Sign In

By signing in or creating an account, you agree with Associated Broadcasting Company's Terms & Conditions and Privacy Policy.

WPI Inflation: ಸಗಟು ಮಾರಾಟ ಹಣದುಬ್ಬರ ಸೊನ್ನೆಗಿಂತ ಮೇಲೆ; 8 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿಕೆ

Wholesale Price Index Inflation Rise in November: ಅಕ್ಟೋಬರ್​ನಲ್ಲಿ ಮೈನಸ್ 0.52 ಪ್ರತಿಶತದಷ್ಟಿದ್ದ ಸಗಟು ಬೆಲೆ ಆಧಾರಿತ ಹಣದುಬ್ಬರ ನವೆಂಬರ್​ನಲ್ಲಿ 0.26 ಪ್ರತಿಶತಕ್ಕೆ ಏರಿದೆ. ಡಬ್ಲ್ಯುಪಿಐ ಹಣದುಬ್ಬರ ಮಾರ್ಚ್​ನಿಂದಲೂ ಸೊನ್ನೆಗಿಂತ ಕಡಿಮೆ ಮಟ್ಟದಲ್ಲಿ ಇತ್ತು. ಈಗ ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಶೂನ್ಯದಿಂದ ಮೇಲಕ್ಕೆ ಬಂದಿದೆ. ಈರುಳ್ಳಿ, ಟೊಮೆಟೋ ಇತ್ಯಾದಿ ಆಹಾರವಸ್ತುಗಳ ಬೆಲೆ ಹೆಚ್ಚಳವಾಗಿದ್ದರಿಂದ ನವೆಂಬರ್​ನಲ್ಲಿ ಡಬ್ಲ್ಯುಪಿಐ ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗಿದೆ.

WPI Inflation: ಸಗಟು ಮಾರಾಟ ಹಣದುಬ್ಬರ ಸೊನ್ನೆಗಿಂತ ಮೇಲೆ; 8 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿಕೆ
ಹಣದುಬ್ಬರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 14, 2023 | 1:02 PM

ನವದೆಹಲಿ, ಡಿಸೆಂಬರ್ 14: ಭಾರತದ ಸಗಟು ಬೆಲೆ ಆಧಾರಿತ ಹಣದುಬ್ಬರವು (WPI Inflation rate) ಎಂಟು ತಿಂಗಳ ಬಳಿಕ ಮೊದಲ ಬಾರಿಗೆ ಸೊನ್ನೆಗಿಂತ ಮೇಲಿನ ಮಟ್ಟಕ್ಕೆ ಏರಿದೆ. ಸರ್ಕಾರ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ ನವೆಂಬರ್​ನಲ್ಲಿ ಡಬ್ಲ್ಯುಪಿಐ ಹಣದುಬ್ಬರ ಶೇ. 0.26ಕ್ಕೆ ಏರಿದೆ. ಅಕ್ಟೋಬರ್​ನಲ್ಲಿ ಮೈನಸ್ 0.52ರಷ್ಟಿತ್ತು ಡಬ್ಲ್ಯುಪಿಐ ಇನ್​ಫ್ಲೇಶನ್. ಒಂದು ತಿಂಗಳಲ್ಲಿ 78 ಬೇಸಿಸ್ ಅಂಕಗಳಷ್ಟು ಹಣದುಬ್ಬರ ಹೆಚ್ಚಿರುವುದು ವಿಶೇಷ. ಕಳೆದ ವರ್ಷದ ನವೆಂಬರ್​ಗೆ ಹೋಲಿಸಿದರೆ ಸಗಟು ಮಾರಾಟ ಬೆಲೆ ಹಣದುಬ್ಬರ ಬಹಳ ಕಡಿಮೆ ಇದೆ. 2022ರ ನವೆಂಬರ್​ನಲ್ಲಿ ಇದು ಶೇ. 6.12ರಷ್ಟಿತ್ತು.

ಇದೇ ವೇಳೆ, ದೇಶದ ಚಿಲ್ಲರೆ ಮಾರುಕಟ್ಟೆ ಆಧಾರಿತ ಹಣದುಬ್ಬರ ಅಥವಾ ರೀಟೇಲ್ ಇನ್​ಫ್ಲೇಷನ್ ನವೆಂಬರ್​ನಲ್ಲಿ ಗಣನೀಯವಾಗಿ ಹೆಚ್ಚಾಗಿ ಶೇ. 5.55ರಷ್ಟಿದೆ. ಮೂರು ತಿಂಗಳಲ್ಲೇ ಇದು ಗರಿಷ್ಠ ಮಟ್ಟವಾಗಿದೆ. ಅಕ್ಟೋಬರ್​ನಲ್ಲಿ ರೀಟೇಲ್ ಹಣದುಬ್ಬರ ಶೇ. 5ಕ್ಕಿಂತಲೂ ಕಡಿಮೆ ಇದೆ. ತರಕಾರಿ ಇತ್ಯಾದಿ ಆಹಾರವಸ್ತುಗಳ ಬೆಲೆ ಹೆಚ್ಚಳವು ಕಳೆದ ಮೂರು ತಿಂಗಳಿಂದ ಹಣದುಬ್ಬರ ಏರಿಕೆಗೆ ಕಾರಣವಾಗಿದೆ. ಅಂತೆಯೇ, ಸಗಟು ಹಣದುಬ್ಬರ ಹೆಚ್ಚಳಕ್ಕೂ ಆಹಾರವಸ್ತು ಬೆಲೆ ಹೆಚ್ಚಳವೇ ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: US Rates: ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಯಥಾಸ್ಥಿತಿ; ಮುಂದಿನ ವರ್ಷ ದರ ಇಳಿಸುವ ಸುಳಿವು ನೀಡಿದ ಫೆಡರಲ್ ರಿಸರ್ವ್

ನವೆಂಬರ್ ತಿಂಗಳಲ್ಲಿ ಸಗಟು ಮಾರುಕಟ್ಟೆಯಲ್ಲಿ ಆಹಾರ ವಸ್ತುಗಳ ಗುಂಪು ಶೇ. 1.9ರಷ್ಟು ಬೆಲೆ ಹೆಚ್ಚಳ ಕಂಡಿದೆ. ಅದರಲ್ಲೂ ತರಕಾರಿಗಳ ಬೆಲೆ ಅಕ್ಟೋಬರ್​ನದ್ದಕ್ಕಿಂತ ಶೇ. 16.5ರಷ್ಟು ಹೆಚ್ಚಾಗಿದೆ. ಈರುಳ್ಳಿಯಂತೂ ಶೇ. 41.3ರಷ್ಟು ಬೆಲೆ ಹೆಚ್ಚಿಸಿಕೊಂಡಿದೆ.

ಹಣದುಬ್ಬರ ನಿರ್ಧಾರ ಹೇಗೆ?

ಜನಸಾಮಾನ್ಯರು ಸಾಮಾನ್ಯವಾಗಿ ಬಳಸುವ ವಸ್ತುಗಳ ಬೆಲೆಯಲ್ಲಿನ ವ್ಯತ್ಯಾಸವನ್ನು ಪ್ರತಿನಿಧಿಸುತ್ತದೆ ಹಣದುಬ್ಬರ. ಹಣ್ಣು, ತರಕಾರಿ, ಬೇಳೆ ಕಾಳು ಇತ್ಯಾದಿ ಆಹಾರ ವಸ್ತುಗಳು, ಪೆಟ್ರೋಲ್ ಡೀಸೆಲ್, ಎಲೆಕ್ಟ್ರಾನಿಕ್ ಉತ್ಪನ್ನಗಳು ಹೀಗೆ ವಿವಿಧ ವಸ್ತುಗಳ ಬೆಲೆ ವ್ಯತ್ಯಾಸದ ಮೂಲಕ ಹಣದುಬ್ಬರವನ್ನು ಗುರುತಿಸಲಾಗುತ್ತದೆ. ತರಕಾರಿ, ಬೇಳೆ ಕಾಳು, ಪೆಟ್ರೋಲ್ ಇತ್ಯಾದಿ ಹೆಚ್ಚು ಬಳಕೆಯ ವಸ್ತುಗಳ ಬೆಲೆ ವ್ಯತ್ಯಯಕ್ಕೆ ಹೆಚ್ಚು ತೂಕ ಕೊಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ