AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಲಾ ಕಂಪನಿ ಕರ್ನಾಟಕಕ್ಕೆ ಬರುತ್ತಾ? ಬೃಹತ್ ಕೈಗಾರಿಕೆ ಸಚಿವ ಕುಮಾರಸ್ವಾಮಿ ಹೇಳಿದ್ದಿದು

HD Kumaraswamy takes charge as new Steel and Heavy Industries minister: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವರಾಗಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾಗಿ ನಿನ್ನೆ ಜೂನ್ 11ರಂದು ಅಧಿಕಾರ ಸ್ವೀಕರಿಸಿದ್ದಾರೆ. ದೊಡ್ಡದೊಡ್ಡ ಕೈಗಾರಿಕೆಗಳ ವಿಚಾರವು ಈಗ ಕುಮಾರಸ್ವಾಮಿ ಅವರ ಸಚಿವಾಲಯದ ಸುಪರ್ದಿಗೆ ಬರುತ್ತದೆ. ಟೆಸ್ಲಾ ಫ್ಯಾಕ್ಟರಿ ಕರ್ನಾಟಕದಲ್ಲಿ ಸ್ಥಾಪನೆ ಆಗುವಂತೆ ಅವರು ಪ್ರಭಾವ ಬೀರುತ್ತಾರಾ ಎನ್ನುವ ಪ್ರಶ್ನೆ ಇದೆ. ತಾನು ಸ್ವಾರ್ಥಿ ಅಲ್ಲ, ಮಂತ್ರಿಯಾಗಿರುವುದು ಕರ್ನಾಟಕಕ್ಕೆ ಮಾತ್ರವಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಟೆಸ್ಲಾ ಕಂಪನಿ ಕರ್ನಾಟಕಕ್ಕೆ ಬರುತ್ತಾ? ಬೃಹತ್ ಕೈಗಾರಿಕೆ ಸಚಿವ ಕುಮಾರಸ್ವಾಮಿ ಹೇಳಿದ್ದಿದು
ಎಚ್ ಡಿ ಕುಮಾರಸ್ವಾಮಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 12, 2024 | 12:21 PM

Share

ನವದೆಹಲಿ, ಜೂನ್ 12: ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ದೊಡ್ಡ ದೊಡ್ಡ ಕೈಗಾರಿಕೆಗಳು ಕರ್ನಾಟಕದತ್ತ ಹೆಚ್ಚು ಒಲವು ತೋರಬಹುದು ಎನ್ನವ ಅನಿಸಿಕೆಗಳಿವೆ. ವಿಶ್ವದ ಪ್ರಮುಖ ಎಲೆಕ್ಟ್ರಿಕ್ ಕಾರ್ ಕಂಪನಿಯಾದ ಟೆಸ್ಲಾ ಕರ್ನಾಟಕದಲ್ಲಿ ಫ್ಯಾಕ್ಟರಿ (Tesla factory) ಸ್ಥಾಪನೆಗೆ ಮುಂದಾಗುತ್ತಾ ಪ್ರಭಾವ ಬೀರಲಿದ್ದಾರಾ ಕುಮಾರಸ್ವಾಮಿ? ಮಾಧ್ಯಮದವರ ಈ ಪ್ರಶ್ನೆಯನ್ನು ಎಚ್​​ಡಿಕೆ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ನಿನ್ನೆ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅವರು, ತಾನು ಸ್ವಾರ್ಥ ವ್ಯಕ್ತಿಯಲ್ಲ. ತಾನು ಸಚಿವರಾಗಿರುವುದು ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ನನ್ನ ಕಾಳಜಿ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಇಡೀ ದೇಶದ ಪ್ರಗತಿ ನನಗೆ ಮುಖ್ಯ. ಅದರ ಪ್ರಕಾರವಾಗಿ ನಾವು ಕೆಲಸ ಮಾಡುತ್ತೇವೆ. ನಾನು ಸ್ವಾರ್ಥ ವ್ಯಕ್ತಿ ಅಲಲ್. ದೇಶದ ಪ್ರಗತಿಗೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ,’ ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾದ ಕುಮಾರಸ್ವಾಮಿ ಹೇಳಿದ್ದಾರೆ.

ಇಲಾನ್ ಮಸ್ಕ್ ಅವರ ಟೆಸ್ಲಾ ಸಂಸ್ಥೆ ಭಾರತಕ್ಕೆ ಬರುವುದು ಇನ್ನೂ ಪೂರ್ಣವಾಗಿ ಖಾತ್ರಿಯಾಗಿಲ್ಲ. ಭಾರತದಲ್ಲಿ ಯಾವುದೇ ಕಾರು ಮಾರಾಟವಾಗಬೇಕಾದರೆ ಸ್ಥಳೀಯವಾಗಿ ಅದರ ಉತ್ಪಾದನೆ ಆಗಬೇಕು. ಆಮದು ಮಾಡಿಕೊಳ್ಳುವ ಕಾರುಗಳಿಗೆ ಭಾರೀ ಪ್ರಮಾಣದ ಆಮದು ಶುಲ್ಕ ವಿಧಿಸಲಾಗುತ್ತದೆ. ಅಮೆರಿಕ, ಚೀನಾದಲ್ಲಿ ಟೆಸ್ಲಾಗೆ ದೊಡ್ಡ ಮಾರುಕಟ್ಟೆ ಇದ್ದು, ಈಗ ಭಾರತದ ಮೇಲೆ ಇಲಾನ್ ಮಸ್ಕ್ ಕಣ್ಣಿಟ್ಟಿದ್ದಾರೆ. ಭಾರತದಲ್ಲಿ ಈಗೀಗ ಎಲೆಕ್ಟ್ರಿಕ್ ಕಾರು ಮಾರುಕಟ್ಟೆ ಬೆಳೆವಣಿಗೆ ಹೊಂದುತ್ತಿದೆ. ಮಾರುಕಟ್ಟೆಯಲ್ಲಿ ಹಿಡಿತ ಸಾಧಿಸಲು ಯಾವುದೇ ಎಲೆಕ್ಟ್ರಿಕ್ ಕಾರು ತಯಾರಕರಿಗೆ ಇದು ಸಕಾಲವಾಗಿದೆ.

ಇದನ್ನೂ ಓದಿ: ಕೇಂದ್ರದಲ್ಲಿ ಕುಮಾರಸ್ವಾಮಿ ಟೀಮ್​ನಲ್ಲಿರೋದು ಯಾರು? ಶೋಭಾ, ಸೋಮಣ್ಣಗೆ ಯಾರ ಅಡಿಯಲ್ಲಿ ಕೆಲಸ?

ಇಲಾನ್ ಮಸ್ಕ್ ಅವರು ಮುಂದಿನ ಕೆಲ ವರ್ಷದೊಳಗೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ತಯಾರಕಾ ಘಟಕ ಸ್ಥಾಪಿಸುವ ಸಾಧ್ಯತೆ ಇದೆ. ಟೆಸ್ಲಾದಿಂದ ಹೂಡಿಕೆ ಆಗುವುದು ಖಚಿತವಾದಲ್ಲಿ ಅಲ್ಲಿಯವರೆಗೆ ಕಾರು ಆಮದು ಶುಲ್ಕದಲ್ಲಿ ಒಂದಿಷ್ಟು ವಿನಾಯಿತಿಯನ್ನು ಕೊಡಲು ಸರ್ಕಾರ ಸಿದ್ಧ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:21 pm, Wed, 12 June 24

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ