AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Xiaomi Electric Cars: 2024ರ ಪ್ರಥಮಾರ್ಧದಲ್ಲಿ ಶಿಯೋಮಿಯಿಂದ ಸ್ವಂತ ಎಲೆಕ್ಟ್ರಿಕ್ ಕಾರು ಉತ್ಪಾದನೆ ಘೋಷಣೆ

ಚೀನಾದ ಮೊಬೈಲ್ ಫೋನ್ ತಯಾರಿಕೆ ಕಂಪೆನಿ ಶಿಯೋಮಿಯಿಂದ 2024ರ ಪ್ರಥಮಾರ್ಧದಲ್ಲಿ ಎಲೆಕ್ಟ್ರಿಕ್ ಕಾರು ತಯಾರು ಮಾಡಲಾಗುವುದು ಎಂದು ತಿಳಿಸಲಾಗಿದೆ. ಆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Xiaomi Electric Cars: 2024ರ ಪ್ರಥಮಾರ್ಧದಲ್ಲಿ ಶಿಯೋಮಿಯಿಂದ ಸ್ವಂತ ಎಲೆಕ್ಟ್ರಿಕ್ ಕಾರು ಉತ್ಪಾದನೆ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 20, 2021 | 5:44 PM

Share

2024ರ ಪ್ರಥಮಾರ್ಧದಲ್ಲಿ ಶಿಯೋಮಿಯು ತನ್ನದೇ ಸ್ವಂತ ಕಾರಿನ ಉತ್ಪಾದನೆಯನ್ನು ಸಾಮೂಹಿಕವಾಗಿ ಆರಂಭಿಸಲಿದೆ ಎಂದು ಚೀನೀ ಸ್ಮಾರ್ಟ್​ಫೋನ್ ತಯಾರಕ ಕಂಪೆನಿಯ ಮುಖ್ಯಾಧಿಕಾರಿ ಲೈ ಜುನ್ ಹೇಳಿರುವುದಾಗಿದೆ ಕಂಪೆನಿಯ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ಹೂಡಿಕೆದಾರರ ಕಾರ್ಯಕ್ರಮದಲ್ಲಿ ಈಹೇಳಿಕೆ ಬಂದಿದೆ. ಮೊದಲಿಗೆ ಸ್ಥಳೀಯ ಮಾಧ್ಯಮದಲ್ಲಿ ಇದು ವರದಿ ಆಗಿದ್ದು, ಆ ನಂತರ ಕಂಪೆನಿಯಿಂದ ಖಾತ್ರಿ ಪಡಿಸಲಾಗಿದೆ. ಈ ಸುದ್ದಿಯನ್ನು ಶಿಯೋಮಿಯ ಅಂತರರಾಷ್ಟ್ರೀಯ ಮಾರುಕಟ್ಟೆ ವಿಭಾಗದ ನಿರ್ದೇಶಕ ಝಾಂಗ್ ಝಿಯುನ್ ದೃಢೀಕೃತ ವೈಬೋ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕಂಪೆನಿಯ ಮುಂದಿನ ಪ್ರಮುಖ ಗುರಿಯಾದ ಎಲೆಕ್ಟ್ರಿಕ್ ವಾಹನ (EV) ವಿಭಾಗಗಳ ಬಗ್ಗೆ ತಿಳಿಸಿದ್ದು, ಈ ವರ್ಷದ ಆರಂಭದಲ್ಲಿ ಶಿಯೋಮಿಯಿಂದ ಅಧಿಕೃತವಾಗಿಯೇ ಘೋಷಣೆ ಮಾಡಲಾಗಿದೆ. ಮೇ 12ರ ನಂತರ ದೊಡ್ಡ ಹೆಚ್ಚಳ ಎಂಬಂತೆ, ಶಿಯೋಮಿ ಷೇರು ಶೇ 5.4ರಷ್ಟು ಏರಿಕೆ ಕಂಡು HKD 22.50 (ಅಂದಾಜು ರೂ. 220) ತಲುಪಿದೆ. ಹೀಗೆ ಸತತ ಮೂರನೇ ಸೆಷನ್ ಹೆಚ್ಚಳವನ್ನು ದಾಖಲಿಸಿದೆ. ಈ ವರ್ಷದ ಮಾರ್ಚ್​ನಲ್ಲಿ ಹೇಳಿಕೆ ನೀಡಿದ್ದ ಶಿಯೋಮಿ, ಹೊಸ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಮುಂದಿನ ಹತ್ತು ವರ್ಷದಲ್ಲಿ 1000 ಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡುವುದಾಗಿ ಹೇಳಿತ್ತು.

ಆಗಸ್ಟ್​ ತಿಂಗಳಲ್ಲಿ ಕಂಪೆನಿಯು ಎಲೆಕ್ಟ್ರಿಕ್ ವಾಹನ ಘಟಕ ಉದ್ಯಮದ ನೋಂದಣಿಯನ್ನು ಪೂರ್ಣಗೊಳಿಸಿದೆ. ಈ ಘಟಕದ ಸಲುವಾಗಿಯೇ ನೇಮಕಾತಿ ಪ್ರಕ್ರಿಯೆಯನ್ನು ಕಂಪೆನಿಯು ವೇಗಗೊಳಿಸಿದೆ. ಸ್ವತಂತ್ರವಾಗಿಯೇ ಎಲೆಕ್ಟ್ರಿಕ್ ಕಾರು ಉತ್ಪಾದನೆ ಮಾಡಲಾಗುತ್ತದೆಯೇ ಅಥವಾ ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಕಂಪೆನಿಯ ಸಹಯೋಗದೊಂದಿಗೆ ಉತ್ಪಾದಿಸಲಾಗುತ್ತದೆಯೇ ಎಂಬ ಬಗ್ಗೆ ಶಿಯೋಮಿ ಮಾಹಿತಿ ನೀಡಬೇಕಿದೆ.

ಇದನ್ನೂ ಓದಿ: Xiaomi: ಆಪಲ್ ಕಂಪೆನಿಯನ್ನು ಪಕ್ಕಕ್ಕೆ ಸರಿಸಿ ವಿಶ್ವದ ಎರಡನೇ ಅತಿ ದೊಡ್ಡ ಸ್ವಾರ್ಟ್​ಫೋನ್ ತಯಾರಕ ಆದ ಶಿಯೋಮಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ