AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ಮಹಿಳೆಗೆ ಮಾಸಿಕ 1,000 ರೂ ಧನಸಹಾಯ; ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ; ದೆಹಲಿ ಸರ್ಕಾರದ ಬಜೆಟ್ ಧಮಾಕ

Delhi budget 2024-25: ದೆಹಲಿಯ 18 ವರ್ಷ ಹಾಗೂ ಮೇಲ್ಪಟ್ಟ ವಯಸ್ಸಿನ ಎಲ್ಲಾ ಮಹಿಳೆಗೂ ತಿಂಗಳಿಗೆ 1,000 ರೂ ಸಹಾಯಧನ ಕೊಡುವುದಾಗಿ ದೆಹಲಿ ಬಜೆಟ್​ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ ಏಪ್ರಿಲ್ 1ರಿಂದ ಫಲಾನುಭವಿ ಮಹಿಳೆಯರಿಗೆ ಹಣ ರವಾನೆಯಾಗಲಿದೆ. ಹಣಕಾಸು ಸಚಿವೆ ಆತಿಶಿ ತಮ್ಮ ಚೊಚ್ಚಲ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ ನೀಡಿದ್ದಾರೆ.

Delhi: ಮಹಿಳೆಗೆ ಮಾಸಿಕ 1,000 ರೂ ಧನಸಹಾಯ; ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ; ದೆಹಲಿ ಸರ್ಕಾರದ ಬಜೆಟ್ ಧಮಾಕ
ದೆಹಲಿ ಹಣಕಾಸು ಸಚಿವೆ ಆತಿಶಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2024 | 3:23 PM

Share

ನವದೆಹಲಿ, ಮಾರ್ಚ್ 4: ದೆಹಲಿ ಸರ್ಕಾರ ಇವತ್ತು ಪ್ರಸ್ತುತಪಡಿಸಿದ ಬಜೆಟ್​ನಲ್ಲಿ ಶಿಕ್ಷಣ ಮತ್ತು ಮಹಿಳೆಯರ ಮೇಲೆ ಒತ್ತುಕೊಡಲಾಗಿದೆ. ಹಣಕಾಸು ಸಚಿವೆ ಆತಿಶಿ (Atishi) ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. 76,000 ಕೋಟಿ ರೂ ಗಾತ್ರದ ಬಜೆಟ್​ನಲ್ಲಿ ಶೇ. 21ಕ್ಕೂ ಹೆಚ್ಚು ಹಣವನ್ನು ಶಿಕ್ಷಣಕ್ಕೆ ನೀಡಲಾಗಿದೆ. ಇದರ ಜೊತೆಗೆ, ಬಜೆಟ್​ನಲ್ಲಿ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯನ್ನು (Mukhyamantri Mahila Samman Yojana) ಘೋಷಿಸಲಾಗಿದೆ. ಈ ಯೋಜನೆಯಲ್ಲಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ಮಹಿಳೆಯರಿಗೂ ತಿಂಗಳಿಗೆ 1,000 ರೂ ನೀಡಲಾಗುತ್ತದೆ. ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ.

‘ಕೇಜ್ರಿವಾಲ್ ಸರ್ಕಾರ 18 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನ ಪ್ರತಿಯೊಬ್ಬ ಮಹಿಳೆಗೂ ಮಾಸಿಕ 1,000 ರೂ ನೀಡುತ್ತದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಈ ಕೊಡುಗೆ ಸಿಗುತ್ತದೆ,’ ಎಂದು ಆತಿಶಿ ತಮ್ಮ ಚೊಚ್ಚಲ ಬಜೆಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ ಸುಪ್ರೀಂ

ಹಣಕಾಸು ಸಚಿವೆ ಆತಿಶಿ ತಮ್ಮ 76,000 ಕೋಟಿ ರೂ ದಾಖಲೆಯ ಬಜೆಟ್​ನಲ್ಲಿ 16,396 ಕೋಟಿ ರೂವನ್ನು ಶಿಕ್ಷಣ ವಲಯಕ್ಕೆ ಕೊಟ್ಟಿದ್ದಾರೆ. 8,685 ಕೋಟಿ ರೂ ಅನ್ನು ಆರೋಗ್ಯ ಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಕೇಜ್ರಿವಾಲ್ ಸರ್ಕಾರದ ಟ್ರೇಡ್ಮಾರ್ಕ್ ಎನಿಸಿರುವ ಮೊಹಲ್ಲಾ ಕ್ಲಿನಿಕ್​ಗಳಿಗೆ 212 ಕೋಟಿ ರೂ ಕೊಡಲಾಗಿದೆ.

ಮಹಿಳೆಯರಿಗೆ ಮಾಸಿಕ 1,000 ರೂ ನೀಡುವುದು ಈ ಬಾರಿಯ ಬಜೆಟ್​ನ ಮುಖ್ಯ ಅಂಶವಾಗಿದೆ. ಹಾಗೆಯೇ, ವಿದ್ಯುತ್ ಬಿಲ್ ಸಬ್ಸಿಡಿ ಮುಂದುವರಿಯುತ್ತಿದೆ. 2023ರಲ್ಲಿ 3.41 ಕೋಟಿ ಗ್ರಾಹಕರಿಗೆ ಶೂನ್ಯ ವಿದ್ಯುತ್ ಬಿಲ್ ನೀಡಲಾಗಿತ್ತು. ಅದು ಮುಂದುವರಿಯಲಿದೆ ಎಂದು ಆತಿಶಿ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಸರ್ಕಾರದ ಬಜೆಟ್ 2024-24

ಒಟ್ಟು ಬಜೆಟ್ ಗಾತ್ರ: 76,000 ಕೋಟಿ ರೂ

  • ಶಿಕ್ಷಣಕ್ಕೆ: 16,400 ಕೋಟಿ ರೂ
  • ಆರೋಗ್ಯ ಕ್ಷೇತ್ರ: 8,685 ಕೋಟಿ ರೂ
  • ದೆಹಲಿ ಜಲ ಮಂಡಳಿ: 7,195 ಕೋಟಿ ರೂ
  • ಸಾಮಾಜಿಕ ಕಲ್ಯಾಣ ಇಲಾಖೆ, ಎಸ್​ಸಿ ಎಸ್​ಟಿ ಒಬಿಸಿ ಕಲ್ಯಾಣ ಇಲಾಖೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳಿಗೆ 6,216 ಕೋಟಿ ರೂ ಕೊಡಲಾಗಿದೆ.
  • ಸಾರ್ವಜನಿಕ ಸಾರಿಗೆ: 5,702 ಕೋಟಿ ರೂ

ಇದನ್ನೂ ಓದಿ: ಉದ್ಯೋಗಿಗಳಿಗೆ ಸಂಬಳ ಕೊಡಲು ಹಣ ಇಲ್ಲ; ಫಂಡಿಂಗ್ ಪಡೆಯಲೂ ಬಿಡುತ್ತಿಲ್ಲ: ಹೂಡಿಕೆದಾರರ ಮೇಲೆ ಬೈಜುಸ್ ಮಾಲೀಕರ ಅಸಮಾಧಾನ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ದೆಹಲಿಯಲ್ಲಿ ಪ್ರಸ್ತುತಪಡಿಸಿರುವ 10ನೇ ಬಜೆಟ್ ಇದಾಗಿದೆ. 2014ಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಎರಡಕ್ಕೂ ಹೆಚ್ಚು ಪಟ್ಟು ಹೆಚ್ಚಾಗಿದೆ. ಮನೀಶ್ ಸಿಸೋಡಿಯಾ 7ಕ್ಕೂ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅಬಕಾರಿ ಅವ್ಯವಹಾರ ಪ್ರಕರಣದಲ್ಲಿ ಅವರು ಬಂಧಿತರಾಗಿ ಜೈಲಿನಲ್ಲಿರುವುದರಿಂದ ಕಳೆದ ವರ್ಷದ ಬಜೆಟ್ ಅನ್ನು ಕೈಲಾಶ್ ಗೆಹ್ಲೋಟ್ ಮಂಡಿಸಿದ್ದರು. ಈ ಬಾರಿ ಆತಿಶಿ ಅವರನ್ನು ಹಣಕಾಸು ಸಚಿವೆಯನ್ನಾಗಿ ಮಾಡಿದ್ದು, ಅವರಿಗೆ ಇದು ಮೊದಲ ಬಜೆಟ್ ಮಂಡನೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ