AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Cut: ಆರ್ಥಿಕ ಹಿಂಜರಿತದ ಮುಂಜಾಗ್ರತೆಯಿಂದ ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಕಂಪೆನಿಯಲ್ಲಿ ಉದ್ಯೋಗ ಕಡಿತ

Microsoft Corporation: ವಿಶ್ವದ ಅತ್ಯಂತ ಮೌಲ್ಯಯುತ ಕಂಪೆನಿ ಮೈಕ್ರೋಸಾಫ್ಟ್​ನಿಂದ ಉದ್ಯೋಗ ಕಡಿತ ಮಾಡಲು ನಿರ್ಧರಿಸಲಾಗಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿದೆ.

Job Cut: ಆರ್ಥಿಕ ಹಿಂಜರಿತದ ಮುಂಜಾಗ್ರತೆಯಿಂದ ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಕಂಪೆನಿಯಲ್ಲಿ ಉದ್ಯೋಗ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 14, 2022 | 1:33 PM

Share

ಕನ್ಸಲ್ಟಿಂಗ್ ಮತ್ತು ಕಸ್ಟಮರ್ ಹಾಗೂ ಪಾರ್ಟನರ್ ಸಲ್ಯೂಷನ್ಸ್ ಸೇರಿದಂತೆ ವಿವಿಧ ಗುಂಪುಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಮೌಲ್ಯದ ದೃಷ್ಟಿಯಿಂದ ವಿಶ್ವದ ಮೂರನೇ ಅತಿ ದೊಡ್ಡ ಕಂಪೆನಿ ಮೈಕ್ರೋಸಾಫ್ಟ್ (Microsoft) ಮುಂದಾಗಿದೆ. ಇದು ಎಲ್ಲ ಭೌಗೋಳಿಕ ಭಾಗದಲ್ಲೂ ಹಬ್ಬಿದೆ. ಕಂಪೆನಿಯ ಒಟ್ಟು ಉದ್ಯೋಗಿಗಳ ಸಂಖ್ಯೆಯ ಪೈಕಿ ಶೇ 1ಕ್ಕಿಂತ ಕಡಿಮೆ ಉದ್ಯೋಗಿಗಳ ಮೇಲೆ ಇದರ ಪರಿಣಾಮ ಆಗಲಿದೆ ಎಂದು ಬ್ಲೂಮ್​ಬರ್ಗ್​ ವರದಿ ಮಾಡಿದೆ. ಜೂನ್ 30, 2022ಕ್ಕೆ ಕಂಪೆನಿಯ ಹಣಕಾಸು ವರ್ಷ ಕೊನೆಯಾದ ನಂತರದಲ್ಲಿ ಉದ್ಯಮ ಗುಂಪಿನ ಮರುಹೊಂದಿಕೆ ಹಾಗೂ ಜವಾಬ್ದಾರಿಗಳಲ್ಲಿನ ಬದಲಾವಣೆ ಮಾಡಿದ ಮೇಲೆ ಈ ನಡೆಯನ್ನು ಇಡಲಾಗಿದೆ. ವರದಿಯ ಪ್ರಕಾರ, ಮೈಕ್ರೋಸಾಫ್ಟ್​ನಿಂದ ಇತರ ಜವಾಬ್ದಾರಿಗಳಿಗೆ ನೇಮಕಾತಿ ಮಾಡಿಕೊಳ್ಳುವ ಯೋಜನೆ ಇದೆ. ಆದರೆ ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳೊಂದಿಗೆ ಸದ್ಯದ ಹಣಕಾಸು ವರ್ಷ ಪೂರ್ಣಗೊಳಿಸಲಿದೆ.

“ನಾವು ಇಂದು ಸಣ್ಣ ಪ್ರಮಾಣದ ಹುದ್ದೆಗಳ ತೆಗೆದುಹಾಕಿದ್ದೇವೆ. ಎಲ್ಲ ಕಂಪೆನಿಗಳಂತೆಯೇ ನಮ್ಮ ಉದ್ಯಮದ ಆದ್ಯತೆಯನ್ನು ನಿಯಮಿತವಾಗಿ ಮೌಲ್ಯಮಾಪನ ಮಾಡುತ್ತೇವೆ. ಅಗತ್ಯಕ್ಕೆ ಅನುಗುಣವಾಗಿ ರಚನಾತ್ಮಕ ಹೊಂದಾಣಿಕೆಯನ್ನು ಮಾಡುತ್ತೇವೆ. ನಮ್ಮ ಉದ್ಯಮದಲ್ಲಿನ ಹೂಡಿಕೆ ಮುಂದುವರಿಸುತ್ತೇವೆ ಮತ್ತು ಮುಂಬರುವ ವರ್ಷದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳವಾಗುತ್ತದೆ,” ಎಂದು ಮೈಕ್ರೋಸಾಫ್ಟ್​ನ ಇಮೇಲ್ ಹೇಳಿಕೆ ಉದಾಹರಿಸಿ, ಬ್ಲೂಮ್​ಬರ್ಗ್ ವರದಿ ಮಾಡಿದೆ.

ಮತ್ತೊಂದು ವರದಿ ಪ್ರಕಾರ, ಆಲ್ಫಾಬೆಟ್​ ಇಂಕ್​ನ ಗೂಗಲ್​ ವರ್ಷದ ಬಾಕಿ ಅವಧಿಗೆ ನೇಮಕಾತಿಯನ್ನು ನಿಧಾನ ಮಾಡುವುದಕ್ಕೆ ಯೋಜಿಸುತ್ತಿದೆ. ಸಂಭವನೀಯ ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದೆ, ಎಂದು ಸಿಇಒ ಸುಂದರ್​ ಪಿಚೈ ಈಚೆಗೆ ಇಮೇಲ್​ನಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅವರೇ ತಿಳಿಸಿರುವಂತೆ, ಎಂಜಿನಿಯರಿಂಗ್, ತಾಂತ್ರಿಕ ಮತ್ತು ಇತರ ಮುಖ್ಯ ಹುದ್ದೆಗಳ ನೇಮಕಾತಿಗೆ ಕಂಪೆನಿಯು 2022 ಮತ್ತು 2023ರಲ್ಲಿ ಕಂಪೆನಿಯು ಗಮನ ನೀಡುವುದು.

Published On - 1:26 pm, Thu, 14 July 22

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ