AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಟೇಲ್ ಬಳಿಕ ಹೋಲ್​ಸೇಲ್ ಹಣದುಬ್ಬರ ಏರಿಕೆ ಸರದಿ; ಜೂನ್ ತಿಂಗಳಲ್ಲಿ ಶೇ. 3.4ರಷ್ಟು ಡಬ್ಲ್ಯುಪಿಐ ಇನ್​ಫ್ಲೇಶನ್

WPI Inflation in June 2024: ಹೋಲ್​ಸೇಲ್ ಮಾರಾಟ ಹಣದುಬ್ಬರ ಮೇ ತಿಂಗಳಲ್ಲಿ ಶೇ. 2.6ರಷ್ಟಿದ್ದದ್ದು ಜೂನ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ತಯಾರಿತ ಉತ್ಪನ್ನಗಳು ಮತ್ತು ಆಹಾರವಸ್ತುಗಳ ಹೋಲ್​ಸೇಲ್ ಬೆಲೆ ಏರಿಕೆಯು ಹಣದುಬ್ಬರ ಹೆಚ್ಚಳಕ್ಕೆ ಪ್ರಮುಖ ಕಾರಣ. ಕಳೆದ ವಾರಾಂತ್ಯದಲ್ಲಿ ಬಿಡುಗಡೆ ಆದ ದತ್ತಾಂಶದ ಪ್ರಕಾರ ರೀಟೇಲ್ ಹಣದುಬ್ಬರ ಶೇ. 5.08ಕ್ಕೆ ಏರಿದೆ.

ರೀಟೇಲ್ ಬಳಿಕ ಹೋಲ್​ಸೇಲ್ ಹಣದುಬ್ಬರ ಏರಿಕೆ ಸರದಿ; ಜೂನ್ ತಿಂಗಳಲ್ಲಿ ಶೇ. 3.4ರಷ್ಟು ಡಬ್ಲ್ಯುಪಿಐ ಇನ್​ಫ್ಲೇಶನ್
ಹಣದುಬ್ಬರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 15, 2024 | 3:20 PM

Share

ನವದೆಹಲಿ, ಜುಲೈ 15: ಸಗಟು ಮಾರಾಟ ದರ ಆಧಾರಿತ ಹಣದುಬ್ಬರ ಜೂನ್ ತಿಂಗಳಲ್ಲಿ ಶೇ. 3.4ರಷ್ಟಿದೆ. ಮೇ ತಿಂಗಳಲ್ಲಿ ಶೇ. 2.6ರಷ್ಟಿದ್ದ ಹೋಲ್​ಸೇಲ್ ದರದ ಹಣದುಬ್ಬರ ಈಗ 80 ಮೂಲಾಂಕಗಳಷ್ಟು ಏರಿಕೆ ಆಗಿದೆ. ಇಂದು ಸೋಮವಾರ ಸರ್ಕಾರ ದತ್ತಾಂಶ ಬಿಡುಗಡೆ ಮಾಡಿದ್ದು, ಅದರ ಪ್ರಕಾರ, ಆಹಾರ ಮತ್ತು ಉತ್ಪಾದಿತ ಉತ್ಪನ್ನಗಳ ಬೆಲೆ ಏರಿಕೆ ದರ ತೀವ್ರವಾಗಿ ಹೆಚ್ಚಳವಾಗಿದೆ. ಡಬ್ಲ್ಯುಪಿಐ ಹಣದುಬ್ಬರ ಅಥವಾ ಸಗಟು ಹಣದುಬ್ಬರದ ಈ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿರುವುದು ಸಗಟು ಆಹಾರ ಬೆಲೆ ಹಣದುಬ್ಬರವೇ. ಮೇ ತಿಂಗಳಲ್ಲಿ ಶೇ. 7.4ರಷ್ಟಿದ್ದ ಹೋಲ್​ಸೇಲ್ ಫೂಡ್ ಇನ್​ಫ್ಲೇಶನ್ ಈ ಜೂನ್ ತಿಂಗಳಲ್ಲಿ ಶೇ. 8.7ಕ್ಕೆ ಏರಿಕೆ. 1.3 ಪ್ರತಿಶತದಷ್ಟು ಹಣದುಬ್ಬರ ಏರಿಕೆ ಆಗಿರುವುದು ಕಂಡುಬಂದಿದೆ.

ಮತ್ತೊಂದು ವಿಶೇಷತೆ ಎಂದರೆ, ಕಳೆದ 16 ತಿಂಗಳಲ್ಲಿ ಇದೇ ಮೊದಲ ಬಾರಿಗೆ ತಯಾರಿತ ಉತ್ಪನ್ನಗಳಿಗೆ ಬೆಲೆ ಏರಿಕೆ ಬಿಸಿ ತಾಕಿದೆ. ಈ ಮ್ಯಾನುಫ್ಯಾಕ್ಚರ್ಡ್ ಪ್ರಾಡಕ್ಟ್​​ಗಳ ಹಣದುಬ್ಬರ 2023ರ ಫೆಬ್ರುವರಿಯಿಂದ ಒಂದಂಕಿಯ ಒಳಗೆಯೇ ಇತ್ತು. ಮೇನಲ್ಲಿ ಶೇ. 0.8ರಷ್ಟಿದ್ದ ಇದರ ಹಣದುಬ್ಬರ ಜೂನ್ ತಿಂಗಳಲ್ಲಿ ಶೇ. 1.43ಕ್ಕೆ ಏರಿದೆ. ಡಬ್ಲ್ಯುಪಿಐ ಇಂಡೆಕ್ಸ್​ನಲ್ಲಿ ಈ ತಯಾರಿತ ಉತ್ಪನ್ನಗಳ ಪಾಲು ಮೂರನೇ ಎರಡರಷ್ಟಿದೆ. ಇದೂ ಕೂಡ ಸಗಟು ಮಾರಾಟ ದರ ಸೂಚ್ಯಂಕ ಏರಲು ಇನ್ನೊಂದು ಪ್ರಮುಖ ಕಾರಣವಾಗಿದೆ.

ಒಟ್ಟಾರೆ ಡಬ್ಲ್ಯುಪಿಐ ಅಥವಾ ಸಗಟು ದರ ಹಣದುಬ್ಬರ ಜೂನ್ ತಿಂಗಳಲ್ಲಿ ಶೇ. 3.4ಕ್ಕೆ ಏರಿರುವುದು ಅನಿರೀಕ್ಷಿತವಲ್ಲ. ಇತ್ತೀಚೆಗೆ, ಹಣದುಬ್ಬರ ಸತತವಾಗಿ ಹೆಚ್ಚುತ್ತಾ ಬಂದಿದೆ. ರೀಟೇಲ್ ಹಣದುಬ್ಬರ ಕೂಡ ಜೂನ್ ತಿಂಗಳಲ್ಲಿ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಶೇ. 4.75ರಷ್ಟಿದ್ದ ರೀಟೇಲ್ ಇನ್​ಫ್ಲೇಶನ್ ಜೂನ್ ತಿಂಗಳಲ್ಲಿ ಶೇ. 5.08ಕ್ಕೆ ಏರಿದೆ. ಹಣ್ಣು ತರಕಾರಿ, ಬೇಳೆ ಕಾಳು ಇತ್ಯಾದಿ ಆಹಾರವಸ್ತುಗಳ ಹಣದುಬ್ಬರವು ಚಿಲ್ಲರೆ ಮಾರಾಟ ದರ ಆಧಾರಿತ ಹಣದುಬ್ಬರವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಜೂನ್ ತಿಂಗಳಲ್ಲಿ ಹಣದುಬ್ಬರ ಶೇ. 5.08; ತರಕಾರಿ ಬೆಲೆ ಏರಿಕೆ ಪ್ರಮುಖ ಕಾರಣ

ಸಗಟು ಹಣದುಬ್ಬರದ ಏರಿಕೆಗೂ ಆಹಾರವಸ್ತು ಬೆಲೆ ಏರಿಕೆಯೇ ಪ್ರಮುಖ ಕಾರಣ. ಇನ್ನು, ಮ್ಯಾನುಫ್ಯಾಕ್ಚರಿಂಗ್ ಉದ್ಯಮದಲ್ಲಿನ ಉತ್ಪನ್ನಗಳ ಹೋಲ್​ಸೇಲ್ ದರದಲ್ಲಿ ಏರಿಕೆ ಆಗಿರುವುದು ಕಾರ್ಪೊರೇಟ್ ಲಾಭದ ಮಾರ್ಜಿನ್ ಅನ್ನು ಕಡಿಮೆ ಮಾಡಬಹುದು ಎನ್ನುವ ಅಂಶವನ್ನು ತಜ್ಞರು ಎತ್ತಿ ತೋರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ