​ಗಳ ಮೂಲಗಳು ತಿಳಿಸಿವೆ. ಸರ್ಕಾರವು ದಾಸ್ತಾನಿಟ್ಟಿರುವ ಗೋಧಿಯನ್ನು ಮಾರುಕಟ್ಟೆಗೆ ಪೂರೈಸಬೇಕೆಂದು ವರ್ತಕರು ಆಗ್ರಹಿಸಿದ್ದಾರೆ. ಪೂರೈಕೆ ಕೊರತೆಯಿಂದಾಗಿ ಗೋಧಿ ಹಿಟ್ಟಿನ ದರ ಹೆಚ್ಚಾಗುತ್ತಿದೆ. ಸದ್ಯ ಒಂದು ಕೆಜಿ ಗೋಧಿ ಹಿಟ್ಟಿನ ದರ 36.98 ರೂ. ಆಗಿದ್ದು, ಅಕ್ಕಿ ದರದ ಸನಿಹಕ್ಕೆ ಬಂದಿದೆ ಎಂಬುದು ಗ್ರಾಹಕ ವ್ಯವಹಾರಗಳ ಸಚಿವಾಲಯದ ದತ್ತಾಂಶಗಳಿಂದ ತಿಳಿದುಬಂದಿದೆ.

ಗೋಧಿ ದರ ಹೆಚ್ಚಾಗಿರುವುದೇ ಗೋಧಿ ಹಿಟ್ಟಿನ ದರ ಹೆಚ್ಚಳಕ್ಕೆ ಪ್ರಮುಖ ಕಾರಣ. ಈ ವರ್ಷ ಸರ್ಕಾರವು ಮುಕ್ತ ಮಾರುಕಟ್ಟೆ ಯೋಜನೆಯಡಿ ಗೋಧಿಯನ್ನು ಖಾಸಗಿ ಮಾರುಕಟ್ಟೆಗೆ ಬಿಡುಗಡೆ ಮಾಡದಿರುವುದೂ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ‘ರೋಲರ್ ಫ್ಲೋರ್ ಮಿಲ್ಸ್ ಅಸೋಸಿಯೇಷನ್’ನ ರಾಕೇಶ್ ಆನಂದ್ ತಿಳಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ. ಸಾಮಾನ್ಯವಾಗಿ ಸರ್ಕಾರವು ಭಾರತೀಯ ಆಹಾರ ನಿಗಮದ ಗೋದಾಮುಗಳಲ್ಲಿ ದಾಸ್ತಾನಿಟ್ಟಿರುವ ಗೋಧಿಯನ್ನು ಮುಕ್ತ ಮಾರುಕಟ್ಟೆ ಯೋಜನೆಯಡಿ ಪೂರೈಕೆ ಮಾಡುತ್ತದೆ. ದರ ನಿಯತ್ರಣದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಈ ಕ್ರಮವನ್ನು ಅನುಸರಿಸಲಾಗುತ್ತಿದೆ.

ಗೋದಾಮುಗಳಿಂದ ಮಾರುಕಟ್ಟೆಗೆ ಬಾರದ ಗೋಧಿ

ದಾಸ್ತಾನು ಕಡಿಮೆಯಾಗಿ ಸಮಸ್ಯೆ ಸೃಷ್ಟಿಯಾಗದಂತೆ ನೋಡಿಕೊಳ್ಳುವ ಸಲುವಾಗಿ ಸರ್ಕಾರ ಈ ವರ್ಷ ಮುಕ್ತ ಮಾರುಕಟ್ಟೆ ಯೋಜನೆಯಡಿ ಖಾಸಗಿ ಮಾರುಕಟ್ಟೆಗಳಿಗೆ ಗೋಧಿ ಬಿಡುಗಡೆ ಮಾಡಿಲ್ಲ. ಹೀಗಾಗಿ ಉತ್ತರ ಭಾರತದಲ್ಲಿ ಗೋಧಿ ಬೆಲೆ ಪ್ರತಿ ಕ್ವಿಂಟಲ್​ಗೆ 2,900 ರೂ. ತಲುಪಿದೆ. ಪ್ರತಿ ಕ್ವಿಂಟಲ್​ಗೆ ನಿಗದಿಯಾಗಿರುವ ಕನಿಷ್ಠ ಬೆಂಬಲ ಬೆಲೆ 2,125 ರೂ. ಇದೆ ಎಂದು ಪಂಜಾಬ್​ನ ಖನ್ನಾ ಮಂಡಿಯ ವ್ಯಾಪಾರಿ ವಿನೋದ್ ಜೋಹರ್ ತಿಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಮಧ್ಯೆ, ಸರ್ಕಾರವು ಗೋಧಿ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ನಿರ್ವಹಿಸುತ್ತಿದೆ. ಸದ್ಯ ಗೋಧಿ ದರ ಕನಿಷ್ಠ ಬೆಂಬಲ ಬೆಲೆಗಿಂತ ಹೆಚ್ಚಿನ ಮಟ್ಟದಲ್ಲಿದೆ. ಇದರಿಂದ ರೈತರಿಗೆ ಪ್ರಯೋಜನವಾಗಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಗೋಧಿಯ ಚಿಲ್ಲರೆ ಅಥವಾ ರಿಟೇಲ್ ಮಾರಾಟ ದರದಲ್ಲಿ ತುಸು ಹೆಚ್ಚಳವಾಗಿದೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ.

ಬಿಸಿ ಗಾಳಿಯಿಂದ ಉತ್ಪಾದನೆ ಕುಸಿತ

ಹಿಂದಿನ ವರ್ಷ ಬಿಸಿ ಗಾಳಿಯ ಪರಿಣಾಮ ಗೋಧಿ ಉತ್ಪಾದನೆ 3 ದಶಲಕ್ಷ ಟನ್​​ಗಳಷ್ಟು ಕುಸಿತವಾಗಿತ್ತು. 106 ದಶಲಕ್ಷ ಟನ್​ ಗೋಧಿ ಉತ್ಪಾದನೆಯಾಗಿತ್ತು. ಸರ್ಕಾರಕ್ಕೆ 18.7 ದಶಲಕ್ಷ ಟನ್ ಗೋಧಿ ಸಂಗ್ರಹಿಸಲಷ್ಟೇ ಸಾಧ್ಯವಾಗಿತ್ತು. ಅದಕ್ಕಿಂತ ಹಿಂದಿನ ವರ್ಷ 43.3 ದಶಲಕ್ಷ ಟನ್ ಗೋಧಿ ದಾಸ್ತಾನಿರಿಸಿತ್ತು ಸರ್ಕಾರ. ದೇಶದಲ್ಲಿ ಆಹಾರ ಸಂಕಷ್ಟ ತಲೆದೋರದಂತೆ ಮಾಡಲು ಮತ್ತು ಬೆಲೆ ಏರಿಕೆ ನಿಯಂತ್ರಣದಲ್ಲಿರಲು ಮೇ ತಿಂಗಳಲ್ಲಿ ಗೋಧಿ ರಫ್ತಿನ ಮೇಲೆ ನಿರ್ಬಂಧ ವಿಧಿಸಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Mon, 28 November 22

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್