AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBM: ಆಫೀಸ್ ಸಮೀಪ ಮನೆ ಮಾಡಿ, ಇಲ್ಲ ಕೆಲಸ ಬಿಟ್ಟುಹೋಗಿ: ಮ್ಯಾನೇಜರ್​ಗಳಿಗೆ ನಿರ್ದೇಶನ ನೀಡಿದ ಐಬಿಎಂ

Work From Office, Or No Job: ವಾರದಲ್ಲಿ ಮೂರು ದಿನಗಳಾದರೂ ಸಮೀಪದ ಕಚೇರಿ ಅಥವಾ ಕ್ಲೈಂಟ್ ಸ್ಥಳಕ್ಕೆ ಹೋಗಿ ಕೆಲಸ ಮಾಡಬೇಕೆಂದು ಐಬಿಎಂ ಮ್ಯಾನೇಜರುಗಳಿಗೆ ಸೂಚನೆ ಹೋಗಿದೆ. ವರ್ಕ್ ಫ್ರಂ ಹೋಮ್​ನಲ್ಲಿರುವ ಮ್ಯಾನೇಜರುಗಳು ಕಚೇರಿಯ 80 ಕಿಮೀ ದೂರದೊಳಗಿನ ಪ್ರದೇಶಕ್ಕೆ ಸ್ಥಳಾಂತರ ಆಗಬೇಕೆಂದು ನಿರ್ದೇಶನ ನೀಡಲಾಗಿದೆ. ವರ್ಕ್ ಫ್ರಂ ಹೋಮ್ ಮಾಡುವ ಉದ್ಯೋಗಿಗಳಿಗೆ ಹೆಚ್ಚು ಬಡ್ತಿಯ ಅವಕಾಶ ಇರುವುದಿಲ್ಲ ಎಂದು ಐಬಿಎಂ ಸಿಇಒ ಅರವಿಂದ್ ಕೃಷ್ಣ ಇತ್ತೀಚೆಗೆ ಹೇಳಿದ್ದರು.

IBM: ಆಫೀಸ್ ಸಮೀಪ ಮನೆ ಮಾಡಿ, ಇಲ್ಲ ಕೆಲಸ ಬಿಟ್ಟುಹೋಗಿ: ಮ್ಯಾನೇಜರ್​ಗಳಿಗೆ ನಿರ್ದೇಶನ ನೀಡಿದ ಐಬಿಎಂ
ವರ್ಕ್ ಫ್ರಂ ಹೋಮ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 30, 2024 | 7:20 PM

Share

ವಾಷಿಂಗ್ಟನ್, ಜನವರಿ 30: ಕೋವಿಡ್ ಸಂದರ್ಭದಲ್ಲಿ ಶುರುವಾಗಿದ್ದ ವರ್ಕ್ ಫ್ರಂ ಹೋಮ್ (Work from Home) ಟ್ರೆಂಡ್ ಈಗಲೂ ಉಳಿದಿದೆ. ಬಹಳಷ್ಟು ಜನರು ಈಗಲೂ ಕಚೇರಿಗೆ ಹೋಗಿ ಕೆಲಸ ಮಾಡಲು ಒಪ್ಪುತ್ತಿಲ್ಲ. ಸಂಸ್ಥೆಗಳು ಸಾಮ, ದಾನ, ಭೇದದ ತಂತ್ರಗಳನ್ನು ಅನುರಿಸುತ್ತಿವೆ. ಅವಕ್ಕೂ ಕೆಲವರು ಜಗ್ಗುತ್ತಿಲ್ಲ. ಹೆಚ್ಚಿನ ಟೆಕ್ ಸಂಸ್ಥೆಗಳು ಹೈಬ್ರಿಡ್ ತಂತ್ರ ಅನುಸರಿಸುತ್ತಿವೆ. ವಾರದಲ್ಲಿ ಕೆಲ ದಿನ ಕಚೇರಿ, ಕೆಲ ದಿನ ಮನೆಯಲ್ಲಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಇದೀಗ ಐಬಿಎಂ ಸಂಸ್ಥೆ ತನ್ನ ಎಲ್ಲಾ ಮ್ಯಾನೇಜರುಗಳನ್ನು ಕಚೇರಿಗೆ ತರಲು ಪ್ರಯತ್ನಿಸುತ್ತಿದ್ದು, ಆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸಂದೇಶವೊಂದನ್ನು ನೀಡಿದೆ. ಮನೆಯಿಂದ ಕೆಲಸ ಮಾಡುತ್ತಿರುವ ಮ್ಯಾನೇಜರುಗಳು ಕಚೇರಿಗೆ ಬಂದು ಕೆಲಸ ಮಾಡಬೇಕು, ಇಲ್ಲ ಕಂಪನಿ ಬಿಟ್ಟು ಹೋಗಬೇಕು ಎಂದು ತಾಕೀತು ಮಾಡಿದೆ.

ಬ್ಲೂಮ್​ಬರ್ಗ್​ನಲ್ಲಿ ಪ್ರಕಟವಾಗಿರುವ ಈ ವರದಿ ಪ್ರಕಾರ ಜನವರಿ 16ರಂದು ಐಬಿಎಂ ಮೆಮೋರಾಂಡಂ ಬಿಡುಗಡೆ ಮಾಡಿದೆ. ಅಮೆರಿಕದಲ್ಲಿರುವ ಸಂಸ್ಥೆಯ ವಿವಿಧ ಮ್ಯಾನೇಜರುಗಳು ವಾರದಲ್ಲಿ ಮೂರು ದಿನಗಳಾದರೂ ಸಮೀಪದ ಕಚೇರಿ ಅಥವಾ ಕ್ಲೈಂಟ್ ಸ್ಥಳಕ್ಕೆ ಹೋಗಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ: eKYC: ಪಿಎಂ ಕಿಸಾನ್: ಜ. 31ರೊಳಗೆ ಇಕೆವೈಸಿ ಮಾಡದಿದ್ದರೆ ಸಿಗುವುದಿಲ್ಲ 16ನೇ ಕಂತಿನ ಹಣ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ

‘ಮುಖತಃ ಸಂವಹನಗಳಿಂದ ಹೆಚ್ಚು ಕ್ರಿಯಾಶೀಲರಾಗಬಹುದು, ಉತ್ಪನ್ನಶೀಲತೆ ಹೆಚ್ಚುತ್ತದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸಲಬಹುದು. ಈ ನಿಟ್ಟಿನಲ್ಲಿ ಕೆಲಸದ ವಾತಾವರಣ ನಿರ್ಮಿಸಲು ಐಬಿಎಂ ಗಮನ ಹರಿಸುತ್ತಿದೆ. ಇದೇ ಉದ್ದೇಶದಲ್ಲಿ ಅಮೆರಿಕದಲ್ಲಿರುವ ಎಕ್ಸಿಕ್ಯೂಟಿವ್​ಗಳು ಮತ್ತು ಮ್ಯಾನೇಜರುಗಳು ವಾರದಲ್ಲಿ ಮೂರು ದಿನವಾದರೂ ಕಚೇರಿಯಲ್ಲಿ ಇರುವ ಅಗತ್ಯ ಇದೆ,’ ಎಂದು ಐಬಿಎಂನ ವಕ್ತಾರರು ಹೇಳಿದ್ದಾರೆ.

ಈ ಸೂಚನೆ ಪ್ರಕಾರ, ಮನೆಯಿಂದ ಕೆಲಸ ಮಾಡುತ್ತಿರುವ ಐಬಿಎಂ ಮ್ಯಾನೇಜರುಗಳು ಕಚೇರಿಯ 80 ಕಿಮೀ ಒಳಗಿನ ದೂರದ ಸ್ಥಳಕ್ಕೆ ಮನೆ ಬದಲಾಯಿಸಿಕೊಳ್ಳಬೇಕು. ಇದರಿಂದ ಓಡಾಟಕ್ಕೆ ಅನುಕೂಲವಾಗುತ್ತದೆ. ಆರೋಗ್ಯ ಸಮಸ್ಯೆ ಇರುವವರು ಮತ್ತು ಮಿಲಿಟರಿ ಸೇವೆಯಲ್ಲಿರುವವರಿಗೆ ಈ ಆದೇಶದಿಂದ ವಿನಾಯಿತಿ ಕೊಡಲಾಗಿದೆ.

ಐಬಿಎಂ ಸಂಸ್ಥೆಗೆ ಭಾರತೀಯ ಮೂಲದ ಅರವಿಂದ್ ಕೃಷ್ಣ ಸಿಇಒ ಆಗಿದ್ದಾರೆ. ಕಳೆದ ವರ್ಷ ಅವರು ಬ್ಲೂಮ್​ಬರ್ಗ್​ಗೆ ನೀಡಿದ ಸಂದರ್ಶನವೊಂದರಲ್ಲಿ ವರ್ಕ್ ಫ್ರಂ ಹೋಮ್ ವಿಚಾರದಲ್ಲಿ ಕಠಿಣ ಮಾತುಗಳನ್ನು ಆಡಿದ್ದರು. ಕಚೇರಿಗೆ ಬಂದು ಕೆಲಸ ಮಾಡದ ಉದ್ಯೋಗಿಗಳಿಗೆ ಬಡ್ತಿ ಸಿಗುವ ಅವಕಾಶ ಕಡಿಮೆ ಇರುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Sin Tax: ಸಿನ್ ಟ್ಯಾಕ್ಸ್ ಇನ್ನಷ್ಟು ಹೆಚ್ಚಿಸುವಂತೆ ಮನವಿ; ಏನಿದು ಸಿನ್ ಟ್ಯಾಕ್ಸ್ ಅಥವಾ ಪಾಪ ತೆರಿಗೆ?

ಐಬಿಎಂ ಮಾತ್ರವಲ್ಲ, ಬಹುತೇಕ ಎಲ್ಲಾ ಕಂಪನಿಗಳೂ ರಿಮೋಟ್ ವರ್ಕಿಂಗ್ ಅನ್ನು ಸಾಧ್ಯವಾದಷ್ಟು ಕಡಿಮೆ ಮಾಡುತ್ತಿವೆ. ಟಿಸಿಎಸ್​ನಂತಹ ಕೆಲ ಐಟಿ ಕಂಪನಿಗಳಂತೂ ಎಲ್ಲಾ ಉದ್ಯೋಗಿಗಳೂ ಪೂರ್ಣವಾಗಿ ಕಚೇರಿ ಹಾಜರಾತಿ ತೋರಬೇಕೆಂದು ಸೂಚನೆ ನೀಡಿವೆ. ಕೋವಿಡ್ ಮುಂಚೆ ಇದ್ದ ಕೆಲಸದ ವಾತಾರಣ ತರುವ ಪ್ರಯತ್ನಗಳಾಗುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!