AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಬದಲಾವಣೆ ನಂತರ ಇಪಿಎಫ್ ಖಾತೆದಾರರು ಖಾತೆ ವರ್ಗಾವಣೆ ಬಗ್ಗೆ ಚಿಂತಿಸಬೇಕಿಲ್ಲ ಏಕೆ, ಇಲ್ಲಿದೆ ಮಾಹಿತಿ

ಇಪಿಎಫ್​ಒ ಖಾತೆದಾರರು ತಮ್ಮ ಉದ್ಯೋಗವನ್ನು ಬದಲಾವಣೆ ಮಾಡಿದಾಗ ಇನ್ನು ಖಾತೆ ವರ್ಗಾವಣೆ ಮಾಡುವ ಅಗತ್ಯ ಇರುವುದಿಲ್ಲ ಏಕೆ ಗೊತ್ತೆ?

ಉದ್ಯೋಗ ಬದಲಾವಣೆ ನಂತರ ಇಪಿಎಫ್ ಖಾತೆದಾರರು ಖಾತೆ ವರ್ಗಾವಣೆ ಬಗ್ಗೆ ಚಿಂತಿಸಬೇಕಿಲ್ಲ ಏಕೆ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 23, 2021 | 1:10 PM

Share

ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಸಭೆ ನವೆಂಬರ್ 20, 2021ರ ಶನಿವಾರದಂದು ನಡೆದಿತ್ತು. ಕೇಂದ್ರೀಕೃತ ಮಾಹಿತಿ ತಂತ್ರಜ್ಞಾನ ಬೆಂಬಲಿತ ವ್ಯವಸ್ಥೆ ಅಭಿವೃದ್ಧಿಗೊಳಿಸಲು ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಅಡ್ವಾನ್ಸ್ಡ್​ ಕಂಪ್ಯೂಟಿಂಗ್ (C-DAC)ಗೆ ಸಿಬಿಟಿಯಿಂದ ವಹಿಸಲಾಗಿದೆ. ಈ ಬೆಳವಣಿಗೆಯ ನಂತರ ಉದ್ಯೋಗಿಗಳು ಉದ್ಯೋಗ ಬದಲಾವಣೆ ಮಾಡಿದ ನಂತರವೂ ಅದೇ ಇಪಿಎಫ್ ಖಾತೆ ಸಂಖ್ಯೆ ಮುಂದುವರಿಯಲಿದೆ. “ಇದರ ನಂತರ, ಕ್ಷೇತ್ರ ಕಾರ್ಯಚಟುವಟಿಕೆಗಳು ಹಂತಹಂತವಾಗಿ ಕೇಂದ್ರ ಡೇಟಾಬೇಸ್​ಗೆ ವರ್ಗಾವಣೆ ಆಗುತ್ತವೆ. ಸುಗಮ ಕಾರ್ಯಾಚರಣೆಗಳು ಮತ್ತು ವರ್ಧಿತ ಸೇವಾ ವಿತರಣೆಯನ್ನು ಇದು ಸಕ್ರಿಯಗೊಳಿಸುತ್ತದೆ. ಕೇಂದ್ರೀಕೃತ ವ್ಯವಸ್ಥೆಯು ಯಾವುದೇ ಸದಸ್ಯರ ಎಲ್ಲ ಪಿಎಫ್​ ಖಾತೆಗಳ ಡಿ-ನಕಲು ಮತ್ತು ವಿಲೀನವನ್ನು ಸುಲಭಗೊಳಿಸುತ್ತದೆ. ಇದು ಕೆಲಸ ಬದಲಾವಣೆಯ ನಂತರ ವರ್ಗಾವಣೆ ಅಗತ್ಯವನ್ನು ತೆಗೆದುಹಾಕುತ್ತದೆ,” ಎಂದು ನಿವೃತ್ತಿ ನಿಧಿ ಸಂಸ್ಥೆಯ ಬಿಡುಗಡೆಯು ಕೇಂದ್ರೀಯ ಮಂಡಳಿ, ಇಪಿಎಫ್ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಪಟ್ಟಿ ಮಾಡಿದೆ.

ಸಭೆಯಲ್ಲಿ CBT ಅಧ್ಯಕ್ಷರು ‘ಕೊವಿಡ್‌ಗೆ ಪ್ರತಿಕ್ರಿಯೆ – 2.0’ ಎಂಬ ಶೀರ್ಷಿಕೆಯ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಕಿರುಪುಸ್ತಕವು ಕೊವಿಡ್ -19 ಸಾಂಕ್ರಾಮಿಕದ ಕಷ್ಟದ ಸಮಯದಲ್ಲಿ ಅದರ ಮಧ್ಯಸ್ಥಗಾರರಿಗೆ ಅಡೆತಡೆಯಿಲ್ಲದ ಸೇವೆಗಳನ್ನು ಆವಿಷ್ಕರಿಸಲು ಮತ್ತು ನೀಡಲು ಇಪಿಎಫ್‌ಒ ಹೇಗೆ ಸಂಸಿದ್ಧಗೊಂಡಿದೆ ಎಂಬುದನ್ನು ವಿವರಿಸುವ ಪ್ರಯತ್ನವಾಗಿದೆ. ಕಿರುಪುಸ್ತಕವು ಸರಣಿಯಲ್ಲಿ ಎರಡನೆಯದು. ಮೊದಲ ಆವೃತ್ತಿಯನ್ನು 2021ರ ಮಾರ್ಚ್​ನಲ್ಲಿ ಶ್ರೀನಗರದಲ್ಲಿ ನಡೆದ 228ನೇ CBT ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.

‘ನಿರ್ಬದ್: ತಡೆರಹಿತ ಸೇವಾ ವಿತರಣೆ’ ಎಂಬ ಶೀರ್ಷಿಕೆಯ ಮತ್ತೊಂದು ಕಿರುಪುಸ್ತಕ. ಈ ಕಿರುಪುಸ್ತಕವು ಕಳೆದ ಮೂರು ವರ್ಷಗಳಲ್ಲಿ ‘ಇಪಿಎಫ್​ಒನಿಂದ e-ಇಪಿಎಫ್​ಒ’ಗೆ ಯಶಸ್ವಿ ಡಿಜಿಟಲ್ ರೂಪಾಂತರದ ಕಡೆಗೆ ಇಪಿಎಫ್​ಒ ಅಳವಡಿಸಿಕೊಂಡ ಉಪಕ್ರಮಗಳು ಮತ್ತು ಕಾರ್ಯತಂತ್ರಗಳ ಸಂಕಲನವಾಗಿದೆ. ಈ ಪ್ರಯತ್ನಗಳು ಇಪಿಎಫ್‌ಒಗೆ ಡಿಜಿಟಲ್ ಸಂವಹನ ಮಾಡುವ ಪೇಪರ್‌ಲೆಸ್ ಸಂಸ್ಥೆ ಆಗುತ್ತ ಸಾಗಲು ಅನುವು ಮಾಡಿಕೊಟ್ಟಿದೆ. ಆ ಮೂಲಕ ಅದರ ಎಲ್ಲ ಪಾಲುದಾರರಿಗೆ ಜೀವನವನ್ನು ಸುಲಭಗೊಳಿಸುತ್ತದೆ.

ಇದನ್ನೂ ಓದಿ: EPFO: ಇಪಿಎಫ್​ಒದಿಂದ ಎಕ್ಸ್​ಗ್ರೇಷಿಯಾ ಮರಣ ಪರಿಹಾರ ನಿಧಿ ರೂ. 4.20 ಲಕ್ಷದಿಂದ 8 ಲಕ್ಷಕ್ಕೆ ವಿಸ್ತರಣೆ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್