AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Cut: ಆರ್ಥಿಕ ಹಿಂಜರಿತದ ಮುಂಜಾಗ್ರತೆಯಿಂದ ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಕಂಪೆನಿಯಲ್ಲಿ ಉದ್ಯೋಗ ಕಡಿತ

Microsoft Corporation: ವಿಶ್ವದ ಅತ್ಯಂತ ಮೌಲ್ಯಯುತ ಕಂಪೆನಿ ಮೈಕ್ರೋಸಾಫ್ಟ್​ನಿಂದ ಉದ್ಯೋಗ ಕಡಿತ ಮಾಡಲು ನಿರ್ಧರಿಸಲಾಗಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿದೆ.

Job Cut: ಆರ್ಥಿಕ ಹಿಂಜರಿತದ ಮುಂಜಾಗ್ರತೆಯಿಂದ ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಕಂಪೆನಿಯಲ್ಲಿ ಉದ್ಯೋಗ ಕಡಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jul 14, 2022 | 1:33 PM

ಕನ್ಸಲ್ಟಿಂಗ್ ಮತ್ತು ಕಸ್ಟಮರ್ ಹಾಗೂ ಪಾರ್ಟನರ್ ಸಲ್ಯೂಷನ್ಸ್ ಸೇರಿದಂತೆ ವಿವಿಧ ಗುಂಪುಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಮೌಲ್ಯದ ದೃಷ್ಟಿಯಿಂದ ವಿಶ್ವದ ಮೂರನೇ ಅತಿ ದೊಡ್ಡ ಕಂಪೆನಿ ಮೈಕ್ರೋಸಾಫ್ಟ್ (Microsoft) ಮುಂದಾಗಿದೆ. ಇದು ಎಲ್ಲ ಭೌಗೋಳಿಕ ಭಾಗದಲ್ಲೂ ಹಬ್ಬಿದೆ. ಕಂಪೆನಿಯ ಒಟ್ಟು ಉದ್ಯೋಗಿಗಳ ಸಂಖ್ಯೆಯ ಪೈಕಿ ಶೇ 1ಕ್ಕಿಂತ ಕಡಿಮೆ ಉದ್ಯೋಗಿಗಳ ಮೇಲೆ ಇದರ ಪರಿಣಾಮ ಆಗಲಿದೆ ಎಂದು ಬ್ಲೂಮ್​ಬರ್ಗ್​ ವರದಿ ಮಾಡಿದೆ. ಜೂನ್ 30, 2022ಕ್ಕೆ ಕಂಪೆನಿಯ ಹಣಕಾಸು ವರ್ಷ ಕೊನೆಯಾದ ನಂತರದಲ್ಲಿ ಉದ್ಯಮ ಗುಂಪಿನ ಮರುಹೊಂದಿಕೆ ಹಾಗೂ ಜವಾಬ್ದಾರಿಗಳಲ್ಲಿನ ಬದಲಾವಣೆ ಮಾಡಿದ ಮೇಲೆ ಈ ನಡೆಯನ್ನು ಇಡಲಾಗಿದೆ. ವರದಿಯ ಪ್ರಕಾರ, ಮೈಕ್ರೋಸಾಫ್ಟ್​ನಿಂದ ಇತರ ಜವಾಬ್ದಾರಿಗಳಿಗೆ ನೇಮಕಾತಿ ಮಾಡಿಕೊಳ್ಳುವ ಯೋಜನೆ ಇದೆ. ಆದರೆ ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳೊಂದಿಗೆ ಸದ್ಯದ ಹಣಕಾಸು ವರ್ಷ ಪೂರ್ಣಗೊಳಿಸಲಿದೆ.

“ನಾವು ಇಂದು ಸಣ್ಣ ಪ್ರಮಾಣದ ಹುದ್ದೆಗಳ ತೆಗೆದುಹಾಕಿದ್ದೇವೆ. ಎಲ್ಲ ಕಂಪೆನಿಗಳಂತೆಯೇ ನಮ್ಮ ಉದ್ಯಮದ ಆದ್ಯತೆಯನ್ನು ನಿಯಮಿತವಾಗಿ ಮೌಲ್ಯಮಾಪನ ಮಾಡುತ್ತೇವೆ. ಅಗತ್ಯಕ್ಕೆ ಅನುಗುಣವಾಗಿ ರಚನಾತ್ಮಕ ಹೊಂದಾಣಿಕೆಯನ್ನು ಮಾಡುತ್ತೇವೆ. ನಮ್ಮ ಉದ್ಯಮದಲ್ಲಿನ ಹೂಡಿಕೆ ಮುಂದುವರಿಸುತ್ತೇವೆ ಮತ್ತು ಮುಂಬರುವ ವರ್ಷದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳವಾಗುತ್ತದೆ,” ಎಂದು ಮೈಕ್ರೋಸಾಫ್ಟ್​ನ ಇಮೇಲ್ ಹೇಳಿಕೆ ಉದಾಹರಿಸಿ, ಬ್ಲೂಮ್​ಬರ್ಗ್ ವರದಿ ಮಾಡಿದೆ.

ಮತ್ತೊಂದು ವರದಿ ಪ್ರಕಾರ, ಆಲ್ಫಾಬೆಟ್​ ಇಂಕ್​ನ ಗೂಗಲ್​ ವರ್ಷದ ಬಾಕಿ ಅವಧಿಗೆ ನೇಮಕಾತಿಯನ್ನು ನಿಧಾನ ಮಾಡುವುದಕ್ಕೆ ಯೋಜಿಸುತ್ತಿದೆ. ಸಂಭವನೀಯ ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದೆ, ಎಂದು ಸಿಇಒ ಸುಂದರ್​ ಪಿಚೈ ಈಚೆಗೆ ಇಮೇಲ್​ನಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅವರೇ ತಿಳಿಸಿರುವಂತೆ, ಎಂಜಿನಿಯರಿಂಗ್, ತಾಂತ್ರಿಕ ಮತ್ತು ಇತರ ಮುಖ್ಯ ಹುದ್ದೆಗಳ ನೇಮಕಾತಿಗೆ ಕಂಪೆನಿಯು 2022 ಮತ್ತು 2023ರಲ್ಲಿ ಕಂಪೆನಿಯು ಗಮನ ನೀಡುವುದು.

Published On - 1:26 pm, Thu, 14 July 22

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್