AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Bank: 2021ರಲ್ಲಿ ಭಾರತದ ಬೆಳವಣಿಗೆ ದರ ಶೇ 8.3ರಷ್ಟು ಅಂದಾಜು ಮಾಡಿದ ವಿಶ್ವಬ್ಯಾಂಕ್

ವಿಶ್ವ ಬ್ಯಾಂಕ್​ನಿಂದ ಮಂಗಳವಾರ ವರದಿ ಬಿಡುಗಡೆ ಆಗಿದ್ದು, 2021ನೇ ಸಾಲಿನಲ್ಲಿ ಬೆಳವಣಿಗೆ ದರ ಶೇ 8.3ರಷ್ಟು ಆಗಬಹುದು ಎಂದು ಅಂದಾಜಿಸಲಾಗಿದೆ.

World Bank: 2021ರಲ್ಲಿ ಭಾರತದ ಬೆಳವಣಿಗೆ ದರ ಶೇ 8.3ರಷ್ಟು ಅಂದಾಜು ಮಾಡಿದ ವಿಶ್ವಬ್ಯಾಂಕ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 09, 2021 | 12:48 PM

Share

ಕೊವಿಡ್- 19 ಎರಡನೇ ಅಲೆಯಿಂದಾಗಿ ದೊಡ್ಡ ಪೆಟ್ಟು ಬಿದ್ದಿರುವ ಹೊರತಾಗಿಯೂ 2021ನೇ ಇಸವಿಯಲ್ಲಿ ಶೇ 8.3 ಹಾಗೂ 2022ರಲ್ಲಿ ಶೇ 7.5ರಷ್ಟು ಭಾರತದ ಆರ್ಥಿಕತೆ ಬೆಳವಣಿಗೆ ಸಾಧಿಸುತ್ತದೆ ಎಂದು ವಿಶ್ವಬ್ಯಾಂಕ್ ಮಂಗಳವಾರ ಅಂದಾಜು ಮಾಡಿದೆ. ವಾಷಿಂಗ್ಟನ್ ಮೂಲದ ವಿಶ್ವಬ್ಯಾಂಕ್​ನಿಂದ ಜಾಗತಿಕ ಮಟ್ಟದ ಆರ್ಥಿಕ ಸ್ಥಿತಿಗತಿ ಅಂದಾಜಿನ ಬಗ್ಗೆ ಹೊಸ ವರದಿ ಬಿಡುಗಡೆ ಆಗಿದೆ. ಭಾರತದಲ್ಲಿ ಕೊರೊನಾ ಎರಡನೇ ಅಲೆಯು ಇದ್ದು, 2020-21ರ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ವೇಗವಾಗಿ, ಅದರಲ್ಲೂ ಸೇವಾ ವಲಯದಲ್ಲಿ ಅಂದುಕೊಂಡಿದ್ದಕ್ಕಿಂತ ಚೇತರಿಕೆ ತೀಕ್ಷ್ಣವಾಗಿದೆ ಎನ್ನಲಾಗಿದೆ. ಕೊರೊನಾ ಕಾಣಿಸಿಕೊಂಡ ಮೇಲೆ ಬೇರೆ ಯಾವುದೇ ದೇಶಕ್ಕಿಂತ ಅತಿ ದೊಡ್ಡ ಮಟ್ಟದಲ್ಲಿ ಆರ್ಥಿಕ ಚಟುವಟಿಕೆಗೆ ಪೆಟ್ಟು ತಿಂದಿರುವುದು ಭಾರತ ಎಂದು ವಿಶ್ವ ಬ್ಯಾಂಕ್ ಅಭಿಪ್ರಾಯ ಪಟ್ಟಿದೆ. 2020ರಲ್ಲಿ ಭಾರತದ ಆರ್ಥಿಕತೆ ಶೇ 7.3ರಷ್ಟು ಕುಗ್ಗಿರುವ ಅಂದಾಜಿದೆ. ಅದೇ 2019ರಲ್ಲಿ ಶೇ 4ರಷ್ಟು ಪ್ರಗತಿ ಕಂಡಿತ್ತು. 2023ರಲ್ಲಿ ಶೇ 6.5ರಷ್ಟು ಬೆಳವಣಿಗೆ ಸಾಧಿಸಬಹುದು ಎಂಬ ನಿರೀಕ್ಷೆ ಇದೆ.

ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ಹೇಳಿರುವಂತೆ, 80 ವರ್ಷಗಳಲ್ಲೇ ಪ್ರಬಲವಾದ ಆರ್ಥಿಕ ಕುಸಿತದ ನಂತರ 2021ರಲ್ಲಿ ಶೇ 5.6ರಷ್ಟು ವಿಸ್ತರಣೆ ಆಗುವ ಸಾಧ್ಯತೆ ಇದೆ. ಭಾರತದಲ್ಲಿ 2021- 22ನೇ ಸಾಲಿನ ಹಣಕಾಸು ವರ್ಷವು 2021ರ ಏಪ್ರಿಲ್​ನಿಂದ ಶುರುವಾಗಿದೆ. ಇದು ಶೇ 8.3ಕ್ಕೆ ವಿಸ್ತರಿಸುವ ಅಂದಾಜಿದೆ ಎಂದು ಬ್ಯಾಂಕ್ ಹೇಳಿದೆ. ಚಟುವಟಿಕೆಗಳು ನೀತಿಯ ಬೆಂಬಲದ ಅನುಕೂಲ ಪಡೆಯಲಿವೆ. ಅದರಲ್ಲಿ ಮೂಲಸೌಕರ್ಯ, ಗ್ರಾಮೀಣಾಭಿವೃದ್ಧಿ, ಆರೋಗ್ಯದ ಮೇಲಿನ ಹೆಚ್ಚಿನ ಖರ್ಚು ಮತ್ತು ನಿರೀಕ್ಷೆಗಿಂತ ಬಹಳ ವೇಗವಾಗಿ ಸೇವೆ ಹಾಗೂ ಉತ್ಪಾದನಾ ವಲಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದರಿಂದ ಸಹಾಯ ಆಗಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ಇನ್ನು ಅಮದಾಜನ್ನು ಶೇ 2.9ರಷ್ಟು ಏರಿಸಲಾಗಿದೆ. 2021ರ ಮಾರ್ಚ್​ನಿಂದ ಕೊವಿಡ್- 19 ನಿರ್ಬಂಧಗಳನ್ನು ಹೇರಿದ್ದರಿಂದ ಆರ್ಥಿಕತೆಯ ಮೇಲೆ ದೊಡ್ಡ ಮಟ್ಟದ ಹಾನಿಯ ಹೊರತಾಗಿಯೂ ಈ ಬೆಳವಣಿಗೆ ಆಗಿದೆ.

ವಿಶ್ವಬ್ಯಾಂಕ್ ಪ್ರಕಾರವಾಗಿ ಭಾರತದಲ್ಲಿ 2021-22ನೇ ಸಾಲಿನ ಬಜೆಟ್ ಮಹತ್ತರವಾದ ನೀತಿ ಬದಲಾವಣೆ ಆಗಿದೆ. ಸರ್ಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದ ವೆಚ್ಚವನ್ನು ದುಪ್ಪಟ್ಟು ನಿಗದಿ ಮಾಡಲಾಗಿದೆ. ಮಧ್ಯಮಾವಧಿಗೆ ಪರಿಷ್ಕೃತ ಹಣಕಾಸು ಹಾದಿಯನ್ನು ನಿಗದಿ ಮಾಡಲಾಗಿದೆ. ಇದಕ್ಕೂ ಮುನ್ನ ವಿಶ್ವ ಬ್ಯಾಂಕ್ 2021-22 ದೇಶದ ಜಿಡಿಪಿ ಬೆಳವಣಿಗೆ ಶೇ 7.5ರಿಂದ 12.5 ಆಗಬಹುದು ಎಂದು ಅಂದಾಜು ಮಾಡಿತ್ತು. ಭಾರತದಲ್ಲಿ ಮೇ ತಿಂಗಳಲ್ಲಿ ದಿನಕ್ಕೆ 3 ಲಕ್ಷಕ್ಕೆ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ವರದಿ ಆಗುತ್ತಿದ್ದವು. ತಿಂಗಳ ಮಧ್ಯ ಭಾಗದಲ್ಲಿ ಗರಿಷ್ಠ ಮಟ್ಟವಾದ 4,12,262 ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: India GDP Contraction: ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಜಿಡಿಪಿ ಐತಿಹಾಸಿಕ ಕುಸಿತ; ದೇಶದ ಮುಂದಿನ ಹಾದಿ ಏನು?

(World Bank expect 8.3% growth for 2021. Here is the details)

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!