AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price: ಎಲ್​ಪಿಜಿ ದರ ನಿರ್ಧರಿಸುವುದು ಯಾರು? ಬೆಲೆ ಏರಿಕೆ, ಇಳಿಕೆಗೆ ಕಾರಣವೇನು? ಇಲ್ಲಿದೆ ಮಾಹಿತಿ

ದೇಶದಲ್ಲಿ ಆಗಾಗ ಇಂಧನ ದರಗಳು ಯಾಕೆ ಬದಲಾಗುತ್ತವೆ? ಪೆಟ್ರೋಲ್, ಡೀಸೆಲ್ ಹಾಗೂ ಎಲ್​ಪಿಜಿ ಬೆಲೆಯ ಬಗ್ಗೆ ನಿರ್ಧಾರ ಕೈಗೊಳ್ಳುವವರು ಯಾರು? ಬೆಲೆಯ ಲೆಕ್ಕಾಚಾರ ಹಾಕುವ ವಿಧಾನವೇನು? ಇಲ್ಲಿದೆ ಮಾಹಿತಿ.

LPG Price: ಎಲ್​ಪಿಜಿ ದರ ನಿರ್ಧರಿಸುವುದು ಯಾರು? ಬೆಲೆ ಏರಿಕೆ, ಇಳಿಕೆಗೆ ಕಾರಣವೇನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Nov 01, 2022 | 11:36 AM

Share

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್‌ (LPG Cylinder) ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. 19 ಕೆಜಿ ಸಿಲಿಂಡರ್ ದರದಲ್ಲಿ 115.50 ರೂಪಾಯಿ ಇಳಿಕೆ ಮಾಡಲಾಗಿದೆ. ಇದರೊಂದಿಗೆ ಸತತ ಆರನೇ ತಿಂಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾದಂತಾಗಿದೆ. ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿದ್ದ ಪೆಟ್ರೋಲ್ (Petrol Rate) ಹಾಗೂ ಡೀಸೆಲ್ ಬೆಲೆಯೂ ಇಳಿಕೆಯಾಗಿದೆ. ದೇಶದಲ್ಲಿ ಆಗಾಗ ಇಂಧನ ದರಗಳು ಯಾಕೆ ಬದಲಾಗುತ್ತವೆ? ಪೆಟ್ರೋಲ್, ಡೀಸೆಲ್ ಹಾಗೂ ಎಲ್​ಪಿಜಿ ಬೆಲೆಯ ಬಗ್ಗೆ ನಿರ್ಧಾರ ಕೈಗೊಳ್ಳುವವರು ಯಾರು? ಬೆಲೆಯ ಲೆಕ್ಕಾಚಾರ ಹಾಕುವ ವಿಧಾನವೇನು? ಇಲ್ಲಿದೆ ಮಾಹಿತಿ.

ಎಲ್​ಪಿಜಿ ಬೆಲೆ ನಿರ್ಧರಿಸುವವರು ಯಾರು?

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಒಕ್ಕೂಟವು ಎಲ್​ಪಿಜಿ, ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿರ್ಧರಿಸುವುದು ಅಥವಾ ಕಾಲಕ್ಕನುಗುಣವಾಗಿ ಪರಿಷ್ಕರಿಸುವ ಕೆಲಸ ಮಾಡುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ದರಕ್ಕೆ ಅನುಗುಣವಾಗಿ ಈ ಕಂಪನಿಗಳು ಎಲ್​ಪಿಜಿ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ದಿನ ಪರಿಷ್ಕರಿಸಲಾಗುತ್ತದೆ. ಆದರೆ, ಎಲ್​​ಪಿಜಿ ಬೆಲೆಯನ್ನು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. ಬೆಲೆ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸರ್ಕಾರ ನೇರವಾಗಿ ಭಾಗಿಯಾಗುವುದಿಲ್ಲವಾದರೂ ತೈಲ ಕಂಪನಿಗಳ ಮೇಲೆ ಪ್ರಬಾವ ಬೀರುತ್ತದೆ ಎಂಬ ಆರೋಪಗಳು ಹಿಂದಿನಿಂದಲೂ ಇವೆ. ಮೇ 22ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದಾದ ಬಳಿಕ ಸುಮಾರು ಐದೂವರೆ ತಿಂಗಳಿನಿಂದ ಉಭಯ ಇಂಧನ ದರ ಯಥಾಸ್ಥಿತಿಯಲ್ಲಿತ್ತು ಎಂಬುದು ಗಮನಾರ್ಹ. ಇನ್ನು ಕೆಲವೊಮ್ಮೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ದರ ವ್ಯತ್ಯಾಸವಾಗದೇ ಇದ್ದಾಗ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ದರ ಯಥಾಸ್ಥಿತಿಯಲ್ಲಿ ಮುಂದುವರಿಯುವುದೂ ಇದೆ.

ಇದನ್ನೂ ಓದಿ
Image
Petrol Price on November 1: ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಪ್ರತಿ ಲೀಟರ್​ಗೆ 40 ಪೈಸೆ ಕುಸಿತ
Image
LPG Cylinder Price: ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ; ನಿಮ್ಮ ನಗರದಲ್ಲಿ ಬೆಲೆ ಎಷ್ಟು?
Image
Banking Frauds: ಎಚ್ಚರ, ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್ ಇದೆಯೇ ನೋಡಿಕೊಂಡು ವ್ಯವಹರಿಸಿ
Image
FD Rates: ಎಫ್​ಡಿಗೆ ಶೇಕಡಾ 7ಕ್ಕಿಂತಲೂ ಹೆಚ್ಚು ಬಡ್ಡಿ ನೀಡುತ್ತಿವೆ ಈ ಬ್ಯಾಂಕ್​ಗಳು

ಎಲ್​ಪಿಜಿ ದರ ಲೆಕ್ಕ ಹಾಕುವುದು ಹೀಗೆ…

ಎಲ್​ಪಿಜಿ ದರ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರವಹಿಸುವುದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೈಸರ್ಗಿಕ ಅನಿಲದ ದರ. ಭಾರತದಲ್ಲಿ ಐಪಿಪಿ (import parity price ಅಥವಾ ಆಮದು ಸಮಾನ ಬೆಲೆ) ಮಾನದಂಡವನ್ನು ಬಳಸಿಕೊಂಡು ಎಲ್​ಪಿಜಿ ದರ ಲೆಕ್ಕ ಹಾಕಲಾಗುತ್ತದೆ. ಯಾಕೆಂದರೆ, ದೇಶದ ಬಹುಪಾಲು ನೈಸರ್ಗಿಕ ಅನಿಲವನ್ನು ಆಮದು ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: LPG Cylinder Price: ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ; ನಿಮ್ಮ ನಗರದಲ್ಲಿ ಬೆಲೆ ಎಷ್ಟು?

ವಿಶ್ವದ ಅತಿದೊಡ್ಡ ನೈಸರ್ಗಿಕ ಅನಿಲ ಉತ್ಪಾದಕ ‘ಸೌದಿ ಅರಾಮ್ಕೊ’ದ ಎಲ್​ಪಿಜಿ ದರಕ್ಕೆ ಹೊಂದಿಕೊಂಡು ಐಪಿಪಿ ಲೆಕ್ಕಹಾಕಲಾಗುತ್ತದೆ. ಲೆಕ್ಕಾಚಾರದ ವೇಳೆ, ಎಫ್​ಒಬಿ ದರ (ಸರಕಿನ ಮಾಲೀಕತ್ವ ವರ್ಗಾವಣೆ ಮತ್ತು ಸಾಗಾಟದ ವೇಳೆ ಸರಕಿಗೆ ಹಾನಿಯಾದರೆ ಅದರ ವೆಚ್ಚ ಭರಿಸಿಕೊಳ್ಳಲು ವಹಿಸಿಕೊಳ್ಳಬೇಕಾದ ಜವಾಬ್ದಾರಿಗೆ ಸಂಬಂಧಿಸಿದ್ದು), ಸಾಗಾಟ ವೆಚ್ಚ, ಅಬಕಾರಿ ಸುಂಕಗಳು, ಬಂದರು ವೆಚ್ಚ, ವಿಮಾ ಖರ್ಚುಗಳನ್ನು ಸೇರಿಸಿಕೊಳ್ಳಲಾಗುತ್ತದೆ. ಕಚ್ಚಾ ವಸ್ತುಗಳು, ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿನ ಅಂತಾರಾಷ್ಟ್ರೀಯ ಎಲ್​ಪಿಜಿ ದರದಲ್ಲಿ ಏರಿಳಿತವಾಗುತ್ತದೆ. ಇದಕ್ಕನುಗುಣವಾಗಿ ದೇಶೀಯ ಮಾರುಕಟ್ಟೆಯಲ್ಲಿಯೂ ದರ ವ್ಯತ್ಯಾಸವಾಗುತ್ತದೆ. ಮೊದಲಿಗೆ ಅಮೆರಿಕನ್ ಡಾಲರ್​ನಲ್ಲಿ ಎಲ್​ಪಿಜಿ ಬೆಲೆ ಲೆಕ್ಕಹಾಕಲಾಗುತ್ತದೆ. ಬಳಿಕ ಭಾರತೀಯ ರೂಪಾಯಿಗೆ ಲೆಕ್ಕಹಾಕಿ ದರ ನಿಗದಿಪಡಿಸಲಾಗುತ್ತದೆ.

ನೀವು ಪಾವತಿಸಬೇಕಾದ ದರ

ಅಂತಾರಾಷ್ಟ್ರೀಯ ದರ, ಸಾಗಾಟ ವೆಚ್ಚವೂ ಸೇರಿದಂತೆ ದೇಶದಲ್ಲಿ ಸೇರ್ಪಡೆಯಾಗುವ ದರ, ತೈಲ ಕಂಪನಿಗಳು ಉಳಿಸಿಕೊಳ್ಳುವ ಶುಲ್ಕ, ಬಾಟಲಿಂಗ್ ವೆಚ್ಚ, ಮಾರುಕಟ್ಟೆ ವೆಚ್ಚಗಳು, ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಇವುಗಳನ್ನೆಲ್ಲ ಲೆಕ್ಕ ಹಾಕಿದ ಬಳಿಕ ವಿವಿಧ ರಾಜ್ಯಗಳಲ್ಲಿ ಆಯಾ ರಾಜ್ಯಗಳ ತೆರಿಗೆಗೆ ಅನುಗುಣವಾಗಿ ಸಬ್ಸಿಡಿ ರಹಿತ ಎಲ್​ಪಿಜಿ ಚಿಲ್ಲರೆ ಮಾರಾಟದ ದರ ನಿರ್ಧರಿಸಲಾಗುತ್ತದೆ.

ದರ ಹೆಚ್ಚಳ, ಇಳಿಕೆಗೆ ಪ್ರಮುಖ ಕಾರಣ

ಎಲ್​ಪಿಜಿ ದರ ಹೆಚ್ಚಳ ಮತ್ತು ಇಳಿಕೆಯು ಆಮದಿನ ಬೆಲೆಯನ್ನು ಅವಲಂಬಿಸಿದೆ. ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಹೆಚ್ಚಳ ಮತ್ತು ಇಳಿಕೆಯು ದೇಶೀಐ ಎಲ್​ಪಿಜಿ ದರದ ಮೇಲೆ ನೇರ ಪರಿಣಾಮ ಬೀರುತ್ತದೆ.

(ಮಾಹಿತಿ – ವಿವಿಧ ಮೂಲಗಳಿಂದ)

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ