AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Cut: ಆರ್ಥಿಕ ಹಿಂಜರಿತದ ಮುಂಜಾಗ್ರತೆಯಿಂದ ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಕಂಪೆನಿಯಲ್ಲಿ ಉದ್ಯೋಗ ಕಡಿತ

Microsoft Corporation: ವಿಶ್ವದ ಅತ್ಯಂತ ಮೌಲ್ಯಯುತ ಕಂಪೆನಿ ಮೈಕ್ರೋಸಾಫ್ಟ್​ನಿಂದ ಉದ್ಯೋಗ ಕಡಿತ ಮಾಡಲು ನಿರ್ಧರಿಸಲಾಗಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿದೆ.

Job Cut: ಆರ್ಥಿಕ ಹಿಂಜರಿತದ ಮುಂಜಾಗ್ರತೆಯಿಂದ ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಕಂಪೆನಿಯಲ್ಲಿ ಉದ್ಯೋಗ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 14, 2022 | 1:33 PM

Share

ಕನ್ಸಲ್ಟಿಂಗ್ ಮತ್ತು ಕಸ್ಟಮರ್ ಹಾಗೂ ಪಾರ್ಟನರ್ ಸಲ್ಯೂಷನ್ಸ್ ಸೇರಿದಂತೆ ವಿವಿಧ ಗುಂಪುಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಮೌಲ್ಯದ ದೃಷ್ಟಿಯಿಂದ ವಿಶ್ವದ ಮೂರನೇ ಅತಿ ದೊಡ್ಡ ಕಂಪೆನಿ ಮೈಕ್ರೋಸಾಫ್ಟ್ (Microsoft) ಮುಂದಾಗಿದೆ. ಇದು ಎಲ್ಲ ಭೌಗೋಳಿಕ ಭಾಗದಲ್ಲೂ ಹಬ್ಬಿದೆ. ಕಂಪೆನಿಯ ಒಟ್ಟು ಉದ್ಯೋಗಿಗಳ ಸಂಖ್ಯೆಯ ಪೈಕಿ ಶೇ 1ಕ್ಕಿಂತ ಕಡಿಮೆ ಉದ್ಯೋಗಿಗಳ ಮೇಲೆ ಇದರ ಪರಿಣಾಮ ಆಗಲಿದೆ ಎಂದು ಬ್ಲೂಮ್​ಬರ್ಗ್​ ವರದಿ ಮಾಡಿದೆ. ಜೂನ್ 30, 2022ಕ್ಕೆ ಕಂಪೆನಿಯ ಹಣಕಾಸು ವರ್ಷ ಕೊನೆಯಾದ ನಂತರದಲ್ಲಿ ಉದ್ಯಮ ಗುಂಪಿನ ಮರುಹೊಂದಿಕೆ ಹಾಗೂ ಜವಾಬ್ದಾರಿಗಳಲ್ಲಿನ ಬದಲಾವಣೆ ಮಾಡಿದ ಮೇಲೆ ಈ ನಡೆಯನ್ನು ಇಡಲಾಗಿದೆ. ವರದಿಯ ಪ್ರಕಾರ, ಮೈಕ್ರೋಸಾಫ್ಟ್​ನಿಂದ ಇತರ ಜವಾಬ್ದಾರಿಗಳಿಗೆ ನೇಮಕಾತಿ ಮಾಡಿಕೊಳ್ಳುವ ಯೋಜನೆ ಇದೆ. ಆದರೆ ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳೊಂದಿಗೆ ಸದ್ಯದ ಹಣಕಾಸು ವರ್ಷ ಪೂರ್ಣಗೊಳಿಸಲಿದೆ.

“ನಾವು ಇಂದು ಸಣ್ಣ ಪ್ರಮಾಣದ ಹುದ್ದೆಗಳ ತೆಗೆದುಹಾಕಿದ್ದೇವೆ. ಎಲ್ಲ ಕಂಪೆನಿಗಳಂತೆಯೇ ನಮ್ಮ ಉದ್ಯಮದ ಆದ್ಯತೆಯನ್ನು ನಿಯಮಿತವಾಗಿ ಮೌಲ್ಯಮಾಪನ ಮಾಡುತ್ತೇವೆ. ಅಗತ್ಯಕ್ಕೆ ಅನುಗುಣವಾಗಿ ರಚನಾತ್ಮಕ ಹೊಂದಾಣಿಕೆಯನ್ನು ಮಾಡುತ್ತೇವೆ. ನಮ್ಮ ಉದ್ಯಮದಲ್ಲಿನ ಹೂಡಿಕೆ ಮುಂದುವರಿಸುತ್ತೇವೆ ಮತ್ತು ಮುಂಬರುವ ವರ್ಷದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳವಾಗುತ್ತದೆ,” ಎಂದು ಮೈಕ್ರೋಸಾಫ್ಟ್​ನ ಇಮೇಲ್ ಹೇಳಿಕೆ ಉದಾಹರಿಸಿ, ಬ್ಲೂಮ್​ಬರ್ಗ್ ವರದಿ ಮಾಡಿದೆ.

ಮತ್ತೊಂದು ವರದಿ ಪ್ರಕಾರ, ಆಲ್ಫಾಬೆಟ್​ ಇಂಕ್​ನ ಗೂಗಲ್​ ವರ್ಷದ ಬಾಕಿ ಅವಧಿಗೆ ನೇಮಕಾತಿಯನ್ನು ನಿಧಾನ ಮಾಡುವುದಕ್ಕೆ ಯೋಜಿಸುತ್ತಿದೆ. ಸಂಭವನೀಯ ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದೆ, ಎಂದು ಸಿಇಒ ಸುಂದರ್​ ಪಿಚೈ ಈಚೆಗೆ ಇಮೇಲ್​ನಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅವರೇ ತಿಳಿಸಿರುವಂತೆ, ಎಂಜಿನಿಯರಿಂಗ್, ತಾಂತ್ರಿಕ ಮತ್ತು ಇತರ ಮುಖ್ಯ ಹುದ್ದೆಗಳ ನೇಮಕಾತಿಗೆ ಕಂಪೆನಿಯು 2022 ಮತ್ತು 2023ರಲ್ಲಿ ಕಂಪೆನಿಯು ಗಮನ ನೀಡುವುದು.

Published On - 1:26 pm, Thu, 14 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ